ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ಘಟನೆ ನಡೆದಿದ್ದು, ವಿವಾಹಿತ ಮಹಿಳೆಯೊಂದಿಗೆ ಮಾತನಾಡಿದ ಯುವಕನನ್ನು ಕೆಲವರು ಹಾಡಹಗಲೇ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಯುವಕನನ್ನು ಮುಜಾಫರ್ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮುಜಾಫರ್ನನ್ನು ಇದೀಗ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ವಿವರ:
ಕಸಬಾ ಪೇಟೆ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಟಿಪ್ಪು ನಗರದಲ್ಲಿ ಮುಜಾಫರ್ ತನ್ನ ಮೊಬೈಲ್ ಮೂಲಕ ವಿವಾಹಿತ ಮಹಿಳೆಯೊಂದಿಗೇ ಮಾತನಾಡುತ್ತಿದ್ದನು. ಈ ವಿಚಾರ ಮಹಿಳೆಯ ಕುಟುಂಬಸ್ಥರಿಗೆ ತಿಳಿದ ನಂತರ, ಅವರು ಮುಜಾಫರ್ನ್ನು ಕಿಡ್ನಾಪ್ ಮಾಡಿ ಹಿಗ್ಗಾಮುಗ್ಗ ಥಳಿಸಿದರು.
ಹಲ್ಲೆದಾರರು ಮುಜಾಫರ್ನ ಬಟ್ಟೆ ಬಿಚ್ಚಿಸಿ, ಬ್ಲೇಡ್ ಬಳಸಿ ಅವನ ದೇಹದಲ್ಲಿ ಗಾಯಗಳನ್ನು ಮಾಡಿದ್ದಾರೆ. ನಂತರ, ಬೆತ್ತಲೆಯಾಗಿ ಅವನನ್ನು ಮನೆಗೆ ಬಿಟ್ಟಿದ್ದಾರೆ.
ಹಲ್ಲೆಗೆ ಭಾಗಿಯಾದವರು:
ಈ ಹಲ್ಲೆಯಲ್ಲಿ ಸುಮಾರು 15 ಜನರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ಮೊಹಮ್ಮದ್, ಮಾಬುಲಿ, ಮಲೀಕ್, ಮೈನು ಶಗರಿ, ನದೀಮ್, ಸಮೀರ್ ಸೇರಿ ಇತರ ಹಲವರನ್ನು ಪೊಲೀಸರು ಗುರುತಿಸಿದ್ದಾರೆ.
ಈ ಘಟನೆ ಹುಬ್ಬಳ್ಳಿಯ ಕಸಬಾ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿಸಿದೆ.
ಇಂಟರ್ನೆಟ್ ಕ್ರಾಂತಿಯ ನಂತರ ಸ್ಮಾರ್ಟ್ಫೋನ್ ಪ್ರತಿಯೊಬ್ಬರ ಕೈಗೆ ತಲುಪಿದ ಪರಿಣಾಮ, ಸಾಮಾನ್ಯ ಜನರೂ ಈಗ ಕಂಟೆಂಟ್ ಕ್ರಿಯೇಟರ್ಗಳಾಗಿ ಪರಿಣಮಿಸಿದ್ದಾರೆ. ಈ…
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಜೀವ…
ನವದೆಹಲಿ: ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವುದು ಎಂದರೆ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವುದಾಗಿ ಅರ್ಥೈಸಿಕೊಳ್ಳಲಾಗುವುದಿಲ್ಲ ಎಂದು ಕೇಂದ್ರ ಗೃಹ…
ಬೆಂಗಳೂರು: ಐಪಿಎಲ್ ಹುಚ್ಚನ್ನು ದುರುಪಯೋಗಪಡಿಸಿಕೊಂಡು ಅಭಿಮಾನಿಗಳಿಂದ ಲಕ್ಷಾಂತರ ಹಣ ದೋಚುತ್ತಿದ್ದ ದೊಡ್ಡ ಟಿಕೆಟ್ ಕಾಳಬಜಾರ್ ಜಾಲವೊಂದನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ.…
ಅಂಕೋಲ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಪೆಟ್ರೋಲಿಯಂ ಉತ್ಪನ್ನ ಹೊತ್ತೊಯ್ಯುತ್ತಿದ್ದ ಟ್ಯಾಂಕರ್…
ಮುಂಡಗೋಡ: ಶಿರಸಿಯ ಕೃಷಿ ಉಪ ನಿರ್ದೇಶಕರಾದ ಪಾಂಡು ಅವರ ನೇತೃತ್ವದಲ್ಲಿ ಮುಂಡಗೋಡ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಬುಧವಾರ ರಸಗೊಬ್ಬರ ಮಾರಾಟಗಾರರ…