ಕಲಬುರಗಿ: ಪತ್ನಿಯನ್ನು ಮನೆಗೆ ಬರಲು ಕೇಳಿದ್ದಕ್ಕೆ ಆಕೆಯ ಸಹೋದರ ಗಲಾಟೆ ಮಾಡಿ ಭಾವನಿಗೆ ಚಾಕು ಇರಿದ ಘಟನೆ ಕಲಬುರಗಿ ಜಿಲ್ಲೆಯ ಗಾಜಿಪುರ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಭಾವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆನಂದ್ ಎಂಬ ಯುವಕ ತನ್ನ ಪತ್ನಿ ಸ್ನೇಹಾ ಅವರನ್ನು ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಆದರೆ ಮದುವೆಯ ನಂತರ ದಾಂಪತ್ಯದಲ್ಲಿ ಬಿರುಕು ಬಿದ್ದು ಸ್ನೇಹಾ ತಾಯಿ ಮನೆಗೆ ಮರಳಿದ್ದಳು. ಇತ್ತೀಚೆಗೆ ಆನಂದ್ ತಮ್ಮ ಅಣ್ಣನ ಮದುವೆ ನಿಮಿತ್ತ ಪತ್ನಿಯನ್ನು ಮನೆಗೆ ಆಹ್ವಾನಿಸಿದ್ದ.
ಈ ಬಗ್ಗೆ ಸ್ನೇಹಾ ಸಹೋದರ ಟೋನಿ ಆಕ್ರೋಶ ವ್ಯಕ್ತಪಡಿಸಿ, ತನ್ನ ಸ್ನೇಹಿತರೊಂದಿಗೆ ಸೇರಿ ಆನಂದ್ ಮೇಲಗೆ ಹಲ್ಲೆ ನಡೆಸಿದ್ದಾನೆ. ಚಾಕುವಿನಿಂದ ಇರಿತದಿಂದ ಆನಂದ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ತನಿಖೆ ಆರಂಭಿಸಲಾಗಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…