ಮೈಸೂರು ನಗರದ ಸಿ.ಸಿ.ಬಿ. ಪೊಲೀಸರು ಇತ್ತೀಚೆಗೆ ಹಲವಾರು ಗಾಂಜಾ ಹಾಗೂ ಎಂ.ಡಿ.ಎA.ಎ. ಡ್ರಗ್ಸ್ ಮಾರಾಟದ ಜಾಲಗಳ ಮೇಲೆ ದಾಳಿ ಮಾಡಿ ಪ್ರಕರಣಗಳನ್ನು ದಾಖಲಿಸಿದ್ದು, ಅದೇ ರೀತಿ ಸದರಿ ಕಾರ್ಯವನ್ನು ಮುಂದುವರೆಸಿ ದಿನಾಂಕ: ೨೨/೧೦/೨೦೨೨ ರಂದು ಖಚಿತ ಮಾಹಿತಿ ಮೇರೆಗೆ ಬನ್ನಿಮಂಟಪದ ಹನುಮಂತನಗರ ರಸ್ತೆಯಲ್ಲಿ ದಾಳಿ ಮಾಡಿ ಅಲ್ಲಿ ಅಕ್ರಮವಾಗಿ ಕಾರಿನೊಳಗಡೆ ಗಾಂಜಾ ಇಟ್ಟುಕೊಂಡು ಗಿರಾಕಿಗಳನ್ನು ಅಲ್ಲಿಗೆ ಕರೆಯಿಸಿಕೊಂಡು ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ ಅವರ ವಶದಲ್ಲಿದ್ದ ೫ ಕೆ.ಜಿ. ೬೯೧ ಗ್ರಾಂ ತೂಕದ ಗಾಂಜಾ, ಒಂದು ಮಾರುತಿ ೮೦೦ ಕಾರು, ೧೦,೦೦೦/-ರೂ ನಗರದು ಹಾಗೂ ೩ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿರುತ್ತಾರೆ. ನಂತರ ಈ ಸಂಬAಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಅದೇ ರೀತಿ ದಿನಾಂಕ: ೨೩/೧೦/೨೦೨೨ ರಂದು ಸಿ.ಸಿ.ಬಿ. ಪೊಲೀಸರು ಖಚಿತ ಮಾಹಿತಿ ಮೇರೆಗೆ ನರಸಿಂಹರಾಜ ಪೊಲೀಸ್ ಠಾಣೆ ಸರಹದ್ದು ಮಂಡಿ ಮೊಹಲ್ಲಾದ ೨ನೇ ಈದ್ಗಾದ ಸಿ.ವಿ. ರಸ್ತೆಯ ೭ನೇ ಕ್ರಾಸ್ನಲ್ಲಿರುವ ಮನೆ ನಂ: ೩೩೧೦ ರ ಮೇಲೆ ದಾಳಿ ಮಾಡಿ ಅಲ್ಲಿ ಗಾಂಜಾವನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊAಡು ಬೇರೆಯವರಿಗೆ ಮಾರಾಟ ಮಾಡುತ್ತಿದ್ದ ಒಬ್ಬ ವ್ಯಕ್ತಿಯನ್ನು ಬಂಧಿಸಿ ಆತನ ವಶದಲ್ಲಿದ್ದ ೪೧ ಕೆ.ಜಿ. ತೂಕದ ಗಾಂಜಾವನ್ನು ವಶಪಡಿಸಿಕೊಂಡಿರುತ್ತಾರೆ. ಈ ಸಂಬAಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಆರೋಪಿಗಳು ಸದರಿ ಗಾಂಜಾವನ್ನು ಎಲ್ಲಿಂದ ಮತ್ತು ಯಾರಿಂದ ಖರೀದಿ ಮಾಡಿಕೊಂಡು ತರುತ್ತಿದ್ದರು ಎಂಬ ಬಗ್ಗೆ ಹಾಗೂ ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿರುತ್ತದೆ.
ಈ ದಾಳಿ ಕಾರ್ಯಗಳನ್ನು ಮೈಸೂರು ನಗರದ ಡಿ.ಸಿ.ಪಿ. ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ರವರಾದ ಶ್ರೀಮತಿ. ಗೀತ.ಎಂ.ಎಸ್., ಐ.ಪಿ.ಎಸ್. ಮತ್ತು ಸಿ.ಸಿ.ಬಿ.ಯ ಎ.ಸಿ.ಪಿ. ಅಶ್ವಥನಾರಾಯಣ.ಸಿ.ಕೆ.ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ.ಯ ಇನ್ಸ್ಪೆಕ್ಟರ್ ಮಲ್ಲೇಶ.ಎ., ಎ.ಎಸ್.ಐ. ರಾಜು, ಸಿಬ್ಬಂದಿಗಳಾದ ಅನಿಲ್, ಸುಬಾನಲ್ಲಾ ಬಾಲ್ದಾರ್, ಡಿ.ಶ್ರೀನಿವಾಸಪ್ರಸಾದ್, ಜೋಸೆಫ್ ನೊರೋನ್ಹ, ರವಿಕುಮಾರ್, ರಾಧೇಶ್, ಜನಾರ್ಧನರಾವ್, ಶ್ರೀನಿವಾಸ.ಕೆ.ಜಿ., ಅರುಣ್ಕುಮಾರ್, ರಘು, ಮಮತ ರವರುಗಳು ಮಾಡಿರುತ್ತಾರೆ.
ಸದರಿ ಕಾರ್ಯಾಚರಣೆಯನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ. ಚಂದ್ರಗುಪ್ತ, ಐ.ಪಿ.ಎಸ್.ರವರು ಪ್ರಶಂಸಿರುತ್ತಾರೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…