Categories: CrimeLatest

‘ಹೊಸ ಕಾರು ಕೊಡಿಸುತ್ತೇನೆ’ ಎಂಬ ನೆಪ… ಬಾಮೈದನಿಂದ ಬಾವನ ಬರ್ಬರ ಹತ್ಯೆ!

ಬೆಂಗಳೂರು: ಹೊಸ ಕಾರು ಕೊಡಿಸುತ್ತೇನೆ ಎಂದು ನಂಬಿಸಿ ಆಂಧ್ರಪ್ರದೇಶಕ್ಕೆ ಕರೆಸಿಕೊಂಡ ಬಾಮೈದನೇ ತನ್ನ ಸ್ವಂತ ಅಕ್ಕನ ಗಂಡನನ್ನು ಬರ್ಬರವಾಗಿ ಹತ್ಯೆ ಮಾಡಿದ ಶಾಕ್ ಘಟನೆ ಬೆಳಕಿಗೆ ಬಂದಿದೆ. ಮದುವೆಯಾಗಿ ಕೇವಲ 11 ತಿಂಗಳಷ್ಟೇ ಕಳೆದಿದ್ದ ವಿನಯ್ ಕುಮಾರ್ (30) ಈ ದಾರುಣ ಹತ್ಯೆಗೆ ಬಲಿಯಾದವರು.

ಚಿಕ್ಕಬಾಣವಾರದಲ್ಲಿ ವಾಸವಾಗಿದ್ದ ವಿನಯ್ ಕುಮಾರ್ ಖಾಸಗಿ ಕಂಪನಿಯೊಂದನ್ನು ನಡೆಸುತ್ತಿದ್ದರು. ಅವರು ಸುಮಾರು 11 ತಿಂಗಳ ಹಿಂದೆ ಮೇಘನಾ ಎಂಬುವವರೊಂದಿಗೆ ಮನೆಯವರ ಸಮ್ಮತಿಯ ಮೇರೆಗೆ ಮದುವೆಯಾಗಿದ್ದರು. ದಂಪತಿಗಳ ಜೀವನ ಸುಗಮವಾಗಿ ಸಾಗುತ್ತಿದ್ದರೂ, ಕೆಲ ಸಮಯದ ಹಿಂದೆ ಪತ್ನಿಯ ಅಣ್ಣ ರಾಜು ಜೊತೆ ಸಣ್ಣಪುಟ್ಟ ವಿಷಯಕ್ಕೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಈ ವೇಳೆ ವಿನಯ್ ರಾಜುವನ್ನು ಬೈದಿದ್ದರಿಂದ ಮನಸ್ಸಿನಲ್ಲಿ ದ್ವೇಷ ಬೆಳೆದಿದ್ದು, ಸೇಡು ತೀರಿಸಿಕೊಳ್ಳಲು ರಾಜು ಸಂಚು ರೂಪಿಸಿದ್ದನು.

ವಿನಯ್ ಹೊಸ ಕಾರು ಖರೀದಿಸಲು ಯೋಚಿಸುತ್ತಿದ್ದ ಸಂದರ್ಭದಲ್ಲೇ, ಪತ್ನಿ ಮೇಘನಾ ‘ನಮ್ಮ ಅಣ್ಣ ಹಣ ಸಹಾಯ ಮಾಡುತ್ತಾನೆ, ಅವನ ಬಳಿ ಹೋಗಿ ಹಣ ತೆಗೆದುಕೊಂಡು ಬಾ’ ಎಂದು ಹೇಳಿದ್ದಾಳೆ. ಪತ್ನಿಯ ಮಾತನ್ನು ನಂಬಿದ ವಿನಯ್, ತನ್ನ ಸ್ನೇಹಿತನ ‘ಹಿಮಾಲಯನ್’ ಬೈಕ್ ಪಡೆದುಕೊಂಡು ಆಂಧ್ರಪ್ರದೇಶದ ಲೇಪಾಕ್ಷಿಗೆ ತೆರಳಿದ್ದರು.

ಆದರೆ ಲೇಪಾಕ್ಷಿಗೆ ತೆರಳಿದ ಬಳಿಕ ವಿನಯ್ ಎರಡು ದಿನಗಳಾದರೂ ಮನೆಗೆ ವಾಪಸ್ ಬಾರದಿದ್ದು, ಮೊಬೈಲ್ ಕೂಡ ಸ್ವಿಚ್ ಆಫ್ ಆಗಿತ್ತು. ಇದರಿಂದ ಆತಂಕಗೊಂಡ ಕುಟುಂಬಸ್ಥರು ಲೇಪಾಕ್ಷಿಗೆ ತೆರಳಿ ಹುಡುಕಾಟ ಆರಂಭಿಸಿದರು. ವಿನಯ್ ಬಳಸಿದ್ದ ಬೈಕ್‌ಗೆ ಜಿಪಿಎಸ್ ಅಳವಡಿಸಲಾಗಿದ್ದರಿಂದ ಅದರ ಸಹಾಯದಿಂದ ಹುಡುಕಾಟ ನಡೆಸಿದಾಗ ಬೈಕ್ ಪತ್ತೆಯಾಯಿತು. ಬೈಕ್ ಬಿದ್ದಿದ್ದ ಸ್ಥಳದಿಂದ ಸುಮಾರು 100 ಮೀಟರ್ ದೂರದಲ್ಲಿ ವಿನಯ್ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿ ರಾಜು ಬ್ಯಾಟ್ ಹಾಗೂ ಕಬ್ಬಿಣದ ರಾಡ್ ಬಳಸಿ ವಿನಯ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಕೊಲೆ ಬಳಿಕ ಪರಾರಿಯಾಗಿದ್ದ ರಾಜುವನ್ನು ಲೇಪಾಕ್ಷಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಈ ಹತ್ಯೆಯಲ್ಲಿ ಪತ್ನಿಯ ಪಾತ್ರವಿದೆಯೇ ಎಂಬ ಅನುಮಾನದಲ್ಲೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪತ್ನಿಯ ಅಣ್ಣನನ್ನು ನಂಬಿ ತೆರಳಿದ ವ್ಯಕ್ತಿ ಶವವಾಗಿ ಮರಳಿರುವುದು ಕುಟುಂಬಸ್ಥರ ನೋವನ್ನು ಮತ್ತಷ್ಟು ಗಾಢಗೊಳಿಸಿದೆ.

ಭ್ರಷ್ಟರ ಬೇಟೆ

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

5 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

5 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

5 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

5 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago