Latest

ಮಾದಕ ವಸ್ತುಗಳ ಮಾರಾಟದ ವಿರುದ್ಧ ಸಿ.ಸಿ.ಬಿ. ಪೊಲೀಸರ ಭರ್ಜರಿ ಕಾರ್ಯಾಚರಣೆ

ಮೈಸೂರು ನಗರದ ಸಿ.ಸಿ.ಬಿ. ಪೊಲೀಸರು ಇತ್ತೀಚೆಗೆ ಹಲವಾರು ಗಾಂಜಾ ಹಾಗೂ ಎಂ.ಡಿ.ಎA.ಎ. ಡ್ರಗ್ಸ್ ಮಾರಾಟದ ಜಾಲಗಳ ಮೇಲೆ ದಾಳಿ ಮಾಡಿ ಪ್ರಕರಣಗಳನ್ನು ದಾಖಲಿಸಿದ್ದು, ಅದೇ ರೀತಿ ಸದರಿ ಕಾರ್ಯವನ್ನು ಮುಂದುವರೆಸಿ ದಿನಾಂಕ: ೨೨/೧೦/೨೦೨೨ ರಂದು ಖಚಿತ ಮಾಹಿತಿ ಮೇರೆಗೆ ಬನ್ನಿಮಂಟಪದ ಹನುಮಂತನಗರ ರಸ್ತೆಯಲ್ಲಿ ದಾಳಿ ಮಾಡಿ ಅಲ್ಲಿ ಅಕ್ರಮವಾಗಿ ಕಾರಿನೊಳಗಡೆ ಗಾಂಜಾ ಇಟ್ಟುಕೊಂಡು ಗಿರಾಕಿಗಳನ್ನು ಅಲ್ಲಿಗೆ ಕರೆಯಿಸಿಕೊಂಡು ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ ಅವರ ವಶದಲ್ಲಿದ್ದ ೫ ಕೆ.ಜಿ. ೬೯೧ ಗ್ರಾಂ ತೂಕದ ಗಾಂಜಾ, ಒಂದು ಮಾರುತಿ ೮೦೦ ಕಾರು, ೧೦,೦೦೦/-ರೂ ನಗರದು ಹಾಗೂ ೩ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿರುತ್ತಾರೆ. ನಂತರ ಈ ಸಂಬAಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಅದೇ ರೀತಿ ದಿನಾಂಕ: ೨೩/೧೦/೨೦೨೨ ರಂದು ಸಿ.ಸಿ.ಬಿ. ಪೊಲೀಸರು ಖಚಿತ ಮಾಹಿತಿ ಮೇರೆಗೆ ನರಸಿಂಹರಾಜ ಪೊಲೀಸ್ ಠಾಣೆ ಸರಹದ್ದು ಮಂಡಿ ಮೊಹಲ್ಲಾದ ೨ನೇ ಈದ್ಗಾದ ಸಿ.ವಿ. ರಸ್ತೆಯ ೭ನೇ ಕ್ರಾಸ್‌ನಲ್ಲಿರುವ ಮನೆ ನಂ: ೩೩೧೦ ರ ಮೇಲೆ ದಾಳಿ ಮಾಡಿ ಅಲ್ಲಿ ಗಾಂಜಾವನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊAಡು ಬೇರೆಯವರಿಗೆ ಮಾರಾಟ ಮಾಡುತ್ತಿದ್ದ ಒಬ್ಬ ವ್ಯಕ್ತಿಯನ್ನು ಬಂಧಿಸಿ ಆತನ ವಶದಲ್ಲಿದ್ದ ೪೧ ಕೆ.ಜಿ. ತೂಕದ ಗಾಂಜಾವನ್ನು ವಶಪಡಿಸಿಕೊಂಡಿರುತ್ತಾರೆ. ಈ ಸಂಬAಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಆರೋಪಿಗಳು ಸದರಿ ಗಾಂಜಾವನ್ನು ಎಲ್ಲಿಂದ ಮತ್ತು ಯಾರಿಂದ ಖರೀದಿ ಮಾಡಿಕೊಂಡು ತರುತ್ತಿದ್ದರು ಎಂಬ ಬಗ್ಗೆ ಹಾಗೂ ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿರುತ್ತದೆ.
ಈ ದಾಳಿ ಕಾರ್ಯಗಳನ್ನು ಮೈಸೂರು ನಗರದ ಡಿ.ಸಿ.ಪಿ. ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ರವರಾದ ಶ್ರೀಮತಿ. ಗೀತ.ಎಂ.ಎಸ್., ಐ.ಪಿ.ಎಸ್. ಮತ್ತು ಸಿ.ಸಿ.ಬಿ.ಯ ಎ.ಸಿ.ಪಿ. ಅಶ್ವಥನಾರಾಯಣ.ಸಿ.ಕೆ.ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ.ಯ ಇನ್ಸ್ಪೆಕ್ಟರ್ ಮಲ್ಲೇಶ.ಎ., ಎ.ಎಸ್.ಐ. ರಾಜು, ಸಿಬ್ಬಂದಿಗಳಾದ ಅನಿಲ್, ಸುಬಾನಲ್ಲಾ ಬಾಲ್‌ದಾರ್, ಡಿ.ಶ್ರೀನಿವಾಸಪ್ರಸಾದ್, ಜೋಸೆಫ್ ನೊರೋನ್ಹ, ರವಿಕುಮಾರ್, ರಾಧೇಶ್, ಜನಾರ್ಧನರಾವ್, ಶ್ರೀನಿವಾಸ.ಕೆ.ಜಿ., ಅರುಣ್‌ಕುಮಾರ್, ರಘು, ಮಮತ ರವರುಗಳು ಮಾಡಿರುತ್ತಾರೆ.
ಸದರಿ ಕಾರ್ಯಾಚರಣೆಯನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ. ಚಂದ್ರಗುಪ್ತ, ಐ.ಪಿ.ಎಸ್.ರವರು ಪ್ರಶಂಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಆರ್ಥಿಕ ಸಂಕಷ್ಟದಿಂದ ಆಘಾತಕರ ನಿರ್ಧಾರ: ಮಗುವಿಗೆ ಇಲಿ ಪಾಷಾಣವಿಲ್ಲಿ ಟೀ ಕುಡಿಸಿ ತಾಯಿಯ ಆತ್ಮಹತ್ಯೆ ಯತ್ನ”

ಬೆಂಗಳೂರು: ಮನೆಗೂಟದ ಕಲಹ, ಆರ್ಥಿಕ ಸಂಕಷ್ಟಗಳು ಇನ್ನೊಂದು ಭೀಕರ ಘಟನೆಗೆ ಕಾರಣವಾಗಿವೆ. ತಾಯಿಯೊಬ್ಬಳು ತನ್ನ ಮಗುಗೂ ಸಹ ಇಲಿ ಪಾಷಾಣ…

8 minutes ago

ವಿವಾಹೇತರ ಸಂಬಂಧದ ದುರಂತ ಅಂತ್ಯ: ನೆಲ್ಲೂರಿನಲ್ಲಿ ಪ್ರೇಮಿಯ ಹತ್ಯೆ.!

ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಒಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ವಿವಾಹೇತರ ಸಂಬಂಧದ ಹಿನ್ನೆಲೆಯಲ್ಲಿ ನಡೆದ ಈ ಹತ್ಯೆ ಪ್ರಕರಣದ ಹಿಂದೆ…

28 minutes ago

ಧರ್ಮಸ್ಥಳ: ಆರನೇ ಪಾಯಿಂಟ್ ನಲ್ಲಿ ಅಸ್ತಿಪಂಜರ ಪತ್ತೆ.

ಬೆಳ್ತಂಗಡಿ, ಜುಲೈ 31: ಧರ್ಮಸ್ಥಳದ ನಿಗೂಢ ಶವ ಹೂತು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT)ಕ್ಕೆ…

2 hours ago

ಕೊಪ್ಪಳದಲ್ಲಿ ಲೋಕಾಯುಕ್ತ ದಾಳಿ: ಮಾಜಿ ಹೊರಗುತ್ತಿಗೆ ನೌಕರ ಕಳಕಪ್ಪ ವಿರುದ್ಧ ಅಕ್ರಮ ಆಸ್ತಿ ಪತ್ತೆ

ಕೊಪ್ಪಳ, ಜುಲೈ 31: ರಾಜ್ಯದ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ ಹಿಂದೆ ಹೊರಗುತ್ತಿಗೆ ಆಧಾರಿತ ಕೆಲಸ ಮಾಡುತ್ತಿದ್ದ ಕಳಕಪ್ಪ…

2 hours ago

ಶಾವಂತಗೇರಾ ಪಿಡಿಒ ಅಮಾನತು: ಮನರೇಗಾ ಬಿಲ್ ಪಾವತಿಯಲ್ಲಿ ನಿರ್ಲಕ್ಷ್ಯ ಆರೋಪ

ದೇವದುರ್ಗ: ಶಾವಂತಗೇರಾ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಪ್ರಭಾರದಲ್ಲಿದ್ದ ಗ್ರೇಡ್-2 ಕಾರ್ಯದರ್ಶಿ ಶಂಶುದ್ದೀನ್ ಅವರನ್ನು ಕರ್ತವ್ಯ ಲೋಪ ಮತ್ತು ಕಾರ್ಯನಿರ್ವಹಣೆಯಲ್ಲಿ ತೋರಿದ…

3 hours ago

ಧರ್ಮಸ್ಥಳ ಶವ ಹೂತು ಪ್ರಕರಣ: ಎಸ್‌ಐಟಿಗೆ ಮತ್ತಷ್ಟು ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ಬಹಿರಂಗವಾದ ಶವ ಹೂತು ಪ್ರಕರಣದ ತನಿಖೆ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ತನಿಖೆಯ ವೇಗವರ್ಧನೆಗಾಗಿ ವಿಶೇಷ ತನಿಖಾ ತಂಡಕ್ಕೆ…

4 hours ago