ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ಘಟನೆ ನಡೆದಿದ್ದು, ವಿವಾಹಿತ ಮಹಿಳೆಯೊಂದಿಗೆ ಮಾತನಾಡಿದ ಯುವಕನನ್ನು ಕೆಲವರು ಹಾಡಹಗಲೇ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಯುವಕನನ್ನು ಮುಜಾಫರ್ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮುಜಾಫರ್ನನ್ನು ಇದೀಗ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ವಿವರ:
ಕಸಬಾ ಪೇಟೆ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಟಿಪ್ಪು ನಗರದಲ್ಲಿ ಮುಜಾಫರ್ ತನ್ನ ಮೊಬೈಲ್ ಮೂಲಕ ವಿವಾಹಿತ ಮಹಿಳೆಯೊಂದಿಗೇ ಮಾತನಾಡುತ್ತಿದ್ದನು. ಈ ವಿಚಾರ ಮಹಿಳೆಯ ಕುಟುಂಬಸ್ಥರಿಗೆ ತಿಳಿದ ನಂತರ, ಅವರು ಮುಜಾಫರ್ನ್ನು ಕಿಡ್ನಾಪ್ ಮಾಡಿ ಹಿಗ್ಗಾಮುಗ್ಗ ಥಳಿಸಿದರು.
ಹಲ್ಲೆದಾರರು ಮುಜಾಫರ್ನ ಬಟ್ಟೆ ಬಿಚ್ಚಿಸಿ, ಬ್ಲೇಡ್ ಬಳಸಿ ಅವನ ದೇಹದಲ್ಲಿ ಗಾಯಗಳನ್ನು ಮಾಡಿದ್ದಾರೆ. ನಂತರ, ಬೆತ್ತಲೆಯಾಗಿ ಅವನನ್ನು ಮನೆಗೆ ಬಿಟ್ಟಿದ್ದಾರೆ.
ಹಲ್ಲೆಗೆ ಭಾಗಿಯಾದವರು:
ಈ ಹಲ್ಲೆಯಲ್ಲಿ ಸುಮಾರು 15 ಜನರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ಮೊಹಮ್ಮದ್, ಮಾಬುಲಿ, ಮಲೀಕ್, ಮೈನು ಶಗರಿ, ನದೀಮ್, ಸಮೀರ್ ಸೇರಿ ಇತರ ಹಲವರನ್ನು ಪೊಲೀಸರು ಗುರುತಿಸಿದ್ದಾರೆ.
ಈ ಘಟನೆ ಹುಬ್ಬಳ್ಳಿಯ ಕಸಬಾ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿಸಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…