ಬೆಂಗಳೂರು: ಜಾತಿ ನಿಂದನೆ ಹಾಗೂ ದೌರ್ಜನ್ಯ ಆರೋಪದ ನಡುವೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ ವಿರುದ್ಧ ಬೆಂಗಳೂರು ನಗರದ ಜೆ.ಪಿ. ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿರುವ ಸಂಗತಿ ಬೆಳಕಿಗೆ ಬಂದಿದೆ.
ಜಾನಪದ ಕಲಾವಿದ ಜೋಗಿಲ ಸಿದ್ದರಾಜು ನೀಡಿದ ದೂರಿನಂತೆ, ಕಳೆದ ಮೂರು ವರ್ಷಗಳಿಂದ ಪ್ರಾಯೋಜಿತ ಜಾನಪದ ತಂಡಗಳ ಸಂಭಾವನೆ ಬಿಡುಗಡೆ ಮಾಡುವಂತೆ ಕೇಳಿದಾಗ, ಗಾಯತ್ರಿ ಅವರು ತಮ್ಮ ಜಾತಿಯನ್ನು ನಿಂದಿಸಿ ಅಪಮಾನಿಸಿದ್ದು ಮಾತ್ರವಲ್ಲದೆ, ಅವರ ಮೊಬೈಲ್ ಕಸಿದು ಹಲ್ಲೆಗೂ ಮುಂದಾಗಿದ್ದಾರಂತೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಜು ಅವರು ಈಗಾಗಲೇ ಮುಖ್ಯಮಂತ್ರಿ ಅವರಿಗೂ ದೂರು ಸಲ್ಲಿಸಿದ್ದಾರೆ.
ಇದರ ಹಿನ್ನೆಲೆಯಲ್ಲಿ ಸಂಸ್ಕೃತಿ ಇಲಾಖೆಯ ಅತಿರೇಖ ಮತ್ತು ಅಧಿಕಾರ ದುರಾವಳಿಯ ವಿರುದ್ಧ ಕಲಾವಿದರೊಳಗೆ ಆಕ್ರೋಶವೂ ವ್ಯಕ್ತವಾಗಿದೆ. ಈ ವಿವಾದದ ಹಿನ್ನೆಲೆಯಲ್ಲಿ ಸಮಾಧಾನ ಸಭೆ ನಡೆಸಲು ಪ್ರಯತ್ನಿಸಲಾದರೂ, ಗಾಯತ್ರಿ ಅವರು ಸಭೆಗೆ ಹಾಜರಾಗದ ವಿಷಯ ಕೂಡ ಕಲಾವಿದರ ಅಸಮಾಧಾನಕ್ಕೆ ಕಾರಣವಾಗಿದೆ.
ಈ ಸಂಬಂಧ ನಿಗದಿತ ಪ್ರಕ್ರಿಯೆಯಂತೆ ಪೊಲೀಸರು ಕ್ರಮ ಕೈಗೊಂಡಿದ್ದು, ಕೆ.ಎಂ. ಗಾಯತ್ರಿ ವಿರುದ್ಧ ದೂರು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಉತ್ತರ ಪ್ರದೇಶದ ಫತೇಪುರ ಜಿಲ್ಲೆಯಲ್ಲಿ ನರ್ಬಯಾ ಪ್ರಕರಣವನ್ನು ನೆನಪಿಸುವಂತೆಯೇ ಒಂದು ಹೃದಯವಿದ್ರಾವಕ ಅಪರಾಧ ಬೆಳಕಿಗೆ ಬಂದಿದೆ. ಯುವಕನೊಬ್ಬ ತನ್ನ ಪ್ರೇಮಿಕೆಯನ್ನು…
ಹೈದರಾಬಾದ್, ಜುಲೈ 31: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಬಾಲ್ಯವಿವಾಹದ ಸಂಸ್ಕೃತಿಯ ಕುರಿತಂತೆ ಆತಂಕ ಹೆಚ್ಚಿಸುವ ಘಟನೆ ಬೆಳಕಿಗೆ ಬಂದಿದೆ. ಕೇವಲ…
ಮುಂಡಗೋಡ: ಕರ್ನಾಟಕ ಸರ್ಕಾರದ ಆದೇಶದ ಪ್ರಕಾರ 2025 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ…
ಮುಂಡಗೋಡ: ತಾಲೂಕಿನ ಕಾತೂರ ವಲಯದ ಓರಲಗಿ ಗಸ್ತಿನ ಮಾಲತೇಶ ಗೊಂದಿ ಅವರ ಹೊಲದಲ್ಲಿ ಪೈಪ್ ನಲ್ಲಿ ಸಿಕ್ಕಿಹಾಕಿಕೊಂಡು ಒದ್ದಾಡುತಿದ್ದ ನಾಗರಹಾವನ್ನು…
ಬೆಂಗಳೂರು – ನಟಿ ರಮ್ಯಾ ಮತ್ತು ನಟ ದರ್ಶನ್ ಅವರ ಅಭಿಮಾನಿಗಳ ನಡುವಿನ ಸಾಮಾಜಿಕ ಮಾಧ್ಯಮ ಜಟಾಪಟಿಗೆ ಸಂಬಂಧಿಸಿದಂತೆ ಇದೀಗ…
ಮಂಡ್ಯ, ಜುಲೈ 31: "ನಟ ದರ್ಶನ್ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬೇಜವಾಬ್ದಾರಿತನದ ಮೂಲಕ ಕೆಟ್ಟ ಕಾಮೆಂಟ್ಗಳು ಮಾಡುತ್ತಿರುವುದು ಅನಾವಶ್ಯಕ.…