ದಾಂಡೇಲಿ: ನಗರದ ಹಳೆ ದಾಂಡೇಲಿ ಸಾರಿಗೆ ಡಿಪೋದಲ್ಲಿ ಬಸ್ಸು ಚಾಲಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ (ಫೆ. 24) ನಡೆದಿದೆ.
ಸಾರಿಗೆ ಘಟಕದ ಸಿಟಿ ಬಸ್ಸು ಚಾಲಕ ಆರ್.ಬಿ. ಗಿಡಜಾಡರ ಅವರು ಫಿನಾಯಿಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದರು. ಈ ಕುರಿತು ಗಮನಿಸಿದ ಘಟಕದ ಸಹೋದ್ಯೋಗಿಗಳು ತಕ್ಷಣವೇ ಅವಸರವಾಗಿ ಅವರನ್ನು ನಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು.
ತಕ್ಷಣ ಚಿಕಿತ್ಸೆಗೆ ಒಳಪಡಿಸಿದರಿಂದ ಅವರ ಸ್ಥಿತಿ ಸ್ಥಿರವಾಗಿದ್ದು, ಅಗತ್ಯ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಾರಿಗೆ ಘಟಕದ ವ್ಯವಸ್ಥಾಪಕ ಎಲ್.ಎಚ್. ರಾಥೋಡ ಹಾಗೂ ಸಿಬ್ಬಂದಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದು, ಘಟನೆ ಕುರಿತಂತೆ ಪರಿಶೀಲನೆ ನಡೆಸುತ್ತಿದ್ದಾರೆ.
ಈ ಆತ್ಮಹತ್ಯೆ ಯತ್ನದ ಹಿಂದಿನ ನಿಜವಾದ ಕಾರಣಗಳ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ಶೀಘ್ರದಲ್ಲಿಯೇ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…