ಉಡುಪಿ: ಗಾಂಜಾ ಸಾಗಾಟ ಮತ್ತು ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಸೆನ್ ಠಾಣೆ ಪೊಲೀಸರು ಬಂಧಿಸಿ, ದೊಡ್ಡ ಪ್ರಮಾಣದ ಮಾದಕ ದ್ರವ್ಯ ವಶಪಡಿಸಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.
ಮಣಿಪಾಲ ರೈಲ್ವೆ ನಿಲ್ದಾಣದ ಬಳಿ ಇರುವ ಡಯಾನಾ ಟಾಕೀಸ್ ರಸ್ತೆ ಕ್ರಾಸ್ ಬಳಿ ಶುಂಕಾಸ್ಪದ ಚಟುವಟಿಕೆ ನಡೆಯುತ್ತಿತ್ತಾದ ಮಾಹಿತಿ ಆಧಾರವಾಗಿ ಪೊಲೀಸರು ದಾಳಿ ನಡೆಸಿದ್ದು, ಆರೋಪಿಯನ್ನು ಸ್ಥಳದಲ್ಲೇ ಹಿಡಿದಿದ್ದಾರೆ.
ಬಂಧಿತನನ್ನು ಬಿಹಾರ ಮೂಲದ ಬ್ರಹಂದೇವ್ ಯಾದವ್ (37) ಎಂದು ಗುರುತಿಸಲಾಗಿದೆ. ಈತನಿಂದ 690 ಗ್ರಾಂ ಗಾಂಜಾ, ಮೊಬೈಲ್ ಫೋನ್, 680 ರೂಪಾಯಿ ನಗದು ಹಾಗೂ ಇತರೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯವನ್ನು ಸುಮಾರು 68,680 ರೂ. ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಸೆನ್ ಠಾಣೆಯ ಡಿವೈಎಸ್ಪಿ ಎ.ಸಿ. ಲೋಕೇಶ್ ಅವರ ನೇತೃತ್ವದ ತಂಡ, ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್ ಮತ್ತು ಸಿಬ್ಬಂದಿಯಾದ ಉಮೇಶ್, ಪ್ರವೀಣ್ ಕುಮಾರ್, ರಾಜೇಶ್, ರಾಘವೇಂದ್ರ, ವೆಂಕಟೇಶ್, ಸಂತೋಷ, ಧರ್ಮಪ್ಪ, ಅರುಣ್ ಕುಮಾರ್, ದೀಕ್ಷಿತ್, ಪವನ್, ನಿಲೇಶ್, ಪರಶುರಾಮ್, ಮುತ್ತಪ್ಪ, ಮಾಯ್ಯಪ್ಪ ಹಾಗೂ ಚರಣ್ ಅವರು ಭಾಗವಹಿಸಿದ್ದರು.
ಈ ಕುರಿತು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…