Latest

ಮಾದಕ ವಸ್ತುಗಳ ಮಾರಾಟದ ವಿರುದ್ಧ ಸಿ.ಸಿ.ಬಿ. ಪೊಲೀಸರ ಭರ್ಜರಿ ಕಾರ್ಯಾಚರಣೆ

ಮೈಸೂರು ನಗರದ ಸಿ.ಸಿ.ಬಿ. ಪೊಲೀಸರು ಇತ್ತೀಚೆಗೆ ಹಲವಾರು ಗಾಂಜಾ ಹಾಗೂ ಎಂ.ಡಿ.ಎA.ಎ. ಡ್ರಗ್ಸ್ ಮಾರಾಟದ ಜಾಲಗಳ ಮೇಲೆ ದಾಳಿ ಮಾಡಿ ಪ್ರಕರಣಗಳನ್ನು ದಾಖಲಿಸಿದ್ದು, ಅದೇ ರೀತಿ ಸದರಿ ಕಾರ್ಯವನ್ನು ಮುಂದುವರೆಸಿ ದಿನಾಂಕ: ೨೨/೧೦/೨೦೨೨ ರಂದು ಖಚಿತ ಮಾಹಿತಿ ಮೇರೆಗೆ ಬನ್ನಿಮಂಟಪದ ಹನುಮಂತನಗರ ರಸ್ತೆಯಲ್ಲಿ ದಾಳಿ ಮಾಡಿ ಅಲ್ಲಿ ಅಕ್ರಮವಾಗಿ ಕಾರಿನೊಳಗಡೆ ಗಾಂಜಾ ಇಟ್ಟುಕೊಂಡು ಗಿರಾಕಿಗಳನ್ನು ಅಲ್ಲಿಗೆ ಕರೆಯಿಸಿಕೊಂಡು ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ ಅವರ ವಶದಲ್ಲಿದ್ದ ೫ ಕೆ.ಜಿ. ೬೯೧ ಗ್ರಾಂ ತೂಕದ ಗಾಂಜಾ, ಒಂದು ಮಾರುತಿ ೮೦೦ ಕಾರು, ೧೦,೦೦೦/-ರೂ ನಗರದು ಹಾಗೂ ೩ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿರುತ್ತಾರೆ. ನಂತರ ಈ ಸಂಬAಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಅದೇ ರೀತಿ ದಿನಾಂಕ: ೨೩/೧೦/೨೦೨೨ ರಂದು ಸಿ.ಸಿ.ಬಿ. ಪೊಲೀಸರು ಖಚಿತ ಮಾಹಿತಿ ಮೇರೆಗೆ ನರಸಿಂಹರಾಜ ಪೊಲೀಸ್ ಠಾಣೆ ಸರಹದ್ದು ಮಂಡಿ ಮೊಹಲ್ಲಾದ ೨ನೇ ಈದ್ಗಾದ ಸಿ.ವಿ. ರಸ್ತೆಯ ೭ನೇ ಕ್ರಾಸ್‌ನಲ್ಲಿರುವ ಮನೆ ನಂ: ೩೩೧೦ ರ ಮೇಲೆ ದಾಳಿ ಮಾಡಿ ಅಲ್ಲಿ ಗಾಂಜಾವನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊAಡು ಬೇರೆಯವರಿಗೆ ಮಾರಾಟ ಮಾಡುತ್ತಿದ್ದ ಒಬ್ಬ ವ್ಯಕ್ತಿಯನ್ನು ಬಂಧಿಸಿ ಆತನ ವಶದಲ್ಲಿದ್ದ ೪೧ ಕೆ.ಜಿ. ತೂಕದ ಗಾಂಜಾವನ್ನು ವಶಪಡಿಸಿಕೊಂಡಿರುತ್ತಾರೆ. ಈ ಸಂಬAಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಆರೋಪಿಗಳು ಸದರಿ ಗಾಂಜಾವನ್ನು ಎಲ್ಲಿಂದ ಮತ್ತು ಯಾರಿಂದ ಖರೀದಿ ಮಾಡಿಕೊಂಡು ತರುತ್ತಿದ್ದರು ಎಂಬ ಬಗ್ಗೆ ಹಾಗೂ ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿರುತ್ತದೆ.
ಈ ದಾಳಿ ಕಾರ್ಯಗಳನ್ನು ಮೈಸೂರು ನಗರದ ಡಿ.ಸಿ.ಪಿ. ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ರವರಾದ ಶ್ರೀಮತಿ. ಗೀತ.ಎಂ.ಎಸ್., ಐ.ಪಿ.ಎಸ್. ಮತ್ತು ಸಿ.ಸಿ.ಬಿ.ಯ ಎ.ಸಿ.ಪಿ. ಅಶ್ವಥನಾರಾಯಣ.ಸಿ.ಕೆ.ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ.ಯ ಇನ್ಸ್ಪೆಕ್ಟರ್ ಮಲ್ಲೇಶ.ಎ., ಎ.ಎಸ್.ಐ. ರಾಜು, ಸಿಬ್ಬಂದಿಗಳಾದ ಅನಿಲ್, ಸುಬಾನಲ್ಲಾ ಬಾಲ್‌ದಾರ್, ಡಿ.ಶ್ರೀನಿವಾಸಪ್ರಸಾದ್, ಜೋಸೆಫ್ ನೊರೋನ್ಹ, ರವಿಕುಮಾರ್, ರಾಧೇಶ್, ಜನಾರ್ಧನರಾವ್, ಶ್ರೀನಿವಾಸ.ಕೆ.ಜಿ., ಅರುಣ್‌ಕುಮಾರ್, ರಘು, ಮಮತ ರವರುಗಳು ಮಾಡಿರುತ್ತಾರೆ.
ಸದರಿ ಕಾರ್ಯಾಚರಣೆಯನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ. ಚಂದ್ರಗುಪ್ತ, ಐ.ಪಿ.ಎಸ್.ರವರು ಪ್ರಶಂಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

9 hours ago

ಖಾಸಗಿ ವಿಡಿಯೋ ಬೆದರಿಕೆ, ಕೋಟಿ ರೂ. ಬೇಡಿಕೆ: ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್

ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್…

9 hours ago

ಆಂಬ್ಯುಲೆನ್ಸ್‌ನಲ್ಲೇ ರೋಮ್ಯಾನ್ಸ್: 5 ಕಿಮೀ ಬೆನ್ನಟ್ಟಿದ ಸಾರ್ವಜನಿಕರು, ವಿಡಿಯೋ ವೈರಲ್

ಛತ್ತರ್‌ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್‌ನೊಳಗೆ ಯುವತಿ ಹಾಗೂ ಇಬ್ಬರು…

10 hours ago

ವಿಚ್ಛೇದಿತ ಐಐಟಿ ವರನ ವಿವಾದಾತ್ಮಕ ಬೇಡಿಕೆ: ‘ವರ್ಜಿನ್ ಬ್ರಾಹ್ಮಣ ವಧು ಬೇಕು’ ಹೇಳಿಕೆಗೆ ಚರ್ಚೆ

ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…

14 hours ago

ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ.!

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…

18 hours ago

ನಿಶ್ಚಿತಾರ್ಥದ ಬಳಿಕ ನಿಜ ಮುಖ ಬಯಲು: ಭಾವಿ ಪತಿಯ ಅವಮಾನಕ್ಕೆ ಮನನೊಂದು ಎಂ.ಎಸ್ಸಿ ಪದವೀಧರೆ ಆತ್ಮಹತ್ಯೆ

ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…

18 hours ago