ಗದಗ ಜಿಲ್ಲೆ ಮುಂಡರಗಿಯಲ್ಲಿ ಬಸ್ ಹತ್ತುವ ಕುರಿತಂತೆ ನಡೆದ ಮಾತಿನ ಚಕಮಕಿ ಮಾರಾಮಾರಿಗೆ ಕಾರಣವಾಗಿ, ಮೂವರು ಯುವಕರು ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಈ ಘಟನೆ ಮುಂಡರಗಿ ಬಸ್ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ. ಮುಂಡರಗಿಯಿಂದ ಹಿರೇವಡ್ಡಟ್ಟಿಗೆ ತೆರಳಬೇಕಿದ್ದ ಬಸ್ ನಲ್ಲಿ, ಪ್ರಯಾಣಿಕರಿಬ್ಬರು ಬಸ್ ಹತ್ತುವ ಸಂದರ್ಭದಲ್ಲಿ ಎದುರಾದ ಜಗಳವು ತೀವ್ರ ಸ್ವರೂಪ ಪಡೆದಿತು.
ಬಸ್ ಕಂಡಕ್ಟರ್ ಶರಣಪ್ಪ ಬಿದರಹಳ್ಳಿ ಅವರು, “ಮುಂದಕ್ಕೆ ಬನ್ನಿ” ಎಂದು ಸೂಚನೆ ನೀಡಿದ ವೇಳೆ, ಆಕ್ಷೇಪ ವ್ಯಕ್ತಪಡಿಸಿದ ಮೂವರು ವ್ಯಕ್ತಿಗಳು ಗಲಾಟೆ ಆರಂಭಿಸಿದರು. ಮಾತಿನ ಏರುಪೇರಾದ ಬಳಿಕ, ಅವರು ಥಳಿಸಿ ಕೈ ಹಾಗೂ ಕಾಲಿಗೆ ಗಂಭೀರ ಗಾಯಗೊಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಶರಣಪ್ಪ ಅವರನ್ನು ತಕ್ಷಣವೇ ಮುಂಡರಗಿ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…