Categories: CrimeLatest

ದ್ವೇಷದ ಹಿನ್ನೆಲೆ ಕಾರಿಗೆ ಉದ್ದೇಶಪೂರ್ವಕ ಡಿಕ್ಕಿ; ಯುವಕ ಬಂಧನ

ಮುರ್ಡೇಶ್ವರ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕಾರಿಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದು ಜೀವಕ್ಕೆ ಅಪಾಯ ಉಂಟುಮಾಡಲು ಯತ್ನಿಸಿದ ಆರೋಪದಡಿ ಮುರ್ಡೇಶ್ವರ ಪೊಲೀಸರು ಯುವಕನೊಬ್ಬನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಸದ್ಯ ಆತ ಕಾರವಾರ ಜಿಲ್ಲಾ ಕಾರಾಗೃಹದಲ್ಲಿದ್ದಾನೆ.

ಮಾವಳ್ಳಿ-02 ನಿವಾಸಿ ಗಣೇಶ ಜಯಂತ ನಾಯ್ಕ (24) ನೀಡಿದ ದೂರಿನ ಮೇರೆಗೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರಿನ ಪ್ರಕಾರ, ಜುಲೈ 3ರಂದು ಮಧ್ಯಾಹ್ನ ಸುಮಾರು 2.20ರ ವೇಳೆಗೆ ಗಣೇಶ ನಾಯ್ಕ ಅವರು ಬ್ಯಾಂಕ್ ಕೆಲಸದ ನಿಮಿತ್ತ ತಮ್ಮ ಕಾರಿನಲ್ಲಿ ಬಸ್ತಿ ರಸ್ತೆಯ ಮೂಲಕ ಮುರ್ಡೇಶ್ವರದತ್ತ ತೆರಳುತ್ತಿದ್ದರು. ಈ ವೇಳೆ ಪಿ.ಎನ್.ಇ. ಶೋರೂಮ್ ಸಮೀಪ ದೀವಗಿರಿ ನಿವಾಸಿ ಹೃತೀಕ ಮಂಜುನಾಥ ನಾಯ್ಕ (26) ತನ್ನ ಕಾರನ್ನು ಅತಿವೇಗವಾಗಿ ಚಲಾಯಿಸಿ ಅವರ ವಾಹನದತ್ತ ನುಗ್ಗಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಡಿಕ್ಕಿಯಿಂದ ತಪ್ಪಿಸಿಕೊಳ್ಳಲು ಗಣೇಶ ನಾಯ್ಕ ಅವರು ಕಾರಿನ ವೇಗ ಹೆಚ್ಚಿಸಿದರೂ, ಆರೋಪಿಯು ಹಿಂಬದಿಯಿಂದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯ ಕಾಂಪೌಂಡ್ ಗೋಡೆಗೆ ಅಪ್ಪಳಿಸಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕೃತ್ಯವು ಉದ್ದೇಶಪೂರ್ವಕವಾಗಿದ್ದು, ಹಿಂದಿನಿಂದಲೂ ಇದ್ದ ವೈಯಕ್ತಿಕ ದ್ವೇಷವೇ ಘಟನೆಗೆ ಕಾರಣ ಎಂದು ದೂರುದಾರ ಆರೋಪಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಮುರ್ಡೇಶ್ವರ ಪೊಲೀಸರು ತನಿಖೆ ನಡೆಸಿ ಆರೋಪಿ ಹೃತೀಕ ಮಂಜುನಾಥ ನಾಯ್ಕನನ್ನು ಬಂಧಿಸಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪ್ರಕರಣದ ಮುಂದಿನ ತನಿಖೆಯನ್ನು ಪಿಎಸ್‌ಐ ಹಣಮಂತ ಬಿರಾದಾರ ಅವರ ನೇತೃತ್ವದಲ್ಲಿ ಮುಂದುವರಿಸಲಾಗಿದೆ.

ಭ್ರಷ್ಟರ ಬೇಟೆ

Recent Posts

₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸರ್ವೇ ಅಧಿಕಾರಿ ಲೋಕಾಯುಕ್ತ ಬಲೆಗೆ; ಪರವಾನಗಿ ಪಡೆದ ಸರ್ವೆಯರ್‌ ಸಹ ಬಂಧನ

ಹರಿಹರ: ರೈತ ಮಹಿಳೆಯ ಜಮೀನಿನ ಸರ್ವೇ ಸ್ಕೆಚ್ ತಯಾರಿಸಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಹರಿಹರ ಭೂ ದಾಖಲೆಗಳ…

2 hours ago

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಮಂಕಿ ಠಾಣೆಯ ಪಿಎಸ್‌ಐ ಬಂಧನ, ಪೋಕ್ಸೋ ಕಾಯ್ದೆಯಡಿ ಪ್ರಕರಣ

ಭಟ್ಕಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಮಂಕಿ ಪೊಲೀಸ್ ಠಾಣೆಯ ಪೊಲೀಸ್…

11 hours ago

₹80 ಸಾವಿರ ಸಂಬಳ… ಆದರೆ ₹100 ಕೋಟಿ ಆಸ್ತಿ! ತೆಲಂಗಾಣ ವಾಟರ್ ಬೋರ್ಡ್ ಜಿಎಂ ವಿರುದ್ಧ ಭ್ರಷ್ಟಾಚಾರದ ಸ್ಫೋಟಕ ಆರೋಪ

ತೆಲಂಗಾಣ ರಾಜ್ಯದ ವಾಟರ್ ಬೋರ್ಡ್‌ನ ಜನರಲ್ ಮ್ಯಾನೇಜರ್‌ ಆಗಿದ್ದ ಒಬ್ಬ ಸರ್ಕಾರಿ ಅಧಿಕಾರಿ ವಿರುದ್ಧ ಭಾರೀ ಪ್ರಮಾಣದ ಅಕ್ರಮ ಆಸ್ತಿ…

11 hours ago

ಹತ್ತು ಸಾವಿರ ರೂಪಾಯಿ ಶಾಪಿಂಗ್ ಮಾಡಿಸಿಕೊಟ್ಟರೆ ನನ್ನ ಜೊತೆ ಮಲಗುತ್ತೇನೆ ಎಂದು ಇವಳು ಹೇಳಿದ್ದಳು; ವೈರಲ್ ವಿಡಿಯೋಗೆ ನೆಟ್ಟಿಗರ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಕ್ಷಣಿಕ ಜನಪ್ರಿಯತೆ, ಲೈಕ್ಸ್ ಮತ್ತು ಫಾಲೋವರ್ಸ್ ಗಳಿಸುವ ಹುಚ್ಚು ಇಂದಿನ ಯುವಪೀಳಿಗೆಯನ್ನು ಯಾವ ಮಟ್ಟಿಗೆ ಕೊಂಡೊಯ್ಯುತ್ತಿದೆ ಎಂಬುದಕ್ಕೆ…

11 hours ago

ಪೋಕ್ಸೊ ಆರೋಪಿ ಪರಾರಿ ಪ್ರಕರಣ: ಅಫಜಲಪುರ ಠಾಣೆ PSI ಸೋಮಲಿಂಗ ಒಡೆಯರ್ ಅಮಾನತು

ಪೋಕ್ಸೊ ಪ್ರಕರಣದ ಆರೋಪಿಯೊಬ್ಬ ಪೊಲೀಸ್ ಠಾಣೆಯಿಂದಲೇ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯ PSI ಸೋಮಲಿಂಗ…

11 hours ago

ಅಕ್ರಮ ಸಂಬಂಧ ಬಯಲಾದ ಬಳಿಕ ಗಂಡನ ಕೊಲೆ: ಅಪಘಾತದ ನಾಟಕವಾಡಿ ಕಾಲುವೆಗೆ ಶವ ಎಸೆದ ಪತ್ನಿ ಮತ್ತು ಪ್ರೇಮಿ!

ಹರಿಯಾಣದ ರೇವಾರಿ ಜಿಲ್ಲೆಯಲ್ಲಿ ನಡೆದ ಭೀಕರ ಕೊಲೆ ಪ್ರಕರಣವೊಂದು 23 ದಿನಗಳ ಬಳಿಕ ಬಯಲಾಗಿದ್ದು, ಆರಂಭದಲ್ಲಿ ಆತ್ಮಹತ್ಯೆ ಅಥವಾ ಅಪಘಾತವೆಂದು…

11 hours ago