ದಿನಾಂಕ ೦೯-೦೯-೨೦೨೨ ರಂದು ಮೈಸೂರು ನಗರ ಸಿ.ಸಿ.ಬಿ. ಪೊಲೀಸರು ಮೈಸೂರು ನಗರ ವ್ಯಾಪ್ತಿಯಲ್ಲಿ ಗಸ್ತಿನಲ್ಲಿದ್ದಾಗ ಮೈಸೂರು ನಗರ ಮಂಡಿ ಮೊಹಲ್ಲಾದ ಸುನ್ನಿಚೌಕದಲ್ಲಿ ಆಕ್ಸಿಸ್ ದ್ವಿಚಕ್ರವಾಹನದಲ್ಲಿ ಇಬ್ಬರು ಕುಳಿತಿದ್ದು, ಪೊಲೀಸರನ್ನು ನೋಡಿ ಒಬ್ಬ ಆಸಾಮಿ ಓಡಿ ಹೋಗಿ ಪರಾರಿಯಾಗಿದ್ದು ಮತ್ತೊಬ್ಬ ಆಸಾಮಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಆತನು ಕಾನೂನುಬಾಹಿರವಾಗಿ ದ್ವಿ ಚಕ್ರ ವಾಹನದಲ್ಲಿ ಗಾಂಜಾವನ್ನು ಇಟ್ಟುಕೊಂಡಿರುವುದು ಕಂಡು ಬಂದ ಮೇರೆಗೆ ಸುಮಾರು ೨,೦೬,೦೦೦/-ರೂ ಮೌಲ್ಯದ ೫ಕೆ.ಜಿ. ೧೫೦ ಗ್ರಾಂ ತೂಕದ ಗಾಂಜಾ ಹಾಗೂ ಇದನ್ನು ತೂಕ ಮಾಡಲು ಇಟ್ಟುಕೊಂಡಿದ್ದ ಯಂತ್ರ ಹಾಗೂ ಸಾಗಾಣಿಕೆಗೆ ಬಳಸಿದ್ದ ದ್ವಿಚಕ್ರವಾಹನವನ್ನು ಅಮಾನತ್ತುಪಡಿಸಿಕೊಂಡಿರುತ್ತಾರೆ. ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಓಡಿ ಪರಾರಿಯಾದ ಆರೋಪಿಯ ಪತ್ತೆ ಕಾರ್ಯ ಮುಂದುವರೆದಿದೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಡಿ.ಸಿ.ಪಿ., ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗರವರಾದ ಶ್ರೀಮತಿ ಗೀತ. ಎಂ.ಎಸ್., ಐ.ಪಿ.ಎಸ್.ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಎ.ಸಿ.ಪಿ.ರವರಾದ ಶ್ರೀ ಸಿ.ಕೆ.ಅಶ್ವತ್ಥನಾರಾಯಣರವರ ನೇತೃತ್ವದಲ್ಲಿ ಸಿ.ಸಿ.ಬಿ. ಘಟಕದ ಹೆಚ್&ಬಿ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ರವರಾದ ಶ್ರೀ ಜಿ.ಶೇಖರ್, ಸಿಬ್ಬಂದಿಗಳಾದ ಸಲೀಂಪಾಷ, ಉಮಾಮಹೇಶ ಮಧುಸೂದನ ರವರುಗಳು ನಡೆಸಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…