ದಿನಾಂಕ ೦೯-೦೯-೨೦೨೨ ರಂದು ಮೈಸೂರು ನಗರ ಸಿ.ಸಿ.ಬಿ. ಪೊಲೀಸರು ಮೈಸೂರು ನಗರ ವ್ಯಾಪ್ತಿಯಲ್ಲಿ ಗಸ್ತಿನಲ್ಲಿದ್ದಾಗ ಮೈಸೂರು ನಗರ ಮಂಡಿ ಮೊಹಲ್ಲಾದ ಸುನ್ನಿಚೌಕದಲ್ಲಿ ಆಕ್ಸಿಸ್ ದ್ವಿಚಕ್ರವಾಹನದಲ್ಲಿ ಇಬ್ಬರು ಕುಳಿತಿದ್ದು, ಪೊಲೀಸರನ್ನು ನೋಡಿ ಒಬ್ಬ ಆಸಾಮಿ ಓಡಿ ಹೋಗಿ ಪರಾರಿಯಾಗಿದ್ದು ಮತ್ತೊಬ್ಬ ಆಸಾಮಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಆತನು ಕಾನೂನುಬಾಹಿರವಾಗಿ ದ್ವಿ ಚಕ್ರ ವಾಹನದಲ್ಲಿ ಗಾಂಜಾವನ್ನು ಇಟ್ಟುಕೊಂಡಿರುವುದು ಕಂಡು ಬಂದ ಮೇರೆಗೆ ಸುಮಾರು ೨,೦೬,೦೦೦/-ರೂ ಮೌಲ್ಯದ ೫ಕೆ.ಜಿ. ೧೫೦ ಗ್ರಾಂ ತೂಕದ ಗಾಂಜಾ ಹಾಗೂ ಇದನ್ನು ತೂಕ ಮಾಡಲು ಇಟ್ಟುಕೊಂಡಿದ್ದ ಯಂತ್ರ ಹಾಗೂ ಸಾಗಾಣಿಕೆಗೆ ಬಳಸಿದ್ದ ದ್ವಿಚಕ್ರವಾಹನವನ್ನು ಅಮಾನತ್ತುಪಡಿಸಿಕೊಂಡಿರುತ್ತಾರೆ. ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಓಡಿ ಪರಾರಿಯಾದ ಆರೋಪಿಯ ಪತ್ತೆ ಕಾರ್ಯ ಮುಂದುವರೆದಿದೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಡಿ.ಸಿ.ಪಿ., ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗರವರಾದ ಶ್ರೀಮತಿ ಗೀತ. ಎಂ.ಎಸ್., ಐ.ಪಿ.ಎಸ್.ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಎ.ಸಿ.ಪಿ.ರವರಾದ ಶ್ರೀ ಸಿ.ಕೆ.ಅಶ್ವತ್ಥನಾರಾಯಣರವರ ನೇತೃತ್ವದಲ್ಲಿ ಸಿ.ಸಿ.ಬಿ. ಘಟಕದ ಹೆಚ್&ಬಿ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ರವರಾದ ಶ್ರೀ ಜಿ.ಶೇಖರ್, ಸಿಬ್ಬಂದಿಗಳಾದ ಸಲೀಂಪಾಷ, ಉಮಾಮಹೇಶ ಮಧುಸೂದನ ರವರುಗಳು ನಡೆಸಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…