Latest

ಕೇಬಲ್ ಕಳ್ಳನ ಕೈಚಳಕಕ್ಕೆ ಬ್ರೇಕ್: ಬಂಧನಕ್ಕೂ ಮುನ್ನ ಸ್ಥಳೀಯರಿಂದ ಛೀಮಾರಿ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಲಕ್ಕೇನಹಳ್ಳಿ ಗ್ರಾಮದಲ್ಲಿ ಕೊಳವೆ ಬಾವಿಗಳಿಗೆ ಅಳವಡಿಸಲಾಗುತ್ತಿದ್ದ ವಿದ್ಯುತ್ ಕೇಬಲ್‌ಗಳನ್ನು ನಿರಂತರವಾಗಿ ಕದಿಯುತ್ತಿದ್ದ ಐನಾತಿ ಕಳ್ಳನ ಕೈಚಳಕಕ್ಕೆ ಶನಿವಾರ ಮುಕ್ತಾಯವಾಯಿತು.

ಇದಿನೊಳಗೂ ರೈತರಿಗೆ ತೊಂದರೆಂಟಿಸುತ್ತಿದ್ದ ಈ ಕಳ್ಳನನ್ನು ಗ್ರಾಮಸ್ಥರು ಈ ಬಾರಿ ರೆಡ್ ಹ್ಯಾಂಡ್ ಹಿಡಿದಿದ್ದು, ಕುಖ್ಯಾತ ಕಳ್ಳನಿಗೆ ಅವರದ್ದೇ ಆದ ಶೈಲಿಯಲ್ಲಿ ಪಾಠ ಕಲಿಸಿ, ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಳ್ಳತನದ ಆರೋಪಿಗೆ ಹರೀಶ್ ಎಂದು ಗುರುತು ಲಭಿಸಿದ್ದು, ಸ್ಥಳೀಯ ಕೃಷಿಕ ಶ್ರೀಕಾಂತ್ ಅವರ ಜಮೀನಿನಲ್ಲಿ ಕೇಬಲ್ ಕಳವು ಮಾಡುತ್ತಿದ್ದ ವೇಳೆ ಈತನ ವರ್ತನೆಗೆ ಅನುಮಾನಗೊಂಡ ಕೆಲವರು ತಡೆಯುವ ಪ್ರಯತ್ನ ಮಾಡಿದ್ದಾರೆ. ತಪ್ಪಿಸಿಕೊಳ್ಳಲು ಹರಿಹಾಯ್ದ ಹರೀಶ್‌ನ್ನು ಸ್ಥಳೀಯರು ಕೊನೆಗೂ ಪತ್ತೆಹಚ್ಚಿ ಹಿಡಿದರು.

ಚೀಲವನ್ನು ಪರಿಶೀಲಿಸಿದಾಗ ಹಲವು ಕೇಬಲ್ ಗಳು ದೊರೆತಿದ್ದು, ಘಟನೆಯ ದೃಢತೆಗೆ ಸಾಕ್ಷಿಯಾಯಿತು. ಆಕ್ರೋಶಿತ ಗ್ರಾಮಸ್ಥರು ತಕ್ಷಣವೇ ಆತನನ್ನು ಹಿಡಿದು, ಕದಿದ ಕೇಬಲ್ ಗಳನ್ನೇ ಬಳಸಿ ಮರಕ್ಕೆ ಕಟ್ಟಿ, ಛೀಮಾರಿ ಹಾಕಿದ ನಂತರ ಸ್ಥಳೀಯ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಈ ಬಗ್ಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಕೆಲ ತಿಂಗಳಿಂದ ಕಾಡುತ್ತಿದ್ದ ಕಳ್ಳತನದ ಸಮಸ್ಯೆಗೆ ಅಂತ್ಯವನ್ನಿಟ್ಟಿರುವ ಗ್ರಾಮಸ್ಥರ ತೀರ್ಮಾನಕಾರಿ ನಡೆಗೆ ಪ್ರಶಂಸೆ ವ್ಯಕ್ತವಾಗಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

9 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

16 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

16 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago