Latest

ಬೆಂಗಳೂರಿನಲ್ಲಿ ಗಾಂಜಾ ರವಾನೆ: ಒಡಿಶಾದ ನಾಲ್ವರು ಆರೋಪಿಗಳು ಅಬಕಾರಿ ಇಲಾಖೆಯ ಬಲೆಗೆ

ಬೆಂಗಳೂರು: ನಗರದಲ್ಲಿ ಗಾಂಜಾ ವ್ಯಾಪಾರದ ಬಟ್ಟಲನ್ನು ಬಡಿಯುತ್ತಿರುವ ಅಬಕಾರಿ ಅಧಿಕಾರಿಗಳು, ಇತ್ತೀಚೆಗೆ ರಾಜಾಜಿನಗರ ಮೆಟ್ರೋ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಒಡಿಶಾ ಮೂಲದವರಾಗಿದ್ದು, ಯನಿಕವಾಗಿ ಗಾಂಜಾ ವಹಿವಾಟಿನಲ್ಲಿ ತೊಡಗಿದ್ದ ಬಗ್ಗೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ.

ಬಂಧಿತರನ್ನು ಸಂಪತ್ ಪ್ರಧಾನ (23), ತಪಸ್ ಪ್ರಧಾನ್ (22), ಜಗನ್ ಪತಂಜಲಿ (24) ಮತ್ತು ದೀಪಾಂಜಲಿ (22) ಎಂದು ಗುರುತಿಸಲಾಗಿದೆ. ಈ ನಾಲ್ವರು ರಾಜಾಜಿನಗರ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಸಾರ್ವಜನಿಕ ಸ್ಥಳದಲ್ಲೇ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದಾರೆ.

ಅಬಕಾರಿ ಇಲಾಖೆಗೆ ಬಂದ ಗುಪ್ತ ಮಾಹಿತಿ ಆಧಾರವಾಗಿ ಅಧಿಕಾರಿಗಳು ಸುಳಿವು ಹಿಡಿದು ತಕ್ಷಣ ಕಾರ್ಯಪ್ರವೃತ್ತರಾಗಿ ದಾಳಿ ನಡೆಸಿದ್ದು, ಸುಮಾರು 30 ಲಕ್ಷ ರೂ. ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ (NDPS) ಆಕ್ಟ್ 1985ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇಂತಹ ಪ್ರಕರಣಗಳು ನಗರದಲ್ಲಿ ಮಾದಕ ವಸ್ತುಗಳ ಅಕ್ರಮ ವ್ಯಾಪಾರ ಎಷ್ಟು ವ್ಯಾಪಕವಾಗಿದೆ ಎಂಬುದನ್ನು ಹೊರಹಾಕುತ್ತಿವೆ. ನಿಗಾ ಮತ್ತು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳದೆ ಇರುವಾಗ, ಈ ರೀತಿಯ ಅಕ್ರಮ ಚಟುವಟಿಕೆಗಳು ಮುಂದುವರಿಯುವ ಅಪಾಯವಿದೆ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

4 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

4 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

4 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

4 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

4 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

4 hours ago