ದಿನಾಂಕ ೦೯-೦೯-೨೦೨೨ ರಂದು ಮೈಸೂರು ನಗರ ಸಿ.ಸಿ.ಬಿ. ಪೊಲೀಸರು ಮೈಸೂರು ನಗರ ವ್ಯಾಪ್ತಿಯಲ್ಲಿ ಗಸ್ತಿನಲ್ಲಿದ್ದಾಗ ಮೈಸೂರು ನಗರ ಮಂಡಿ ಮೊಹಲ್ಲಾದ ಸುನ್ನಿಚೌಕದಲ್ಲಿ ಆಕ್ಸಿಸ್ ದ್ವಿಚಕ್ರವಾಹನದಲ್ಲಿ ಇಬ್ಬರು ಕುಳಿತಿದ್ದು, ಪೊಲೀಸರನ್ನು ನೋಡಿ ಒಬ್ಬ ಆಸಾಮಿ ಓಡಿ ಹೋಗಿ ಪರಾರಿಯಾಗಿದ್ದು ಮತ್ತೊಬ್ಬ ಆಸಾಮಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಆತನು ಕಾನೂನುಬಾಹಿರವಾಗಿ ದ್ವಿ ಚಕ್ರ ವಾಹನದಲ್ಲಿ ಗಾಂಜಾವನ್ನು ಇಟ್ಟುಕೊಂಡಿರುವುದು ಕಂಡು ಬಂದ ಮೇರೆಗೆ ಸುಮಾರು ೨,೦೬,೦೦೦/-ರೂ ಮೌಲ್ಯದ ೫ಕೆ.ಜಿ. ೧೫೦ ಗ್ರಾಂ ತೂಕದ ಗಾಂಜಾ ಹಾಗೂ ಇದನ್ನು ತೂಕ ಮಾಡಲು ಇಟ್ಟುಕೊಂಡಿದ್ದ ಯಂತ್ರ ಹಾಗೂ ಸಾಗಾಣಿಕೆಗೆ ಬಳಸಿದ್ದ ದ್ವಿಚಕ್ರವಾಹನವನ್ನು ಅಮಾನತ್ತುಪಡಿಸಿಕೊಂಡಿರುತ್ತಾರೆ. ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಓಡಿ ಪರಾರಿಯಾದ ಆರೋಪಿಯ ಪತ್ತೆ ಕಾರ್ಯ ಮುಂದುವರೆದಿದೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಡಿ.ಸಿ.ಪಿ., ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗರವರಾದ ಶ್ರೀಮತಿ ಗೀತ. ಎಂ.ಎಸ್., ಐ.ಪಿ.ಎಸ್.ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಎ.ಸಿ.ಪಿ.ರವರಾದ ಶ್ರೀ ಸಿ.ಕೆ.ಅಶ್ವತ್ಥನಾರಾಯಣರವರ ನೇತೃತ್ವದಲ್ಲಿ ಸಿ.ಸಿ.ಬಿ. ಘಟಕದ ಹೆಚ್&ಬಿ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ರವರಾದ ಶ್ರೀ ಜಿ.ಶೇಖರ್, ಸಿಬ್ಬಂದಿಗಳಾದ ಸಲೀಂಪಾಷ, ಉಮಾಮಹೇಶ ಮಧುಸೂದನ ರವರುಗಳು ನಡೆಸಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…
ಕೊಡಗು ಜಿಲ್ಲಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ 68 ವರ್ಷದ ಚೆಂಗಪ್ಪ ಅವರ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸುಮಾರು 20…
ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆ ಆವರಣದ ಗೋಡೆ ಕುಸಿತದಿಂದ ಸಂಭವಿಸಿದ ಭೀಕರ ದುರಂತದ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…