ಲಕ್ನೋ: ದೇಶದ ಇತಿಹಾಸದಲ್ಲಿಯೇ ಅತಿಭಯಾನಕ ಮತ್ತು ವಿಕೃತ ಮನಸ್ಥಿತಿಯ ಸರಣಿ ಕೊಲೆಗಾರನೊಬ್ಬನಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದು, ಈ ಪ್ರಕರಣ ಮತ್ತೊಂದು ನೈಜ ಜೀವಂತ ರಕ್ತಚಂಡ ಕಥೆಯಂತೆ ಓದುಗರನು ಅಲುಗಿಸಿದೆ.
ನರಭಕ್ಷಕ ಎಂಬ ಕರಾಳ ಹೆಸರು ಪಡೆದ ರಾಮ್ ನಿರಂಜನ್ ಅಲಿಯಾಸ್ ರಾಜಾ ಕೊಲಂದರ್ ಮತ್ತು ಆತನ ಸಹಚರ ವಾಚ್ ರಾಜ್ ಎಂಬವರಿಗೆ ಲಕ್ನೋ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ಘೋಷಿಸಿದೆ.
ರಾಜಾ ಕೊಲಂದರ್ 14 ಜನರನ್ನು ನಿಷ್ಠುರವಾಗಿ ಕೊಂದು, ಅವರ ದೇಹ ಭಾಗಗಳನ್ನು ಕಡಿಯುತ್ತಿದ್ದ, ತಲೆಯನ್ನು ಕತ್ತರಿಸಿ ಅದರಿಂದ ಸೂಪ್ ತಯಾರಿಸಿ ಕುಡಿಯುತ್ತಿದ್ದನು ಎಂಬ ಮಾಹಿತಿ ನ್ಯಾಯಾಲಯದ ಮುಂದಿಟ್ಟಾಗ ಅದು ಭಯಾನಕ ಸತ್ಯವಾಗಿ ಹೊರಬಂದಿತು. ತನಗೆ ಮಾನವರ ತಲೆಯ ಸೂಪ್ ಕುಡಿದರೆ ಮೆದುಳಿನ ಕಾರ್ಯಕ್ಷಮತೆ ಹೆಚ್ಚಾಗುತ್ತದೆ ಎಂಬ ವಿಕೃತ ನಂಬಿಕೆಯಲ್ಲಿ ಈತ ಈ ಕೃತ್ಯಗಳನ್ನು ಎಸಗುತ್ತಿದ್ದನೆಂಬುದು ವಿಚಾರಣೆಯಲ್ಲಿ ತಿಳಿದುಬಂದಿದೆ.
ನ್ಯಾಯಮೂರ್ತಿಗಳು ತೀರ್ಪು ಪ್ರಕಟಿಸುತ್ತಿದ್ದಾಗ ಕೂಡಾ, ರಾಜಾ ಕೊಲಂದರ್ ಯಾವುದೇ ಪಶ್ಚಾತಾಪವಿಲ್ಲದೆ, ನಿರ್ಲಕ್ಷ್ಯಭಾವದಿಂದ ಮಂದಹಾಸ ಬೀರುತ್ತಿದ್ದನೆಂಬುದು ಸಂತ್ರಸ್ತ ಕುಟುಂಬಗಳಿಗೆ ಇನ್ನಷ್ಟು ನೋವು ತಂದಿದೆ.
ಅತಿಕೃೂರ ಹಾಗೂ ಮಾನವೀಯತೆಯ ಎಲ್ಲ ಮಿತಿ ದಾಟಿದ ಈ ಕೊಲೆ ಪ್ರಕರಣದಲ್ಲಿ ರಾಜಾ ಕೊಲಂದರ್ಗಿಂತಲೂ ದೊಡ್ಡ ಪಾತ್ರ ವಾಚ್ ರಾಜ್ ಎಂಬಾತನದ್ದು ಎಂದು ಪ್ರಾಸಿಕ್ಯೂಷನ್ ವಾದಿಸಿದೆ. ಈತನ ಸಹಾಯದಿಂದಲೇ ರಾಜಾ ಹಲವು ಜನರನ್ನು ಅಪಹರಿಸಿ, ಕೊಂದು, ಅವರ ದೇಹವನ್ನು ಭಕ್ಷಿಸುತ್ತಿದ್ದ
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…