ಕಲಬುರಗಿ ಜಿಲ್ಲೆಯ ರಟಕಲ್ ಪೊಲೀಸ್ ಠಾಣೆಯ ಪಿಎಸ್ಐ ಗಂಗಮ್ಮ ಅವರನ್ನು ಅಮಾನತುಗೊಳಿಸಲಾಗಿದೆ. ಎರಡು ಕುಟುಂಬಗಳ ನಡುವಿನ ಜಮೀನು ವಿವಾದವನ್ನು ಇತ್ಯರ್ಥಪಡಿಸಲು ನಡೆದ ಮಾತುಕತೆ ವೇಳೆ, ಪರಿಶಿಷ್ಟ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿದ ಆರೋಪ ಅವರ ಮೇಲೆ ಮೂಡಿತ್ತು.
ಸೇರಿ ಗ್ರಾಮದ ಅಣಬಸಪ್ಪಗೌಡ ಪಾಟೀಲ್ ಹಾಗೂ ಮತ್ತೊಂದು ಕುಟುಂಬದ ನಡುವಿನ ವಿವಾದವನ್ನು ಸೀಮಿತಗೊಳಿಸಲು ಪಿಎಸ್ಐ ಗಂಗಮ್ಮ ಚರ್ಚೆ ನಡೆಸುತ್ತಿದ್ದಾಗ, ಪರಿಶಿಷ್ಟ ಸಮುದಾಯದ ವಿರುದ್ಧ ನಿಂದನೀಯ ಪದಗಳನ್ನು ಬಳಸಿದರು ಎಂಬ ಆರೋಪ ಹೊರಿಸಲಾಗಿದೆ. ಇದನ್ನು ಗಮನಿಸಿದ ದಲಿತ ಪ್ಯಾಂಥರ್ ಮತ್ತು ದಲಿತ ಸೇನೆ ಸಂಘಟನೆಗಳ ಪದಾಧಿಕಾರಿಗಳು ಚಿಂಚೋಳಿ ಡಿವೈಎಸ್ಪಿ ಹಾಗೂ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದರು.
ವಿಷಯದ ಸತ್ಯಾಸತ್ಯತೆ ಪರಿಶೀಲಿಸಿದ ಈಶಾನ್ಯ ವಲಯ ಐಜಿಪಿ ಅಜಯ್ ಹಿರೋಳಿ ಅವರ ವರದಿಯ ಮೇರೆಗೆ ಪಿಎಸ್ಐ ಗಂಗಮ್ಮ ಅವರನ್ನು ಅಮಾನತುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ.
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…