ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಘಟನೆ ನಟಿ ಕೃಷಿ ತಾಪಾಂಡ ಅವರ ನಿವಾಸದಲ್ಲಿ ನಡೆದಿರುವುದರಿಂದ ಪ್ರಕರಣಕ್ಕೆ ಹೆಚ್ಚಿನ ಮಹತ್ವ ದೊರೆತಿದೆ.
ವೈಶಾಕ್ ಅವರು ಕಾರು, ಆಟೋಮೊಬೈಲ್ ಹಾಗೂ ಗ್ಯಾರೇಜ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಉದ್ಯಮಿಯಾಗಿದ್ದರು. ಅವರಿಗೆ ಮದುವೆಯಾಗಿ 15 ವರ್ಷಗಳಾಗಿದ್ದು, 14 ವರ್ಷದ ಪುತ್ರನಿದ್ದಾನೆ. ಆದರೆ ಇತ್ತೀಚಿನ ಕೆಲವು ಬೆಳವಣಿಗೆಗಳು ಅವರ ವೈಯಕ್ತಿಕ ಜೀವನದಲ್ಲಿ ಅಶಾಂತಿಗೆ ಕಾರಣವಾಗಿದ್ದವು ಎನ್ನಲಾಗಿದೆ.
ಮಾಹಿತಿಗಳ ಪ್ರಕಾರ, ಎವಿಆರ್ ಗ್ರೂಪ್ ಮಾಲೀಕ ಅರವಿಂದ್ ರೆಡ್ಡಿಗೆ ಬೆದರಿಕೆ ಹಾಕಿದ ಆರೋಪದಡಿ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ವೈಶಾಕ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಅವರು ಬಂಧನಕ್ಕೊಳಗಾಗಿ ವಿಚಾರಣೆಯನ್ನೂ ಎದುರಿಸಿದ್ದರು. ಈ ಪ್ರಕರಣದ ಬಳಿಕ ಅವರ ಕುಟುಂಬ ಜೀವನದಲ್ಲೂ ಮನಸ್ತಾಪಗಳು ಹೆಚ್ಚಾಗಿದ್ದವು ಎಂದು ಹೇಳಲಾಗುತ್ತಿದೆ.
ಕೌಟುಂಬಿಕ ಸಮಸ್ಯೆಗಳಿಂದ ಮಾನಸಿಕ ಒತ್ತಡದಲ್ಲಿದ್ದ ವೈಶಾಕ್, ನಟಿ ಕೃಷಿ ತಾಪಾಂಡ ಅವರೊಂದಿಗೆ ಸ್ನೇಹ ಹೊಂದಿದ್ದು, ಆಗಾಗ ಅವರ ನಿವಾಸಕ್ಕೆ ಭೇಟಿ ನೀಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆ ನಡೆದ ದಿನವೂ ವೈಶಾಕ್ ಅವರು ರಾಜರಾಜೇಶ್ವರಿನಗರದ ಬಂಗಾರಪ್ಪ ಗುಡ್ಡೆ ಸಮೀಪದ ಅಪಾರ್ಟ್ಮೆಂಟ್ನಲ್ಲಿರುವ ಕೃಷಿ ತಾಪಾಂಡ ಅವರ ನಿವಾಸಕ್ಕೆ ತೆರಳಿದ್ದರು. ಬಳಿಕ ಇಂದು ಬೆಳಿಗ್ಗೆ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಆರ್ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ.
ಪೊಲೀಸರು ವೈಶಾಕ್ ಅವರ ಮೊಬೈಲ್ ಫೋನ್ ವಶಕ್ಕೆ ಪಡೆದು ಕೊನೆಯ ಕರೆಗಳು, ಸಂದೇಶಗಳು ಹಾಗೂ ಇತ್ತೀಚಿನ ಚಟುವಟಿಕೆಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸಾವಿಗೆ ಕಾರಣವಾದ ಪರಿಸ್ಥಿತಿಗಳು, ವೈಯಕ್ತಿಕ ಮತ್ತು ಕೌಟುಂಬಿಕ ಹಿನ್ನೆಲೆ ಸೇರಿದಂತೆ ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.
ಪ್ರಕರಣದ ಸತ್ಯಾಸತ್ಯತೆ ಹಾಗೂ ಸಾವಿನ ಹಿಂದಿನ ನಿಖರ ಕಾರಣಗಳು ತನಿಖೆಯ ಬಳಿಕವೇ ಸ್ಪಷ್ಟವಾಗಲಿವೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…