Categories: CrimeLatest

ಕೇಕ್ ಹಚ್ಚಿದ ಗಲಾಟೆ ರಕ್ತಪಾತಕ್ಕೆ: ಹುಟ್ಟುಹಬ್ಬದ ಪಾರ್ಟಿ ಮೂರು ಯುವಕರ ಸಾವಿನಲ್ಲಿ ಅಂತ್ಯ

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಹುಟ್ಟುಹಬ್ಬದ ಸಂಭ್ರಮವೇ ಭೀಕರ ದುರಂತಕ್ಕೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತರ ನಡುವೆ ನಡೆದ ಸಣ್ಣ ಗಲಾಟೆ ಕ್ಷಣಾರ್ಧದಲ್ಲಿ ಹಿಂಸೆಗೆ ತಿರುಗಿ, ಮೂವರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ.

ಮೃತರನ್ನು ಅಮರ್‌ದೀಪ್ ಸೈನಿ, ಮನೀಶ್ ಸೈನಿ ಹಾಗೂ ಆಕಾಶ್ ಸೈನಿ ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ಜೀತು ಸೈನಿ ಹುಟ್ಟುಹಬ್ಬದ ಪಾರ್ಟಿಯ ವೇಳೆ ಈ ಘಟನೆ ನಡೆದಿದ್ದು, ಬಳಿಕ ಆತ ಪರಾರಿಯಾಗಿದ್ದಾನೆ.

ಪೊಲೀಸರ ಪ್ರಕಾರ, ಸ್ಥಳೀಯ ಜಿಮ್‌ನಲ್ಲಿ ನಡೆದ ಹುಟ್ಟುಹಬ್ಬದ ಕಾರ್ಯಕ್ರಮದ ವೇಳೆ ಸ್ನೇಹಿತರು ಜೀತು ಸೈನಿ ಮುಖಕ್ಕೆ ಕೇಕ್ ಹಚ್ಚಿದ್ದರು. ಇದರಿಂದ ಕೋಪಗೊಂಡ ಆತ ಹಾಗೂ ಆತನೊಂದಿಗೆ ಇದ್ದ ಇನ್ನೂ ಕೆಲವರು ಪರವಾನಗಿ ಪಡೆದ ಬಂದೂಕುಗಳನ್ನು ಬಳಸಿ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮವಾಗಿ ಮೂವರು ಯುವಕರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಬುಲಂದ್‌ಶಹರ್ ಗ್ರಾಮೀಣ ಎಸ್‌ಪಿ ಅಂತರಿಕ್ಷ್ ಜೈನ್ ತಿಳಿಸಿದ್ದಾರೆ: ತಡರಾತ್ರಿ ಖುರ್ಜಾ ನಗರ ಪೊಲೀಸ್ ಠಾಣೆಗೆ ಗುಂಡಿನ ದಾಳಿ ಕುರಿತು ಮಾಹಿತಿ ಲಭಿಸಿದ್ದಂತೆ ತಕ್ಷಣವೇ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರೂ, ವೈದ್ಯರು ಅವರನ್ನು ಮೃತರೆಂದು ಘೋಷಿಸಿದ್ದಾರೆ. ನಂತರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಈ ಪ್ರಕರಣದ ತನಿಖೆಗೆ ಆರು ಮಂದಿ ಅಧಿಕಾರಿಗಳ ವಿಶೇಷ ತಂಡ ರಚಿಸಲಾಗಿದ್ದು, ಕೆಲವು ಶಂಕಿತರನ್ನು ಈಗಾಗಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕುಟುಂಬದವರು ಕೆಲವರ ಹೆಸರನ್ನು ನೀಡಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಮೃತ ಅಮರ್‌ದೀಪ್‌ನ ಸಹೋದರ ಸಂಜಯ್ ಸೈನಿ ಹೇಳುವಂತೆ, ಸಣ್ಣ ವಾಗ್ವಾದದ ಬಳಿಕ ಆರೋಪಿಗಳು ಸ್ಥಳದಿಂದ ತೆರಳಿ ಮತ್ತೆ ಬಂದೂಕುಗಳೊಂದಿಗೆ ಮರಳಿ ಬಂದಿದ್ದಾರೆ. ಬಳಿಕ ಅಮರ್‌ದೀಪ್, ಮನೀಶ್ ಹಾಗೂ ಆಕಾಶ್ ಅವರನ್ನು ಕರೆದು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಅವರಿಗೆ ತಪ್ಪಿಸಿಕೊಳ್ಳಲು ಯಾವುದೇ ಅವಕಾಶ ನೀಡಲಾಗಿಲ್ಲ.

ಘಟನೆಯ ನಂತರ ಮೀರತ್ ರೇಂಜ್‌ನ ಡಿಐಜಿ ಹಾಗೂ ಇತರೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಣ್ಣ ವಿಚಾರದಿಂದ ಆರಂಭವಾದ ಜಗಳವೇ ಭೀಕರ ಹತ್ಯೆಗೆ ಕಾರಣವಾಗಿರುವುದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

15 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

15 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

15 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

15 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

15 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

15 hours ago