Latest

ಸೈರನ್ ಮೂಲಕ ಕಾರು ಅಡ್ಡಗಟ್ಟಿ ಹಲ್ಲೆ: ಕ್ಯಾಬ್ ಚಾಲಕ ಬಂಧನ”

ಬೆಂಗಳೂರು ನಗರದ ಪುಲಕೇಶಿನಗರದಲ್ಲಿ ಪೊಲೀಸರ ವೇಷದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ನಿತುಲ್ ರಾಜ್ ಎಂಬ ಕ್ಯಾಬ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ವಾರ ಸಂಭವಿಸಿದ ಈ ಘಟನೆ ವೇಳೆ, ಸಂತೋಷ್ ಎಂಬುವವರು ತಮ್ಮ ಕಾರಿನಲ್ಲಿ ಸಾಗುತ್ತಿದ್ದಾಗ, ನಿತುಲ್ ರಾಜ್ ಅವರ ಕಾರಿಗೆ ಅಲ್ಪ ಮಟ್ಟಿನ ಡಿಕ್ಕಿ ಸಂಭವಿಸಿದೆ. ಈ ಸಂದರ್ಭದಲ್ಲಿ ಸಂತೋಷ್ ಅವರು ಕಾರು ನಿಲ್ಲಿಸದೇ ಸಾಗಿದ ಪರಿಣಾಮ, ಕೋಪಗೊಂಡ ನಿತುಲ್ ತನ್ನ ವಾಹನದಲ್ಲಿ ಅಕ್ರಮವಾಗಿ ಸೈರನ್ ಆನಿಸಿಕೊಂಡು ಅವರನ್ನು ಹಿಂಬಾಲಿಸಿದ್ದಾರೆ.

ಅವನು ಕಾರು ನಿಲ್ಲಿಸಿ ತಾನು ಪೊಲೀಸ್ ಅಧಿಕಾರಿ ಎಂದು ಸುಳ್ಳು ಹೇಳಿ, ಸಂತೋಷ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ. ನಂತರ ನಿತುಲ್ ಅಲ್ಲಿಂದ ಪರಾರಿಯಾಗಿದ್ದ.

ಈ ಘಟನೆ ಬಗ್ಗೆ ಸಂತೋಷ್ ಅವರು ಪುಲಕೇಶಿನಗರ ಪೊಲೀಸ್ ಠಾಣೆಗೆ ದೂರು ನೀಡಿದ ಮೇಲೆ, ಪೊಲೀಸರು ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ನಿತುಲ್ ರಾಜ್ ನ ತಕ್ಷಣ ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ವೇಷವನ್ನು ದುರುಪಯೋಗಪಡಿಸಿಕೊಂಡಿರುವ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

nazeer ahamad

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

5 minutes ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

8 minutes ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

19 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

24 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

24 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

24 hours ago