Latest

ಜಾತ್ರೆಗೆ ಹೋಗುತ್ತಿದ್ದ ಬಸ್ ಪಲ್ಟಿ: ಕನಕಪುರದಲ್ಲಿ ಭೀಕರ ಅಪಘಾತ, 50ಕ್ಕೂ ಹೆಚ್ಚು ಜನರಿಗೆ ಗಾಯ”

ರಮಣೀಯ ಸ್ಥಳಗಳೆಂದು ಖ್ಯಾತಿ ಪಡೆದಿರುವ ಕನಕಪುರದ ಸಂಗಮ ಮಾರ್ಗದಲ್ಲಿ ಭೀಕರ ಬಸ್ ಅಪಘಾತವೊಂದು ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ತಿರುವಿನಲ್ಲಿ ಪಲ್ಟಿಯಾಗಿ 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಕನಕಪುರ ತಾಲ್ಲೂಕಿನ ಕೋಡಿಹಳ್ಳಿ ಹತ್ತಿರದ ಹಲಸೂರು ಬಳಿ ಕ್ರಿಶ್ಚಿಯನ್ ಜಾತ್ರೆ ನಡೆಯುತ್ತಿದ್ದು, ಈ ಜಾತ್ರೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಪ್ರವಾಸಿಗರು ವಿಶೇಷ ಬಸ್‌ನಲ್ಲಿ ಆಗಮಿಸುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ತಿರುವಿನಲ್ಲಿ ವೇಗವರ್ಧಿತ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಪ್ರಯಾಣಿಕರಲ್ಲಿ ಹಲವರಿಗೆ ತೀವ್ರ ಗಾಯಗಳಾಗಿದ್ದು, ಸುಮಾರು 10 ಜನರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಅಪಘಾತದ ನಂತರ ಸ್ಥಳೀಯರು ಮತ್ತು ಪೊಲೀಸರು ಕೂಡಲೇ ರಕ್ಷಣಾ ಕಾರ್ಯಾಚರಣೆಗೆ ಧಾವಿಸಿ ಗಾಯಾಳುಗಳನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಸಂಬಂಧ ತನಿಖೆ ಮುಂದುವರಿಸಿದ್ದಾರೆ. ಹೆಚ್ಚಿನ ಪ್ರಯಾಣಿಕರು ಬೆಂಗಳೂರಿನ ಮೂಲದವರಾಗಿದ್ದು, ಕುಟುಂಬದ ಸದಸ್ಯರೊಂದಿಗೆ ಜಾತ್ರೆಗೆ ತೆರಳುತ್ತಿದ್ದ ಸಂದರ್ಭದಲ್ಲಿಯೇ ಈ ಅವಘಡ ಸಂಭವಿಸಿದೆ.

ಸ್ಥಳೀಯರು ಮತ್ತು ದುರಂತದ ದೃಶ್ಯ ನೋಡಿ ಬೆಚ್ಚಿಬಿದ್ದಿದ್ದ ಪೊಲೀಸರು, ವಾಹನಗಳ ಸಂಚಾರಕ್ಕೂ ತಾತ್ಕಾಲಿಕ ತಡೆ ನೀಡಿದ್ದರು. ಬಸ್‌ ಚಾಲಕನ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

nazeer ahamad

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

2 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 months ago