ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ಇಂದು ಬೆಳಿಗ್ಗೆ ದಾರುಣ ಘಟನೆ ನಡೆದಿದೆ. ಕಳೆದ ವರ್ಷ ಹತ್ಯೆಯಾಗಿದ್ದ ಶಿಕ್ಷಕಿ ದೀಪಿಕಾ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಆಕೆಯ ತಂದೆ ವೆಂಕಟೇಶ್ ಇಂದು ಪ್ರತೀಕಾರದ ರೂಪದಲ್ಲಿ ಆರೋಪಿ ನಿತೀಶ್ನ ತಂದೆ ನರಸಿಂಹೇಗೌಡನನ್ನು ಹತ್ಯೆ ಮಾಡಿರುವ ಘಟನೆ ಅಕ್ಕಪಕ್ಕದ ಜನರಲ್ಲಿ ಆತಂಕ ಸೃಷ್ಟಿಸಿದೆ.
ಮಾಹಿತಿಯ ಪ್ರಕಾರ, ಒಂದು ವರ್ಷದ ಹಿಂದೆ ಟೀಚರ್ ದೀಪಿಕಾಳನ್ನು ಸ್ಥಳೀಯ ಯುವಕ ನಿತೀಶ್ ಹತ್ಯೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿತೀಶ್ ಕಾರಾಗೃಹಕ್ಕೆ ಹೋಗಿದ್ದರೂ, ಬಳಿಕ ಜಾಮೀನಿನಲ್ಲಿ ಹೊರಬಂದಿದ್ದನು. ಈ ವೇಳೆ ದೀಪಿಕಾಳ ತಂದೆ ವೆಂಕಟೇಶ್ ತಮ್ಮ ಮಗಳ ಹತ್ಯೆಗೆ ನ್ಯಾಯ ದೊರೆಯದೆ ಹೋಗಿರುವ ದುಗುಡದಲ್ಲಿದ್ದು, ಮನಸ್ಸಿನಲ್ಲಿ ಪ್ರತೀಕಾರವನ್ನು ಹೊತ್ತಿದ್ದರು.
ಇಂದು ಬೆಳಿಗ್ಗೆ ಸುಮಾರು 8.30ರ ಸುಮಾರಿಗೆ ನರಸಿಂಹೇಗೌಡ ಮಾಣಿಕ್ಯನಹಳ್ಳಿಯ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ವೆಂಕಟೇಶ್ ಅವರನ್ನು ಹಿಡಿದು ಹೊಟ್ಟೆ ಭಾಗಕ್ಕೆ ಚಾಕು ಇರಿದಿದ್ದಾರೆ. ತೀವ್ರ ಗಾಯಗಳಿಂದ ನರಸಿಂಹೇಗೌಡ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಹತ್ಯೆಯ ನಂತರ ವೆಂಕಟೇಶ್ ಸ್ಥಳದಿಂದ ಪರಾರಿಯಾಗಿದ್ದಾರೆ.
ಈ ಕುರಿತು ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಹತ್ಯೆ ಪ್ರಕರಣ ಪಾಂಡವಪುರ ತಾಲೂಕಿನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಸ್ಥಳೀಯರ ಮಾತುಗಳ ಪ್ರಕಾರ, ಎರಡು ಕುಟುಂಬಗಳ ನಡುವೆ ಭೀಕರ ವೈಷಮ್ಯವಿದ್ದು, ಇದು ಇನ್ನಷ್ಟು ದುರ್ಘಟನೆಯೂ ಸಂಭವಿಸಬಹುದೆಂಬ ಆತಂಕವನ್ನು ಹುಟ್ಟಿಸಿದೆ.
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…
ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…
ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ್ಯಾಪಿಡೋ ಚಾಲಕನಿಂದ ಮಹಿಳೆಯ…
ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…
ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…