ಬೆಂಗಳೂರು: ಜಾತಿ ನಿಂದನೆ ಹಾಗೂ ದೌರ್ಜನ್ಯ ಆರೋಪದ ನಡುವೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ ವಿರುದ್ಧ ಬೆಂಗಳೂರು ನಗರದ ಜೆ.ಪಿ. ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿರುವ ಸಂಗತಿ ಬೆಳಕಿಗೆ ಬಂದಿದೆ.
ಜಾನಪದ ಕಲಾವಿದ ಜೋಗಿಲ ಸಿದ್ದರಾಜು ನೀಡಿದ ದೂರಿನಂತೆ, ಕಳೆದ ಮೂರು ವರ್ಷಗಳಿಂದ ಪ್ರಾಯೋಜಿತ ಜಾನಪದ ತಂಡಗಳ ಸಂಭಾವನೆ ಬಿಡುಗಡೆ ಮಾಡುವಂತೆ ಕೇಳಿದಾಗ, ಗಾಯತ್ರಿ ಅವರು ತಮ್ಮ ಜಾತಿಯನ್ನು ನಿಂದಿಸಿ ಅಪಮಾನಿಸಿದ್ದು ಮಾತ್ರವಲ್ಲದೆ, ಅವರ ಮೊಬೈಲ್ ಕಸಿದು ಹಲ್ಲೆಗೂ ಮುಂದಾಗಿದ್ದಾರಂತೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಜು ಅವರು ಈಗಾಗಲೇ ಮುಖ್ಯಮಂತ್ರಿ ಅವರಿಗೂ ದೂರು ಸಲ್ಲಿಸಿದ್ದಾರೆ.
ಇದರ ಹಿನ್ನೆಲೆಯಲ್ಲಿ ಸಂಸ್ಕೃತಿ ಇಲಾಖೆಯ ಅತಿರೇಖ ಮತ್ತು ಅಧಿಕಾರ ದುರಾವಳಿಯ ವಿರುದ್ಧ ಕಲಾವಿದರೊಳಗೆ ಆಕ್ರೋಶವೂ ವ್ಯಕ್ತವಾಗಿದೆ. ಈ ವಿವಾದದ ಹಿನ್ನೆಲೆಯಲ್ಲಿ ಸಮಾಧಾನ ಸಭೆ ನಡೆಸಲು ಪ್ರಯತ್ನಿಸಲಾದರೂ, ಗಾಯತ್ರಿ ಅವರು ಸಭೆಗೆ ಹಾಜರಾಗದ ವಿಷಯ ಕೂಡ ಕಲಾವಿದರ ಅಸಮಾಧಾನಕ್ಕೆ ಕಾರಣವಾಗಿದೆ.
ಈ ಸಂಬಂಧ ನಿಗದಿತ ಪ್ರಕ್ರಿಯೆಯಂತೆ ಪೊಲೀಸರು ಕ್ರಮ ಕೈಗೊಂಡಿದ್ದು, ಕೆ.ಎಂ. ಗಾಯತ್ರಿ ವಿರುದ್ಧ ದೂರು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…
ಬೆಂಗಳೂರು ನಗರದ ಎಲೆಕ್ಟ್ರಾನಿಕ್ಸ್ ಸಿಟಿ 2ನೇ ಹಂತದಲ್ಲಿ ಖಾಸಗಿ ಜಾಗ ಪ್ರವೇಶ ವಿಚಾರವಾಗಿ ಆರಂಭವಾದ ವಾಗ್ವಾದ ಚಾಕು ದಾಳಿಗೆ ತಿರುಗಿ,…
ಬೆಂಗಳೂರು: ನಗರದ ಹೊರವಲಯದ ಜಿಗಣಿಯ ಪಟಾಲಮ್ಮ ಬಡಾವಣೆಯಲ್ಲಿ ವಿವಾಹಿತ ಮಹಿಳೆಯೊಬ್ಬಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ.…