ಲಕ್ನೋ: ದೇಶದ ಇತಿಹಾಸದಲ್ಲಿಯೇ ಅತಿಭಯಾನಕ ಮತ್ತು ವಿಕೃತ ಮನಸ್ಥಿತಿಯ ಸರಣಿ ಕೊಲೆಗಾರನೊಬ್ಬನಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದು, ಈ ಪ್ರಕರಣ ಮತ್ತೊಂದು ನೈಜ ಜೀವಂತ ರಕ್ತಚಂಡ ಕಥೆಯಂತೆ ಓದುಗರನು ಅಲುಗಿಸಿದೆ.
ನರಭಕ್ಷಕ ಎಂಬ ಕರಾಳ ಹೆಸರು ಪಡೆದ ರಾಮ್ ನಿರಂಜನ್ ಅಲಿಯಾಸ್ ರಾಜಾ ಕೊಲಂದರ್ ಮತ್ತು ಆತನ ಸಹಚರ ವಾಚ್ ರಾಜ್ ಎಂಬವರಿಗೆ ಲಕ್ನೋ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ಘೋಷಿಸಿದೆ.
ರಾಜಾ ಕೊಲಂದರ್ 14 ಜನರನ್ನು ನಿಷ್ಠುರವಾಗಿ ಕೊಂದು, ಅವರ ದೇಹ ಭಾಗಗಳನ್ನು ಕಡಿಯುತ್ತಿದ್ದ, ತಲೆಯನ್ನು ಕತ್ತರಿಸಿ ಅದರಿಂದ ಸೂಪ್ ತಯಾರಿಸಿ ಕುಡಿಯುತ್ತಿದ್ದನು ಎಂಬ ಮಾಹಿತಿ ನ್ಯಾಯಾಲಯದ ಮುಂದಿಟ್ಟಾಗ ಅದು ಭಯಾನಕ ಸತ್ಯವಾಗಿ ಹೊರಬಂದಿತು. ತನಗೆ ಮಾನವರ ತಲೆಯ ಸೂಪ್ ಕುಡಿದರೆ ಮೆದುಳಿನ ಕಾರ್ಯಕ್ಷಮತೆ ಹೆಚ್ಚಾಗುತ್ತದೆ ಎಂಬ ವಿಕೃತ ನಂಬಿಕೆಯಲ್ಲಿ ಈತ ಈ ಕೃತ್ಯಗಳನ್ನು ಎಸಗುತ್ತಿದ್ದನೆಂಬುದು ವಿಚಾರಣೆಯಲ್ಲಿ ತಿಳಿದುಬಂದಿದೆ.
ನ್ಯಾಯಮೂರ್ತಿಗಳು ತೀರ್ಪು ಪ್ರಕಟಿಸುತ್ತಿದ್ದಾಗ ಕೂಡಾ, ರಾಜಾ ಕೊಲಂದರ್ ಯಾವುದೇ ಪಶ್ಚಾತಾಪವಿಲ್ಲದೆ, ನಿರ್ಲಕ್ಷ್ಯಭಾವದಿಂದ ಮಂದಹಾಸ ಬೀರುತ್ತಿದ್ದನೆಂಬುದು ಸಂತ್ರಸ್ತ ಕುಟುಂಬಗಳಿಗೆ ಇನ್ನಷ್ಟು ನೋವು ತಂದಿದೆ.
ಅತಿಕೃೂರ ಹಾಗೂ ಮಾನವೀಯತೆಯ ಎಲ್ಲ ಮಿತಿ ದಾಟಿದ ಈ ಕೊಲೆ ಪ್ರಕರಣದಲ್ಲಿ ರಾಜಾ ಕೊಲಂದರ್ಗಿಂತಲೂ ದೊಡ್ಡ ಪಾತ್ರ ವಾಚ್ ರಾಜ್ ಎಂಬಾತನದ್ದು ಎಂದು ಪ್ರಾಸಿಕ್ಯೂಷನ್ ವಾದಿಸಿದೆ. ಈತನ ಸಹಾಯದಿಂದಲೇ ರಾಜಾ ಹಲವು ಜನರನ್ನು ಅಪಹರಿಸಿ, ಕೊಂದು, ಅವರ ದೇಹವನ್ನು ಭಕ್ಷಿಸುತ್ತಿದ್ದ
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…