Latest

ನನ್ನನ್ನೂ ಶಾಲೆಗೆ ಕರೆಯುವುದರಿಂದ ತಪ್ಪು ತಿದ್ದಿಕೊಂಡು ಸರ್ಕಾರಿ ಸಂಸ್ಥೆಗಳನ್ನು ಅಭಿವೃದ್ಧಿ ಪಡಿಸಲು ಒಂದು  ಒಳ್ಳೆಯ ಅವಕಾಶ ಎಂದ. – ಶಾಸಕ ಡಾ.‌ ಶ್ರೀನಿವಾಸ್. ಎನ್. ಟಿ.‌

ಕೂಡ್ಲಿಗಿ ತಾಲೂಕಿನ  ಹುರುಳಿಹಾಳ್ ಗ್ರಾಮದಲ್ಲಿ ದಿ. 24-2-24 ರಂದು  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಹಮ್ಮಿಕೊಂಡಿರುವ ” 75 ನೇ ವರ್ಷದ ಅಮೃತ ಮಹೋತ್ಸವ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ” ವನ್ನು ಮಾನ್ಯಶಾಸಕರು  ಉದ್ಘಾಟಿಸಿ ಮಾತನಾಡಿದರು. ‌ಸರ್ಕಾರಿ ಶಾಲೆಗಳಿಗೆ ನನ್ನನ್ನೂ ಮತ್ತೇ ಮತ್ತೇ  ಕರೆಯುವುದರಿಂದ ತಪ್ಪು ಮಾಡುವುದನ್ನು ತಿದ್ದಿಕೊಂಡು ದೇಶದ ಆಸ್ತಿಯಾದ  ಸರ್ಕಾರಿ ಸಂಸ್ಥೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಒಂದು ಒಳ್ಳೆಯ  ಅವಕಾಶ ಸಿಕ್ಕಿದೆ ಎಂದೂ ಹೇಳಿಕೊಳ್ಳಲು ಸಂತೋಷ ಅನಿಸುತ್ತದೆ.  ಹುರುಳಿಹಾಳ್ ಗ್ರಾಮ ಸರ್ವ ಜನಾಂಗದ ಶಾಂತಿಯ ತೋಟವಾಗಿ ಗಮನ ಸೆಳೆಯುತ್ತದೆ. ಇದೇ ಗ್ರಾಮದಲ್ಲಿ  ನಮ್ಮ ತಂದೆಯವರು ಸ್ಥಾಪಿಸಿದ  ಶಾಲೆ ಇದೆ ಅನ್ನುವುದು ಹೆಮ್ಮೆಯ ಸಂಗತಿ .‌ ಮುಂದಿನ ದಿನಗಳಲ್ಲಿ ಖಾಸಗಿ ಶಾಲೆಗಳ ಅಭಿವೃದ್ಧಿಗೆ  ಒತ್ತುಕೊಡುವುದಾಗಿ  ತಿಳಿಸಿದರು. ಬಳಿಕ, ಹೊಸದಾಗಿ ನಿರ್ಮಾಣಗೊಂಡಿರುವ ಗ್ರಂಥಾಲಯ ಕಟ್ಟಡವನ್ನು ಉದ್ಘಾಟಿಸಿದರು.‌ ಹಾಗೆಯೇ ಸಿ. ಆರ್. ಸಿ. ಕಛೇರಿಯನ್ನು  ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಶಾಲೆ ಸಿಬ್ಬಂದಿ , ವಿದ್ಯಾರ್ಥಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.
ವರದಿ : ವಿನಾಯಕ್ ಕೆಎಸ್

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

16 hours ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

17 hours ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

17 hours ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

17 hours ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

17 hours ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

22 hours ago