ಬೆಂಗಳೂರು: ಜಾತಿ ನಿಂದನೆ ಹಾಗೂ ದೌರ್ಜನ್ಯ ಆರೋಪದ ನಡುವೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ ವಿರುದ್ಧ ಬೆಂಗಳೂರು ನಗರದ ಜೆ.ಪಿ. ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿರುವ ಸಂಗತಿ ಬೆಳಕಿಗೆ ಬಂದಿದೆ.
ಜಾನಪದ ಕಲಾವಿದ ಜೋಗಿಲ ಸಿದ್ದರಾಜು ನೀಡಿದ ದೂರಿನಂತೆ, ಕಳೆದ ಮೂರು ವರ್ಷಗಳಿಂದ ಪ್ರಾಯೋಜಿತ ಜಾನಪದ ತಂಡಗಳ ಸಂಭಾವನೆ ಬಿಡುಗಡೆ ಮಾಡುವಂತೆ ಕೇಳಿದಾಗ, ಗಾಯತ್ರಿ ಅವರು ತಮ್ಮ ಜಾತಿಯನ್ನು ನಿಂದಿಸಿ ಅಪಮಾನಿಸಿದ್ದು ಮಾತ್ರವಲ್ಲದೆ, ಅವರ ಮೊಬೈಲ್ ಕಸಿದು ಹಲ್ಲೆಗೂ ಮುಂದಾಗಿದ್ದಾರಂತೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಜು ಅವರು ಈಗಾಗಲೇ ಮುಖ್ಯಮಂತ್ರಿ ಅವರಿಗೂ ದೂರು ಸಲ್ಲಿಸಿದ್ದಾರೆ.
ಇದರ ಹಿನ್ನೆಲೆಯಲ್ಲಿ ಸಂಸ್ಕೃತಿ ಇಲಾಖೆಯ ಅತಿರೇಖ ಮತ್ತು ಅಧಿಕಾರ ದುರಾವಳಿಯ ವಿರುದ್ಧ ಕಲಾವಿದರೊಳಗೆ ಆಕ್ರೋಶವೂ ವ್ಯಕ್ತವಾಗಿದೆ. ಈ ವಿವಾದದ ಹಿನ್ನೆಲೆಯಲ್ಲಿ ಸಮಾಧಾನ ಸಭೆ ನಡೆಸಲು ಪ್ರಯತ್ನಿಸಲಾದರೂ, ಗಾಯತ್ರಿ ಅವರು ಸಭೆಗೆ ಹಾಜರಾಗದ ವಿಷಯ ಕೂಡ ಕಲಾವಿದರ ಅಸಮಾಧಾನಕ್ಕೆ ಕಾರಣವಾಗಿದೆ.
ಈ ಸಂಬಂಧ ನಿಗದಿತ ಪ್ರಕ್ರಿಯೆಯಂತೆ ಪೊಲೀಸರು ಕ್ರಮ ಕೈಗೊಂಡಿದ್ದು, ಕೆ.ಎಂ. ಗಾಯತ್ರಿ ವಿರುದ್ಧ ದೂರು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…