ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ಇಂದು ಬೆಳಿಗ್ಗೆ ದಾರುಣ ಘಟನೆ ನಡೆದಿದೆ. ಕಳೆದ ವರ್ಷ ಹತ್ಯೆಯಾಗಿದ್ದ ಶಿಕ್ಷಕಿ ದೀಪಿಕಾ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಆಕೆಯ ತಂದೆ ವೆಂಕಟೇಶ್ ಇಂದು ಪ್ರತೀಕಾರದ ರೂಪದಲ್ಲಿ ಆರೋಪಿ ನಿತೀಶ್ನ ತಂದೆ ನರಸಿಂಹೇಗೌಡನನ್ನು ಹತ್ಯೆ ಮಾಡಿರುವ ಘಟನೆ ಅಕ್ಕಪಕ್ಕದ ಜನರಲ್ಲಿ ಆತಂಕ ಸೃಷ್ಟಿಸಿದೆ.
ಮಾಹಿತಿಯ ಪ್ರಕಾರ, ಒಂದು ವರ್ಷದ ಹಿಂದೆ ಟೀಚರ್ ದೀಪಿಕಾಳನ್ನು ಸ್ಥಳೀಯ ಯುವಕ ನಿತೀಶ್ ಹತ್ಯೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿತೀಶ್ ಕಾರಾಗೃಹಕ್ಕೆ ಹೋಗಿದ್ದರೂ, ಬಳಿಕ ಜಾಮೀನಿನಲ್ಲಿ ಹೊರಬಂದಿದ್ದನು. ಈ ವೇಳೆ ದೀಪಿಕಾಳ ತಂದೆ ವೆಂಕಟೇಶ್ ತಮ್ಮ ಮಗಳ ಹತ್ಯೆಗೆ ನ್ಯಾಯ ದೊರೆಯದೆ ಹೋಗಿರುವ ದುಗುಡದಲ್ಲಿದ್ದು, ಮನಸ್ಸಿನಲ್ಲಿ ಪ್ರತೀಕಾರವನ್ನು ಹೊತ್ತಿದ್ದರು.
ಇಂದು ಬೆಳಿಗ್ಗೆ ಸುಮಾರು 8.30ರ ಸುಮಾರಿಗೆ ನರಸಿಂಹೇಗೌಡ ಮಾಣಿಕ್ಯನಹಳ್ಳಿಯ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ವೆಂಕಟೇಶ್ ಅವರನ್ನು ಹಿಡಿದು ಹೊಟ್ಟೆ ಭಾಗಕ್ಕೆ ಚಾಕು ಇರಿದಿದ್ದಾರೆ. ತೀವ್ರ ಗಾಯಗಳಿಂದ ನರಸಿಂಹೇಗೌಡ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಹತ್ಯೆಯ ನಂತರ ವೆಂಕಟೇಶ್ ಸ್ಥಳದಿಂದ ಪರಾರಿಯಾಗಿದ್ದಾರೆ.
ಈ ಕುರಿತು ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಹತ್ಯೆ ಪ್ರಕರಣ ಪಾಂಡವಪುರ ತಾಲೂಕಿನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಸ್ಥಳೀಯರ ಮಾತುಗಳ ಪ್ರಕಾರ, ಎರಡು ಕುಟುಂಬಗಳ ನಡುವೆ ಭೀಕರ ವೈಷಮ್ಯವಿದ್ದು, ಇದು ಇನ್ನಷ್ಟು ದುರ್ಘಟನೆಯೂ ಸಂಭವಿಸಬಹುದೆಂಬ ಆತಂಕವನ್ನು ಹುಟ್ಟಿಸಿದೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…