ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ ವಿರುದ್ಧ ಗಂಭೀರ ದೂರು ದಾಖಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಸಾಫ್ಟ್ವೇರ್ ಎಂಜಿನಿಯರ್ ಒಬ್ಬರಿಂದ ಸುಮಾರು ₹10 ಕೋಟಿ ವಂಚನೆ ಮಾಡಲಾಗಿದೆ ಎಂಬ ಆರೋಪ ಇದೀಗ ಟಾಲಿವುಡ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಪೊಲೀಸ್ ಮಾಹಿತಿ ಪ್ರಕಾರ, ಲಂಡನ್ನಲ್ಲಿ ವಾಸಿಸುವ ಧರ್ಮೇಂದ್ರ ಎಂಬ ಸಾಫ್ಟ್ವೇರ್ ಎಂಜಿನಿಯರ್ ಅವರನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಹಣ ಮತ್ತು ಆಸ್ತಿ ಪಡೆಯಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪದಂತೆ, 5 ಕೆಜಿ ಚಿನ್ನ, ಫ್ಲಾಟ್ ಹಾಗೂ ₹3 ಕೋಟಿ ಮೌಲ್ಯದ ವಿಲ್ಲಾಗಾಗಿ ಮುಂಗಡ ಹಣ ಪಡೆದುಕೊಳ್ಳಲಾಗಿದೆ. ಒಟ್ಟು ₹9.83 ಕೋಟಿ ಮೌಲ್ಯದ ವಂಚನೆ ನಡೆದಿದೆ ಎಂದು ಹೇಳಲಾಗಿದೆ.
ಮೊದಲಿಗೆ ಮದುವೆ ನಿಶ್ಚಯವಾದರೂ, ಬಳಿಕ ಅದನ್ನು ರದ್ದು ಮಾಡಲಾಗಿದೆ. ನಂತರ ಮತ್ತೆ ಮದುವೆಯಾಗುವುದಾಗಿ ಹೇಳಿ ಹಣ ಹಿಂತಿರುಗಿಸದೇ ವಂಚನೆ ಮುಂದುವರಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಪ್ರಕರಣದಲ್ಲಿ ಜಯಂತ್ ಎಂಬಾತನೊಂದಿಗೆ ಸೇರಿ ‘ಹನಿಟ್ರ್ಯಾಪ್’ ರೀತಿಯಲ್ಲಿ ಮೋಸ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದಲ್ಲದೆ, ನಟಿಯ ಸಹೋದರಿ ದಿವ್ಯಾ ರೆಡ್ಡಿ ಕೂಡ ಸುಮಾರು ₹50 ಲಕ್ಷ ವಂಚನೆಗೆ ಸಂಬಂಧಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ಈ ಸಂಬಂಧ ಹೈದರಾಬಾದ್ ಸಿಸಿಎಸ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮತ್ತೊಂದೆಡೆ, ಆಶು ರೆಡ್ಡಿ ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದು, “ಇವು ಸುಳ್ಳು ಆರೋಪಗಳು” ಎಂದು ಪ್ರತಿಕ್ರಿಯಿಸಿದ್ದಾರೆ.
ಪ್ರಕರಣದ ನಿಜಾಸತ್ಯ ತನಿಖೆಯ ಬಳಿಕವೇ ಹೊರಬರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…