Crime

ವಿವಾಹಿತ ಮಹಿಳೆಯೊಂದಿಗೆ ಮಾತನಾಡಿದ್ದಕ್ಕೆ ಹುಬ್ಬಳ್ಳಿಯಲ್ಲಿ ಕ್ರೂರ ಕೃತ್ಯ: ಯುವಕನಿಗೆ ಬೆತ್ತಲೆಗೊಳಿಸಿ ಮರಣಾಂತಿಕ ಹಲ್ಲೆ.

ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ಘಟನೆ ನಡೆದಿದ್ದು, ವಿವಾಹಿತ ಮಹಿಳೆಯೊಂದಿಗೆ ಮಾತನಾಡಿದ ಯುವಕನನ್ನು ಕೆಲವರು ಹಾಡಹಗಲೇ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಯುವಕನನ್ನು ಮುಜಾಫರ್ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮುಜಾಫರ್‌ನನ್ನು ಇದೀಗ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ:
ಕಸಬಾ ಪೇಟೆ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಟಿಪ್ಪು ನಗರದಲ್ಲಿ ಮುಜಾಫರ್ ತನ್ನ ಮೊಬೈಲ್ ಮೂಲಕ ವಿವಾಹಿತ ಮಹಿಳೆಯೊಂದಿಗೇ ಮಾತನಾಡುತ್ತಿದ್ದನು. ಈ ವಿಚಾರ ಮಹಿಳೆಯ ಕುಟುಂಬಸ್ಥರಿಗೆ ತಿಳಿದ ನಂತರ, ಅವರು ಮುಜಾಫರ್‌ನ್ನು ಕಿಡ್ನಾಪ್ ಮಾಡಿ ಹಿಗ್ಗಾಮುಗ್ಗ ಥಳಿಸಿದರು.

ಹಲ್ಲೆದಾರರು ಮುಜಾಫರ್‌ನ ಬಟ್ಟೆ ಬಿಚ್ಚಿಸಿ, ಬ್ಲೇಡ್ ಬಳಸಿ ಅವನ ದೇಹದಲ್ಲಿ ಗಾಯಗಳನ್ನು ಮಾಡಿದ್ದಾರೆ. ನಂತರ, ಬೆತ್ತಲೆಯಾಗಿ ಅವನನ್ನು ಮನೆಗೆ ಬಿಟ್ಟಿದ್ದಾರೆ.

ಹಲ್ಲೆಗೆ ಭಾಗಿಯಾದವರು:
ಈ ಹಲ್ಲೆಯಲ್ಲಿ ಸುಮಾರು 15 ಜನರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ಮೊಹಮ್ಮದ್, ಮಾಬುಲಿ, ಮಲೀಕ್, ಮೈನು ಶಗರಿ, ನದೀಮ್, ಸಮೀರ್ ಸೇರಿ ಇತರ ಹಲವರನ್ನು ಪೊಲೀಸರು ಗುರುತಿಸಿದ್ದಾರೆ.

ಈ ಘಟನೆ ಹುಬ್ಬಳ್ಳಿಯ ಕಸಬಾ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿಸಿದೆ.

nazeer ahamad

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

2 hours ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

2 hours ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

21 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

1 day ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

1 day ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

1 day ago