Latest

ಸಿ.ಸಿ.ಬಿ. ಪೊಲೀಸರಿಂದ ಮಾದಕ ವಸ್ತು ಹೊಂದಿದ್ದ ೩ ಜನ ಆರೋಪಿಗಳ ಬಂಧನ.

ಮೈಸೂರು ನಗರದಲ್ಲಿ ಇತ್ತೀಚೆಗೆ ಮಾದಕ ವಸ್ತುಗಳ ಮಾರಾಟ ಮಾಡಲಾಗುತ್ತಿದೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮೈಸೂರು ನಗರದ ಸಿ.ಸಿ.ಬಿ.ಘಟಕದ ಹೆಚ್ & ಬಿ ವಿಭಾಗದ ಪೊಲೀಸರು ಮತ್ತು ಸೆನ್ ಕ್ರೆöÊಂ ಪೊಲೀಸರು ದಿನಾಂಕ ೧೫/೧೦/೨೦೨೨ ರಂದು ಜಂಟಿಯಾಗಿ ಮೈಸೂರು ನಗರದ ಬೋಗಾದಿ, ಎಸ್.ಬಿ.ಎಂ ಬಡಾವಣೆ, “ಎ” ಬ್ಲಾಕ್ ಹರಿ ವಿದ್ಯಾಲಯ ಶಾಲೆ ಬಳಿ ಇರುವ ಮನೆಯೊಂದರೆ ಮೇಲೆ ದಾಳಿ ಮಾಡಿ, ೩ ಜನ ಆರೋಪಿಗಳನ್ನು ವಶಕ್ಕೆ ಪಡೆದು ಒಟ್ಟು ಸುಮಾರು ೧,೨೦,೦೦೦/-ರೂ ಮೌಲ್ಯ ಬೆಲೆ ಬಾಳುವ ೨೪ ಗ್ರಾಂ ತೂಕದ ಮಾದಕ ವಸ್ತು ಎಂ.ಡಿ.ಎಂ.ಎ., ತೂಕ ಮಾಡುವ ಎಲೆಕ್ಟ್ರಾನಿಕ್ ಯಂತ್ರ, ೨ ದ್ವಿಚಕ್ರವಾಹನ, ೨ ಲ್ಯಾಪ್‌ಟಾಪ್ ಹಾಗೂ ೫ ಮೊಬೈಲ್ ಪೋನ್‌ಗಳನ್ನು ವಶಪಡಿಸಿಕೊಂಡಿರುತ್ತಾರೆ. ಈ ಸಂಬಂಧ ಸೆನ್ ಕ್ರೆöÊಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿತರು ಮೈಸೂರಿನ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು, ಬೆಂಗಳೂರಿನಲ್ಲಿ ವಾಸವಿರುವ ಕೇರಳ ಮೂಲದ ವ್ಯಕ್ತಿಗಳಿಂದ ಕಡಿಮೆ ಬೆಲೆಗೆ ಮಾದಕವಸ್ತು ಎಂ.ಡಿ.ಎಂ.ಎ.ಅನ್ನು ಖರೀದಿಸಿ ತಂದು ಮೈಸೂರು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರೆಂದು ವಿಚಾರಣೆಯಿಂದ ತಿಳಿದು ಬಂದಿರುತ್ತದೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಡಿ.ಸಿ.ಪಿ., ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗರವರಾದ ಶ್ರೀಮತಿ ಗೀತ. ಎಂ.ಎಸ್., ಐ.ಪಿ.ಎಸ್.ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಎ.ಸಿ.ಪಿ.ರವರಾದ ಶ್ರೀ ಸಿ.ಕೆ.ಅಶ್ವತ್ಥನಾರಾಯಣರವರ ನೇತೃತ್ವದಲ್ಲಿ ಸಿ.ಸಿ.ಬಿ. ಘಟಕದ ಹೆಚ್&ಬಿ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್‌ರವರಾದ ಶ್ರೀ ಜಿ.ಶೇಖರ್, ಸೆನ್ ಕ್ರೆöÊ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್‌ರವರಾದ ಶ್ರೀ ಜಯಕುಮಾರ್ ಸಿಬ್ಬಂದಿಗಳಾದ ಸಲೀಂಖಾನ್, ಲಕ್ಷ್ಮೀಕಾಂತ.ಪಿಎನ್, ಪ್ರಕಾಶ್.ಟಿ ಹಾಗೂ ಸೆನ್ ಕ್ರೆöÊ ಪೊಲೀಸ್ ಠಾಣೆಯ ಸಿಬ್ಬಂದಿರವರುಗಳು ನಡೆಸಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago