ಬೆಂಗಳೂರು: ಜಾತಿ ನಿಂದನೆ ಹಾಗೂ ದೌರ್ಜನ್ಯ ಆರೋಪದ ನಡುವೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ ವಿರುದ್ಧ ಬೆಂಗಳೂರು ನಗರದ ಜೆ.ಪಿ. ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿರುವ ಸಂಗತಿ ಬೆಳಕಿಗೆ ಬಂದಿದೆ.
ಜಾನಪದ ಕಲಾವಿದ ಜೋಗಿಲ ಸಿದ್ದರಾಜು ನೀಡಿದ ದೂರಿನಂತೆ, ಕಳೆದ ಮೂರು ವರ್ಷಗಳಿಂದ ಪ್ರಾಯೋಜಿತ ಜಾನಪದ ತಂಡಗಳ ಸಂಭಾವನೆ ಬಿಡುಗಡೆ ಮಾಡುವಂತೆ ಕೇಳಿದಾಗ, ಗಾಯತ್ರಿ ಅವರು ತಮ್ಮ ಜಾತಿಯನ್ನು ನಿಂದಿಸಿ ಅಪಮಾನಿಸಿದ್ದು ಮಾತ್ರವಲ್ಲದೆ, ಅವರ ಮೊಬೈಲ್ ಕಸಿದು ಹಲ್ಲೆಗೂ ಮುಂದಾಗಿದ್ದಾರಂತೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಜು ಅವರು ಈಗಾಗಲೇ ಮುಖ್ಯಮಂತ್ರಿ ಅವರಿಗೂ ದೂರು ಸಲ್ಲಿಸಿದ್ದಾರೆ.
ಇದರ ಹಿನ್ನೆಲೆಯಲ್ಲಿ ಸಂಸ್ಕೃತಿ ಇಲಾಖೆಯ ಅತಿರೇಖ ಮತ್ತು ಅಧಿಕಾರ ದುರಾವಳಿಯ ವಿರುದ್ಧ ಕಲಾವಿದರೊಳಗೆ ಆಕ್ರೋಶವೂ ವ್ಯಕ್ತವಾಗಿದೆ. ಈ ವಿವಾದದ ಹಿನ್ನೆಲೆಯಲ್ಲಿ ಸಮಾಧಾನ ಸಭೆ ನಡೆಸಲು ಪ್ರಯತ್ನಿಸಲಾದರೂ, ಗಾಯತ್ರಿ ಅವರು ಸಭೆಗೆ ಹಾಜರಾಗದ ವಿಷಯ ಕೂಡ ಕಲಾವಿದರ ಅಸಮಾಧಾನಕ್ಕೆ ಕಾರಣವಾಗಿದೆ.
ಈ ಸಂಬಂಧ ನಿಗದಿತ ಪ್ರಕ್ರಿಯೆಯಂತೆ ಪೊಲೀಸರು ಕ್ರಮ ಕೈಗೊಂಡಿದ್ದು, ಕೆ.ಎಂ. ಗಾಯತ್ರಿ ವಿರುದ್ಧ ದೂರು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…