Latest

ಮಂಡ್ಯದಲ್ಲಿ ಕ್ರೂರ ಕೃತ್ಯ : ಮಗಳ ಕೊಲೆಗೆ ಪ್ರತಿಕಾರವಾಗಿ ಆರೋಪಿ ತಂದೆಯ ಹತ್ಯೆ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ಇಂದು ಬೆಳಿಗ್ಗೆ ದಾರುಣ ಘಟನೆ ನಡೆದಿದೆ. ಕಳೆದ ವರ್ಷ ಹತ್ಯೆಯಾಗಿದ್ದ ಶಿಕ್ಷಕಿ ದೀಪಿಕಾ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಆಕೆಯ ತಂದೆ ವೆಂಕಟೇಶ್ ಇಂದು ಪ್ರತೀಕಾರದ ರೂಪದಲ್ಲಿ ಆರೋಪಿ ನಿತೀಶ್‌ನ ತಂದೆ ನರಸಿಂಹೇಗೌಡನನ್ನು ಹತ್ಯೆ ಮಾಡಿರುವ ಘಟನೆ ಅಕ್ಕಪಕ್ಕದ ಜನರಲ್ಲಿ ಆತಂಕ ಸೃಷ್ಟಿಸಿದೆ.

ಮಾಹಿತಿಯ ಪ್ರಕಾರ, ಒಂದು ವರ್ಷದ ಹಿಂದೆ ಟೀಚರ್‌ ದೀಪಿಕಾಳನ್ನು ಸ್ಥಳೀಯ ಯುವಕ ನಿತೀಶ್ ಹತ್ಯೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿತೀಶ್ ಕಾರಾಗೃಹಕ್ಕೆ ಹೋಗಿದ್ದರೂ, ಬಳಿಕ ಜಾಮೀನಿನಲ್ಲಿ ಹೊರಬಂದಿದ್ದನು. ಈ ವೇಳೆ ದೀಪಿಕಾಳ ತಂದೆ ವೆಂಕಟೇಶ್ ತಮ್ಮ ಮಗಳ ಹತ್ಯೆಗೆ ನ್ಯಾಯ ದೊರೆಯದೆ ಹೋಗಿರುವ ದುಗುಡದಲ್ಲಿದ್ದು, ಮನಸ್ಸಿನಲ್ಲಿ ಪ್ರತೀಕಾರವನ್ನು ಹೊತ್ತಿದ್ದರು.

ಇಂದು ಬೆಳಿಗ್ಗೆ ಸುಮಾರು 8.30ರ ಸುಮಾರಿಗೆ ನರಸಿಂಹೇಗೌಡ ಮಾಣಿಕ್ಯನಹಳ್ಳಿಯ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ವೆಂಕಟೇಶ್ ಅವರನ್ನು ಹಿಡಿದು ಹೊಟ್ಟೆ ಭಾಗಕ್ಕೆ ಚಾಕು ಇರಿದಿದ್ದಾರೆ. ತೀವ್ರ ಗಾಯಗಳಿಂದ ನರಸಿಂಹೇಗೌಡ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಹತ್ಯೆಯ ನಂತರ ವೆಂಕಟೇಶ್ ಸ್ಥಳದಿಂದ ಪರಾರಿಯಾಗಿದ್ದಾರೆ.

ಈ ಕುರಿತು ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಹತ್ಯೆ ಪ್ರಕರಣ ಪಾಂಡವಪುರ ತಾಲೂಕಿನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಸ್ಥಳೀಯರ ಮಾತುಗಳ ಪ್ರಕಾರ, ಎರಡು ಕುಟುಂಬಗಳ ನಡುವೆ ಭೀಕರ ವೈಷಮ್ಯವಿದ್ದು, ಇದು ಇನ್ನಷ್ಟು ದುರ್ಘಟನೆಯೂ ಸಂಭವಿಸಬಹುದೆಂಬ ಆತಂಕವನ್ನು ಹುಟ್ಟಿಸಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

7 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

7 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

7 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

7 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago