Latest

ಮಾದಕ ವಸ್ತುಗಳ ಮಾರಾಟದ ವಿರುದ್ಧ ಸಿ.ಸಿ.ಬಿ. ಪೊಲೀಸರ ಭರ್ಜರಿ ಕಾರ್ಯಾಚರಣೆ

ಮೈಸೂರು ನಗರದ ಸಿ.ಸಿ.ಬಿ. ಪೊಲೀಸರು ಇತ್ತೀಚೆಗೆ ಹಲವಾರು ಗಾಂಜಾ ಹಾಗೂ ಎಂ.ಡಿ.ಎA.ಎ. ಡ್ರಗ್ಸ್ ಮಾರಾಟದ ಜಾಲಗಳ ಮೇಲೆ ದಾಳಿ ಮಾಡಿ ಪ್ರಕರಣಗಳನ್ನು ದಾಖಲಿಸಿದ್ದು, ಅದೇ ರೀತಿ ಸದರಿ ಕಾರ್ಯವನ್ನು ಮುಂದುವರೆಸಿ ದಿನಾಂಕ: ೨೨/೧೦/೨೦೨೨ ರಂದು ಖಚಿತ ಮಾಹಿತಿ ಮೇರೆಗೆ ಬನ್ನಿಮಂಟಪದ ಹನುಮಂತನಗರ ರಸ್ತೆಯಲ್ಲಿ ದಾಳಿ ಮಾಡಿ ಅಲ್ಲಿ ಅಕ್ರಮವಾಗಿ ಕಾರಿನೊಳಗಡೆ ಗಾಂಜಾ ಇಟ್ಟುಕೊಂಡು ಗಿರಾಕಿಗಳನ್ನು ಅಲ್ಲಿಗೆ ಕರೆಯಿಸಿಕೊಂಡು ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ ಅವರ ವಶದಲ್ಲಿದ್ದ ೫ ಕೆ.ಜಿ. ೬೯೧ ಗ್ರಾಂ ತೂಕದ ಗಾಂಜಾ, ಒಂದು ಮಾರುತಿ ೮೦೦ ಕಾರು, ೧೦,೦೦೦/-ರೂ ನಗರದು ಹಾಗೂ ೩ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿರುತ್ತಾರೆ. ನಂತರ ಈ ಸಂಬAಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಅದೇ ರೀತಿ ದಿನಾಂಕ: ೨೩/೧೦/೨೦೨೨ ರಂದು ಸಿ.ಸಿ.ಬಿ. ಪೊಲೀಸರು ಖಚಿತ ಮಾಹಿತಿ ಮೇರೆಗೆ ನರಸಿಂಹರಾಜ ಪೊಲೀಸ್ ಠಾಣೆ ಸರಹದ್ದು ಮಂಡಿ ಮೊಹಲ್ಲಾದ ೨ನೇ ಈದ್ಗಾದ ಸಿ.ವಿ. ರಸ್ತೆಯ ೭ನೇ ಕ್ರಾಸ್‌ನಲ್ಲಿರುವ ಮನೆ ನಂ: ೩೩೧೦ ರ ಮೇಲೆ ದಾಳಿ ಮಾಡಿ ಅಲ್ಲಿ ಗಾಂಜಾವನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊAಡು ಬೇರೆಯವರಿಗೆ ಮಾರಾಟ ಮಾಡುತ್ತಿದ್ದ ಒಬ್ಬ ವ್ಯಕ್ತಿಯನ್ನು ಬಂಧಿಸಿ ಆತನ ವಶದಲ್ಲಿದ್ದ ೪೧ ಕೆ.ಜಿ. ತೂಕದ ಗಾಂಜಾವನ್ನು ವಶಪಡಿಸಿಕೊಂಡಿರುತ್ತಾರೆ. ಈ ಸಂಬAಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಆರೋಪಿಗಳು ಸದರಿ ಗಾಂಜಾವನ್ನು ಎಲ್ಲಿಂದ ಮತ್ತು ಯಾರಿಂದ ಖರೀದಿ ಮಾಡಿಕೊಂಡು ತರುತ್ತಿದ್ದರು ಎಂಬ ಬಗ್ಗೆ ಹಾಗೂ ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿರುತ್ತದೆ.
ಈ ದಾಳಿ ಕಾರ್ಯಗಳನ್ನು ಮೈಸೂರು ನಗರದ ಡಿ.ಸಿ.ಪಿ. ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ರವರಾದ ಶ್ರೀಮತಿ. ಗೀತ.ಎಂ.ಎಸ್., ಐ.ಪಿ.ಎಸ್. ಮತ್ತು ಸಿ.ಸಿ.ಬಿ.ಯ ಎ.ಸಿ.ಪಿ. ಅಶ್ವಥನಾರಾಯಣ.ಸಿ.ಕೆ.ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ.ಯ ಇನ್ಸ್ಪೆಕ್ಟರ್ ಮಲ್ಲೇಶ.ಎ., ಎ.ಎಸ್.ಐ. ರಾಜು, ಸಿಬ್ಬಂದಿಗಳಾದ ಅನಿಲ್, ಸುಬಾನಲ್ಲಾ ಬಾಲ್‌ದಾರ್, ಡಿ.ಶ್ರೀನಿವಾಸಪ್ರಸಾದ್, ಜೋಸೆಫ್ ನೊರೋನ್ಹ, ರವಿಕುಮಾರ್, ರಾಧೇಶ್, ಜನಾರ್ಧನರಾವ್, ಶ್ರೀನಿವಾಸ.ಕೆ.ಜಿ., ಅರುಣ್‌ಕುಮಾರ್, ರಘು, ಮಮತ ರವರುಗಳು ಮಾಡಿರುತ್ತಾರೆ.
ಸದರಿ ಕಾರ್ಯಾಚರಣೆಯನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ. ಚಂದ್ರಗುಪ್ತ, ಐ.ಪಿ.ಎಸ್.ರವರು ಪ್ರಶಂಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

21 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

21 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

21 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

21 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

21 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

21 hours ago