ಗೌರಿಬಿದನೂರು ನಗರದ ನ್ಯಾಷನಲ್ ಕಾಲೇಜು ಮುಂಭಾಗದ ವಿ.ವಿ.ಪುರಂ ಪ್ರದೇಶದಲ್ಲಿ ನಡೆದ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೃತ ವ್ಯಕ್ತಿ ಶಿವಕುಮಾರ್ ಅಲಿಯಾಸ್ ಸಾದಿಕ್ ಪಾಷಾ (45) ಆಗಿದ್ದು, ತಮ್ಮ ಮನೆಯಲ್ಲೇ ಹಲ್ಲೆಗೆ ಒಳಗಾಗಿ ಮೃತಪಟ್ಟಿದ್ದರು. ಈ ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದರು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಮೃತನ ಪತ್ನಿ ರೇಷ್ಮಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆಯ ವೇಳೆ ಸಂಬಂಧಿಕ ಶಾರುಖ್ (23) ತನ್ನ ನಾಲ್ವರು ಸ್ನೇಹಿತರಾದ ಪಾರ್ಥ (20), ಅಕ್ಷಯ್ (20), ಆನಂದ್ ಬಾಬು (29) ಹಾಗೂ ರಾಮು (28) ಜೊತೆಗೂಡಿ ಕೊಲೆ ನಡೆಸಿರುವುದು ಬೆಳಕಿಗೆ ಬಂದಿದೆ.
ಪೊಲೀಸರ ಮಾಹಿತಿ ಪ್ರಕಾರ, ಕೊಲೆಗೆ ಸಂಚು ರೂಪಿಸಿದ ಶಾರುಖ್, ಆಂಧ್ರಪ್ರದೇಶದ ತೆನಾಲಿಯಿಂದ ತನ್ನ ಸ್ನೇಹಿತರನ್ನು ಕರೆಸಿಕೊಂಡಿದ್ದನು. ಶುಕ್ರವಾರ ರಾತ್ರಿ ಶಿವಕುಮಾರ್ ಅವರ ಮನೆಯಲ್ಲಿ, ಮನೆಯಲ್ಲಿದ್ದ ಮಕ್ಕಳನ್ನು ಬೇರೆ ಕೊಠಡಿಗೆ ಕಳುಹಿಸಿ ಬಾಗಿಲು ಹಾಕಿ, ಮಲಗಿದ್ದ ಶಿವಕುಮಾರ್ ಮೇಲೆ ದಾಳಿ ನಡೆಸಲಾಗಿದೆ. ಆರೋಪಿಗಳು ಬಾಯಿ, ಕೈ-ಕಾಲುಗಳನ್ನು ಹಿಡಿದುಕೊಂಡು ಕಟ್ಟಿಗೆ ಮತ್ತು ರಾಡ್ಗಳಿಂದ ಹಲ್ಲೆ ನಡೆಸಿದ್ದು, ಕಾಲುಗಳು ಮತ್ತು ಬೆನ್ನು ಮೂಳೆ ಮುರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೊಲೆ ನಂತರ ಆರೋಪಿಗಳು ತಲೆಮರೆಸಿಕೊಂಡಿದ್ದರು. ತನಿಖೆ ಮುಂದುವರಿಸಿದ ಪೊಲೀಸರು, ತೆನಾಲಿಯಲ್ಲಿ ಆರೋಪಿಗಳಿರುವ ಮಾಹಿತಿ ಪಡೆದು ಐವರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವೃತ್ತ ನಿರೀಕ್ಷಕ ಅಂಜನ್ ಕುಮಾರ್ ತಿಳಿಸಿದ್ದಾರೆ.
ವರದಿ: ಅವಿನಾಶ್
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದೆ. ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದು ಪ್ರೇಮಿಗಳಿಬ್ಬರು…
ಕಲಬುರಗಿ ನಗರದ ಹಳೇ ಜೇವರ್ಗಿ ರಸ್ತೆಯ ಪಿ & ಟಿ ಕಾಲೊನಿಯಲ್ಲಿ ಗುರುವಾರ ರಾತ್ರಿ ನಡೆದ ಭೀಕರ ಘಟನೆಯಲ್ಲಿ ವ್ಯಕ್ತಿಯೊಬ್ಬರನ್ನು…
ಭಾರತದಲ್ಲಿ ವಿವಾಹವನ್ನು ಪವಿತ್ರ ಬಂಧ ಹಾಗೂ ಜೀವನಪರ್ಯಂತದ ಬದ್ಧತೆ ಎಂದು ಪರಿಗಣಿಸುವ ಪರಂಪರೆ ಇನ್ನೂ ಗಟ್ಟಿಯಾಗಿ ಇದೆ. ಆದರೆ ಇತ್ತೀಚಿನ…
ಆಮ್ ಆದ್ಮಿ ಪಕ್ಷ (AAP) ತನ್ನ ರಾಜ್ಯಸಭಾ ಸಂಸದ Raghav Chadha ಅವರಿಗೆ ದೊಡ್ಡ ಹಿನ್ನಡೆ ನೀಡಿದ್ದು, ಅವರನ್ನು ರಾಜ್ಯಸಭಾ…
“ರಕ್ಷಕನೇ ಭಕ್ಷಕ” ಎನ್ನುವ ಮಾತಿಗೆ ಸಾಕ್ಷಿಯಂತ ಘಟನೆಯೊಂದು Akolaದಲ್ಲಿ ಬೆಳಕಿಗೆ ಬಂದಿದೆ. ಸಹಾಯಕ ಪೊಲೀಸ್ ಉಪನಿರೀಕ್ಷಕ (ASI) ಒಬ್ಬರು ವಶದಲ್ಲಿದ್ದ…
ಮನೆಯ ವಿಶ್ವಾಸಕ್ಕೆ ಬಂದ ಸೊಸೆಯೇ ಅತ್ತೆಗೆ ವಿಷ ನೀಡಿ, ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದನ್ನು ದೋಚಿಕೊಂಡು ಪರಾರಿಯಾದ ಬೆಚ್ಚಿಬೀಳಿಸುವ ಘಟನೆ…