ರೌಡಿ ಎಡಿಟ್ಸ್ ಎಂದು ಹೇಳಿ ರೌಡಿಗಳನ್ನು ಹೀರೋ ಮಾಡುವ ರೀತಿಯಲ್ಲಿ ರೀಲ್ಸ್ಗಳು ಪ್ರತಿ ದಿನವೂ ಬಿಡುಗಡೆಯಾಗುತ್ತಿತ್ತು. ಪೊಲೀಸರಿಗೂ ಸಿಗದ ಈ ರೌಡಿಗಳ ಪೋಟೊಗಳು, ವಿಡಿಯೊ ರೀಲ್ಸ್ ಮಾಡುವವರಿಗೆ ಸಿಗುತ್ತಿತ್ತು. ಇದರಿಂದ ಸಹಜವಾಗಿಯೇ ಪೊಲೀಸರಿಗೂ ಅನುಮಾನ ಬಂದಿತ್ತು. ರೌಡಿಗಳಾದ ಸೈಲೆಂಟ್ ಸುನೀಲ, ವಿಲ್ಸನ್ ಗಾರ್ಡನ್ ನಾಗ, ಕಾಡುಬೀಸನಹಳ್ಳಿ ರೋಹಿತ್, ಕುಣಿಗಲ್ ಗಿರಿ ಇಂತಹ ನಟೋರಿಯಸ್ ರೌಡಿಗಳ ರೀಲ್ಸ್ಗಳೇ ಹೆಚ್ಚಾಗಿವೆ. ಅಷ್ಟಲ್ಲದೆ ಆಯಾ ಏರಿಯಾದ ಪುಡಿ ರೌಡಿಗಳೂ ಕೂಡ ತಮ್ಮ ಹವಾ ಮೇಂಟೇನ್ ಮಾಡುವ ಸಲುವಾಗಿ ರೀಲ್ಸ್ ಮೊರೆ ಹೋಗುತ್ತಿದ್ದರು.
ಕೆಲ ರೌಡಿಗಳ ಶಿಷ್ಯಂದಿರು ಬಾಸ್ ಎಂದು ರೀಲ್ಸ್ ಮಾಡಿದರೆ, ಉಳಿದವರು ಕೆಲಸವಿಲ್ಲದ ಕೆಲ ಹುಡುಗರಿಗೆ 500 ರೂ. ಕೊಟ್ಟು ರೀಲ್ಸ್ ಮಾಡಿ ಅಪ್ಲೋಡ್ ಮಾಡುವ ಕೆಲಸಗಳನ್ನು ನೀಡುತ್ತಿದ್ದರು. ಇನ್ನು ಏರಿಯಾದಲ್ಲಿ ತಮ್ಮ ಅಸ್ತಿತ್ವದ ಬಗ್ಗೆ ಇರುವಿಕೆಯನ್ನು ತೋರಿಸಿಕೊಳ್ಳಲು ಹಾಗೂ ಫ್ಯಾನ್ ಫಾಲೋವರ್ಸ್ಗಳನ್ನು ಹೆಚ್ಚಿಸಲು ಈ ರೀತಿಯ ಕೆಲಸಗಳನ್ನು ರೌಡಿಗಳ ಶಿಷ್ಯಂದಿರು ಮಾಡುತ್ತಿದ್ದರು. ಎಲ್ಲೋ ಕೂತ ಮುಖ್ಯ ರೌಡಿಯೇ ಈ ರೀತಿಯ ಕೃತ್ಯವನ್ನು ಎಸಗಲು ಪ್ರೇರೆಪಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿಂದೆ ಬ್ಯಾನರ್ಗಳನ್ನು ಕಟ್ಟಿ ಏರಿಯಾದಲ್ಲಿ ಹವಾ ತೋರಿಸುತ್ತಿದ್ದರು. ಸದ್ಯ ಸೋಷಿಯಲ್ ಮೀಡಿಯಾ ಮೂಲಕ ತಮ್ಮದೇ ಆದ ಕುಖ್ಯಾತಿಯನ್ನು ಗಳಿಸುತ್ತಿದ್ದಾರೆ. ಈ ಸಂಬಂಧ ಅಪ್ರಾಪ್ತರ ಮನೆಯವರನ್ನು ಕರೆಸಿ ವಾರ್ನಿಂಗ್ ಮಾಡಲಾಗಿದೆ. ಸುಮಾರು 60ಕ್ಕೂ ಹೆಚ್ಚು ರೌಡಿಗಳ ಪೇಜ್ ಅಕೌಂಟ್ಗಳನ್ನು ಬಂದ್ ಮಾಡಲಾಗಿದೆ. ಸಿಸಿಬಿಯ ಆರ್ಗನೈಝ್ ಕ್ರೈಂ ವಿಂಗ್ನ ಕಾರ್ಯಾಚರಣೆ ಇದು.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…