ಆಲೂರು: ಜನವರಿ 14ರಂದು ಹೆದ್ದುರ್ಗ ಗ್ರಾಮದಲ್ಲಿ ಮಾಂಸದ ಆಸೆಗಾಗಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಕರುವನ್ನು ಕದ್ದು, ಕೊಂದು ತಿಂದ ಪ್ರಕರಣದಲ್ಲಿ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೌಶಿಕ್, ಮೋಹನ್, ಮನೋಜ್, ಚಂದನ್, ಅಜ್ಗರ್, ಪವನ್, ಮತ್ತು ಅಜಿತ್ ಎಂದು ಗುರುತಿಸಲಾಗಿದೆ. ಕೋರ್ಟ್ ಇವರನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಹೆದ್ದುರ್ಗ ಗ್ರಾಮದ ಹೂವಣ್ಣ ಎಂಬುವವರು 12 ಹಸುಗಳನ್ನು ಕೊಟ್ಟಿಗೆಯಲ್ಲಿ ಕಟ್ಟಿಟ್ಟುಕೊಂಡು ಮನೆಗೆ ತೆರಳಿದ್ದರು. ಜನವರಿ 15ರಂದು ಕರು ನಾಪತ್ತೆಯಾಗಿರುವುದನ್ನು ಗಮನಿಸಿದ ಅವರು ಹುಡುಕಾಟ ಆರಂಭಿಸಿದರು. ನಂತರ, ಜನವರಿ 16ರಂದು ಬೆಳಗ್ಗೆ ಮಡಬಲು ರೈಲ್ವೆ ಗೇಟ್ ಬಳಿ ಒಂದು ಪೊದೆಯಲ್ಲಿ ಪ್ರಾಣಿ ರುಂಡ ಕಂಡು, ಅದನ್ನು ತಮ್ಮ ಕರು ಎಂದು ಗುರುತಿಸಿದರು.
ಇದಾದ ನಂತರ ಹೂವಣ್ಣ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದರು. ತನಿಖೆಯ ಸಂದರ್ಭದಲ್ಲಿ, ಜನವರಿ 14ರಂದು ಮಧ್ಯರಾತ್ರಿ ದುಷ್ಕರ್ಮಿಗಳು ಕರುವನ್ನು ಕದ್ದು, ಕೊಂದು ಮಾಂಸ ಬೇಯಿಸಿ ಸೇವಿಸಿದ್ದಾರೇನೋ ಎಂಬ ಮಾಹಿತಿ ಬಯಲಾಯಿತು. ಪ್ರಾಣಿ ರುಂಡ, ಕರುಳು ಮತ್ತು ಚರ್ಮವನ್ನು ನದಿಗೆ ಎಸೆಯಲು ಪ್ರಯತ್ನಿಸಿದಾಗ, ಜನರ ಓಡಾಟವನ್ನು ಕಂಡು ಅವರು ರುಂಡವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣ ಸ್ಥಳೀಯರಲ್ಲಿ ಆಕ್ರೋಶ ಹುಟ್ಟಿಸಿದ್ದು, ಕಾನೂನು ಕ್ರಮಗಳನ್ನು ಶೀಘ್ರ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…