ಕೂಡ್ಲಿಗಿ ತಾಲೂಕಿನ ಹುರುಳಿಹಾಳ್ ಗ್ರಾಮದಲ್ಲಿ ದಿ. 24-2-24 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಹಮ್ಮಿಕೊಂಡಿರುವ ” 75 ನೇ ವರ್ಷದ ಅಮೃತ ಮಹೋತ್ಸವ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ” ವನ್ನು ಮಾನ್ಯಶಾಸಕರು ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಶಾಲೆಗಳಿಗೆ ನನ್ನನ್ನೂ ಮತ್ತೇ ಮತ್ತೇ ಕರೆಯುವುದರಿಂದ ತಪ್ಪು ಮಾಡುವುದನ್ನು ತಿದ್ದಿಕೊಂಡು ದೇಶದ ಆಸ್ತಿಯಾದ ಸರ್ಕಾರಿ ಸಂಸ್ಥೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಒಂದು ಒಳ್ಳೆಯ ಅವಕಾಶ ಸಿಕ್ಕಿದೆ ಎಂದೂ ಹೇಳಿಕೊಳ್ಳಲು ಸಂತೋಷ ಅನಿಸುತ್ತದೆ. ಹುರುಳಿಹಾಳ್ ಗ್ರಾಮ ಸರ್ವ ಜನಾಂಗದ ಶಾಂತಿಯ ತೋಟವಾಗಿ ಗಮನ ಸೆಳೆಯುತ್ತದೆ. ಇದೇ ಗ್ರಾಮದಲ್ಲಿ ನಮ್ಮ ತಂದೆಯವರು ಸ್ಥಾಪಿಸಿದ ಶಾಲೆ ಇದೆ ಅನ್ನುವುದು ಹೆಮ್ಮೆಯ ಸಂಗತಿ . ಮುಂದಿನ ದಿನಗಳಲ್ಲಿ ಖಾಸಗಿ ಶಾಲೆಗಳ ಅಭಿವೃದ್ಧಿಗೆ ಒತ್ತುಕೊಡುವುದಾಗಿ ತಿಳಿಸಿದರು. ಬಳಿಕ, ಹೊಸದಾಗಿ ನಿರ್ಮಾಣಗೊಂಡಿರುವ ಗ್ರಂಥಾಲಯ ಕಟ್ಟಡವನ್ನು ಉದ್ಘಾಟಿಸಿದರು. ಹಾಗೆಯೇ ಸಿ. ಆರ್. ಸಿ. ಕಛೇರಿಯನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಶಾಲೆ ಸಿಬ್ಬಂದಿ , ವಿದ್ಯಾರ್ಥಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.
ವರದಿ : ವಿನಾಯಕ್ ಕೆಎಸ್
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…