ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಘಟನೆ ನಟಿ ಕೃಷಿ ತಾಪಾಂಡ ಅವರ ನಿವಾಸದಲ್ಲಿ ನಡೆದಿರುವುದರಿಂದ ಪ್ರಕರಣಕ್ಕೆ ಹೆಚ್ಚಿನ ಮಹತ್ವ ದೊರೆತಿದೆ.
ವೈಶಾಕ್ ಅವರು ಕಾರು, ಆಟೋಮೊಬೈಲ್ ಹಾಗೂ ಗ್ಯಾರೇಜ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಉದ್ಯಮಿಯಾಗಿದ್ದರು. ಅವರಿಗೆ ಮದುವೆಯಾಗಿ 15 ವರ್ಷಗಳಾಗಿದ್ದು, 14 ವರ್ಷದ ಪುತ್ರನಿದ್ದಾನೆ. ಆದರೆ ಇತ್ತೀಚಿನ ಕೆಲವು ಬೆಳವಣಿಗೆಗಳು ಅವರ ವೈಯಕ್ತಿಕ ಜೀವನದಲ್ಲಿ ಅಶಾಂತಿಗೆ ಕಾರಣವಾಗಿದ್ದವು ಎನ್ನಲಾಗಿದೆ.
ಮಾಹಿತಿಗಳ ಪ್ರಕಾರ, ಎವಿಆರ್ ಗ್ರೂಪ್ ಮಾಲೀಕ ಅರವಿಂದ್ ರೆಡ್ಡಿಗೆ ಬೆದರಿಕೆ ಹಾಕಿದ ಆರೋಪದಡಿ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ವೈಶಾಕ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಅವರು ಬಂಧನಕ್ಕೊಳಗಾಗಿ ವಿಚಾರಣೆಯನ್ನೂ ಎದುರಿಸಿದ್ದರು. ಈ ಪ್ರಕರಣದ ಬಳಿಕ ಅವರ ಕುಟುಂಬ ಜೀವನದಲ್ಲೂ ಮನಸ್ತಾಪಗಳು ಹೆಚ್ಚಾಗಿದ್ದವು ಎಂದು ಹೇಳಲಾಗುತ್ತಿದೆ.
ಕೌಟುಂಬಿಕ ಸಮಸ್ಯೆಗಳಿಂದ ಮಾನಸಿಕ ಒತ್ತಡದಲ್ಲಿದ್ದ ವೈಶಾಕ್, ನಟಿ ಕೃಷಿ ತಾಪಾಂಡ ಅವರೊಂದಿಗೆ ಸ್ನೇಹ ಹೊಂದಿದ್ದು, ಆಗಾಗ ಅವರ ನಿವಾಸಕ್ಕೆ ಭೇಟಿ ನೀಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆ ನಡೆದ ದಿನವೂ ವೈಶಾಕ್ ಅವರು ರಾಜರಾಜೇಶ್ವರಿನಗರದ ಬಂಗಾರಪ್ಪ ಗುಡ್ಡೆ ಸಮೀಪದ ಅಪಾರ್ಟ್ಮೆಂಟ್ನಲ್ಲಿರುವ ಕೃಷಿ ತಾಪಾಂಡ ಅವರ ನಿವಾಸಕ್ಕೆ ತೆರಳಿದ್ದರು. ಬಳಿಕ ಇಂದು ಬೆಳಿಗ್ಗೆ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಆರ್ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ.
ಪೊಲೀಸರು ವೈಶಾಕ್ ಅವರ ಮೊಬೈಲ್ ಫೋನ್ ವಶಕ್ಕೆ ಪಡೆದು ಕೊನೆಯ ಕರೆಗಳು, ಸಂದೇಶಗಳು ಹಾಗೂ ಇತ್ತೀಚಿನ ಚಟುವಟಿಕೆಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸಾವಿಗೆ ಕಾರಣವಾದ ಪರಿಸ್ಥಿತಿಗಳು, ವೈಯಕ್ತಿಕ ಮತ್ತು ಕೌಟುಂಬಿಕ ಹಿನ್ನೆಲೆ ಸೇರಿದಂತೆ ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.
ಪ್ರಕರಣದ ಸತ್ಯಾಸತ್ಯತೆ ಹಾಗೂ ಸಾವಿನ ಹಿಂದಿನ ನಿಖರ ಕಾರಣಗಳು ತನಿಖೆಯ ಬಳಿಕವೇ ಸ್ಪಷ್ಟವಾಗಲಿವೆ.
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಮೂಲದ ರವಿ ಕುಟುಂಬಕ್ಕೆ ಮುತ್ತತ್ತಿ ಪ್ರವಾಸವೇ ಅಂತಿಮ ಯಾತ್ರೆಯಾಯಿತು. ದೇವರ ದರ್ಶನಕ್ಕಾಗಿ…