ಬೆಂಗಳೂರು: ನಗರದಲ್ಲಿ ಗಾಂಜಾ ವ್ಯಾಪಾರದ ಬಟ್ಟಲನ್ನು ಬಡಿಯುತ್ತಿರುವ ಅಬಕಾರಿ ಅಧಿಕಾರಿಗಳು, ಇತ್ತೀಚೆಗೆ ರಾಜಾಜಿನಗರ ಮೆಟ್ರೋ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಒಡಿಶಾ ಮೂಲದವರಾಗಿದ್ದು, ಯನಿಕವಾಗಿ ಗಾಂಜಾ ವಹಿವಾಟಿನಲ್ಲಿ ತೊಡಗಿದ್ದ ಬಗ್ಗೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ.
ಬಂಧಿತರನ್ನು ಸಂಪತ್ ಪ್ರಧಾನ (23), ತಪಸ್ ಪ್ರಧಾನ್ (22), ಜಗನ್ ಪತಂಜಲಿ (24) ಮತ್ತು ದೀಪಾಂಜಲಿ (22) ಎಂದು ಗುರುತಿಸಲಾಗಿದೆ. ಈ ನಾಲ್ವರು ರಾಜಾಜಿನಗರ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಸಾರ್ವಜನಿಕ ಸ್ಥಳದಲ್ಲೇ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದಾರೆ.
ಅಬಕಾರಿ ಇಲಾಖೆಗೆ ಬಂದ ಗುಪ್ತ ಮಾಹಿತಿ ಆಧಾರವಾಗಿ ಅಧಿಕಾರಿಗಳು ಸುಳಿವು ಹಿಡಿದು ತಕ್ಷಣ ಕಾರ್ಯಪ್ರವೃತ್ತರಾಗಿ ದಾಳಿ ನಡೆಸಿದ್ದು, ಸುಮಾರು 30 ಲಕ್ಷ ರೂ. ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಎನ್ಡಿಪಿಎಸ್ (NDPS) ಆಕ್ಟ್ 1985ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇಂತಹ ಪ್ರಕರಣಗಳು ನಗರದಲ್ಲಿ ಮಾದಕ ವಸ್ತುಗಳ ಅಕ್ರಮ ವ್ಯಾಪಾರ ಎಷ್ಟು ವ್ಯಾಪಕವಾಗಿದೆ ಎಂಬುದನ್ನು ಹೊರಹಾಕುತ್ತಿವೆ. ನಿಗಾ ಮತ್ತು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳದೆ ಇರುವಾಗ, ಈ ರೀತಿಯ ಅಕ್ರಮ ಚಟುವಟಿಕೆಗಳು ಮುಂದುವರಿಯುವ ಅಪಾಯವಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…