ದಿನಾಂಕ ೦೯-೦೯-೨೦೨೨ ರಂದು ಮೈಸೂರು ನಗರ ಸಿ.ಸಿ.ಬಿ. ಪೊಲೀಸರು ಮೈಸೂರು ನಗರ ವ್ಯಾಪ್ತಿಯಲ್ಲಿ ಗಸ್ತಿನಲ್ಲಿದ್ದಾಗ ಮೈಸೂರು ನಗರ ಮಂಡಿ ಮೊಹಲ್ಲಾದ ಸುನ್ನಿಚೌಕದಲ್ಲಿ ಆಕ್ಸಿಸ್ ದ್ವಿಚಕ್ರವಾಹನದಲ್ಲಿ ಇಬ್ಬರು ಕುಳಿತಿದ್ದು, ಪೊಲೀಸರನ್ನು ನೋಡಿ ಒಬ್ಬ ಆಸಾಮಿ ಓಡಿ ಹೋಗಿ ಪರಾರಿಯಾಗಿದ್ದು ಮತ್ತೊಬ್ಬ ಆಸಾಮಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಆತನು ಕಾನೂನುಬಾಹಿರವಾಗಿ ದ್ವಿ ಚಕ್ರ ವಾಹನದಲ್ಲಿ ಗಾಂಜಾವನ್ನು ಇಟ್ಟುಕೊಂಡಿರುವುದು ಕಂಡು ಬಂದ ಮೇರೆಗೆ ಸುಮಾರು ೨,೦೬,೦೦೦/-ರೂ ಮೌಲ್ಯದ ೫ಕೆ.ಜಿ. ೧೫೦ ಗ್ರಾಂ ತೂಕದ ಗಾಂಜಾ ಹಾಗೂ ಇದನ್ನು ತೂಕ ಮಾಡಲು ಇಟ್ಟುಕೊಂಡಿದ್ದ ಯಂತ್ರ ಹಾಗೂ ಸಾಗಾಣಿಕೆಗೆ ಬಳಸಿದ್ದ ದ್ವಿಚಕ್ರವಾಹನವನ್ನು ಅಮಾನತ್ತುಪಡಿಸಿಕೊಂಡಿರುತ್ತಾರೆ. ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಓಡಿ ಪರಾರಿಯಾದ ಆರೋಪಿಯ ಪತ್ತೆ ಕಾರ್ಯ ಮುಂದುವರೆದಿದೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಡಿ.ಸಿ.ಪಿ., ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗರವರಾದ ಶ್ರೀಮತಿ ಗೀತ. ಎಂ.ಎಸ್., ಐ.ಪಿ.ಎಸ್.ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಎ.ಸಿ.ಪಿ.ರವರಾದ ಶ್ರೀ ಸಿ.ಕೆ.ಅಶ್ವತ್ಥನಾರಾಯಣರವರ ನೇತೃತ್ವದಲ್ಲಿ ಸಿ.ಸಿ.ಬಿ. ಘಟಕದ ಹೆಚ್&ಬಿ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ರವರಾದ ಶ್ರೀ ಜಿ.ಶೇಖರ್, ಸಿಬ್ಬಂದಿಗಳಾದ ಸಲೀಂಪಾಷ, ಉಮಾಮಹೇಶ ಮಧುಸೂದನ ರವರುಗಳು ನಡೆಸಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…