Crime

ರೌಡಿಗಳ ರೀಲ್ಸ್‌ ಗೆ ಬ್ರೇಕ್ ಹಾಕಲು ಮುಂದಾದ ಸಿಸಿಬಿ.

ರೌಡಿ ಎಡಿಟ್ಸ್ ಎಂದು ಹೇಳಿ ರೌಡಿಗಳನ್ನು ಹೀರೋ ಮಾಡುವ ರೀತಿಯಲ್ಲಿ ರೀಲ್ಸ್‌ಗಳು ಪ್ರತಿ ದಿನವೂ ಬಿಡುಗಡೆಯಾಗುತ್ತಿತ್ತು. ಪೊಲೀಸರಿಗೂ ಸಿಗದ ಈ ರೌಡಿಗಳ ಪೋಟೊಗಳು, ವಿಡಿಯೊ ರೀಲ್ಸ್‌ ಮಾಡುವವರಿಗೆ ಸಿಗುತ್ತಿತ್ತು. ಇದರಿಂದ ಸಹಜವಾಗಿಯೇ ಪೊಲೀಸರಿಗೂ ಅನುಮಾನ ಬಂದಿತ್ತು. ರೌಡಿಗಳಾದ ಸೈಲೆಂಟ್ ಸುನೀಲ, ವಿಲ್ಸನ್ ಗಾರ್ಡನ್ ನಾಗ, ಕಾಡುಬೀಸನಹಳ್ಳಿ ರೋಹಿತ್, ‌ಕುಣಿಗಲ್ ಗಿರಿ ಇಂತಹ ನಟೋರಿಯಸ್ ರೌಡಿಗಳ ರೀಲ್ಸ್‌ಗಳೇ ಹೆಚ್ಚಾಗಿವೆ. ಅಷ್ಟಲ್ಲದೆ ಆಯಾ ಏರಿಯಾದ ಪುಡಿ ರೌಡಿಗಳೂ ಕೂಡ ತಮ್ಮ ಹವಾ ಮೇಂಟೇನ್ ಮಾಡುವ ಸಲುವಾಗಿ ರೀಲ್ಸ್ ಮೊರೆ ಹೋಗುತ್ತಿದ್ದರು.
ಕೆಲ ರೌಡಿಗಳ ಶಿಷ್ಯಂದಿರು ಬಾಸ್‌ ಎಂದು ರೀಲ್ಸ್‌ ಮಾಡಿದರೆ, ಉಳಿದವರು ಕೆಲಸವಿಲ್ಲದ ಕೆಲ ಹುಡುಗರಿಗೆ 500 ರೂ. ಕೊಟ್ಟು ರೀಲ್ಸ್ ಮಾಡಿ ಅಪ್ಲೋಡ್ ಮಾಡುವ ಕೆಲಸಗಳನ್ನು ನೀಡುತ್ತಿದ್ದರು. ಇನ್ನು ಏರಿಯಾದಲ್ಲಿ ತಮ್ಮ ಅಸ್ತಿತ್ವದ ಬಗ್ಗೆ ಇರುವಿಕೆಯನ್ನು ತೋರಿಸಿಕೊಳ್ಳಲು ಹಾಗೂ ಫ್ಯಾನ್ ಫಾಲೋವರ್ಸ್‌ಗಳನ್ನು ಹೆಚ್ಚಿಸಲು ಈ ರೀತಿಯ ಕೆಲಸಗಳನ್ನು ರೌಡಿಗಳ ಶಿಷ್ಯಂದಿರು ಮಾಡುತ್ತಿದ್ದರು. ಎಲ್ಲೋ ಕೂತ ಮುಖ್ಯ ರೌಡಿಯೇ ಈ ರೀತಿಯ ಕೃತ್ಯವನ್ನು ಎಸಗಲು ಪ್ರೇರೆಪಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿಂದೆ ಬ್ಯಾನರ್‌ಗಳನ್ನು ಕಟ್ಟಿ ಏರಿಯಾದಲ್ಲಿ ಹವಾ ತೋರಿಸುತ್ತಿದ್ದರು. ಸದ್ಯ ಸೋಷಿಯಲ್ ಮೀಡಿಯಾ ಮೂಲಕ ತಮ್ಮದೇ ಆದ ಕುಖ್ಯಾತಿಯನ್ನು ಗಳಿಸುತ್ತಿದ್ದಾರೆ. ಈ ಸಂಬಂಧ ಅಪ್ರಾಪ್ತರ ಮನೆಯವರನ್ನು ಕರೆಸಿ ವಾರ್ನಿಂಗ್ ಮಾಡಲಾಗಿದೆ. ಸುಮಾರು 60ಕ್ಕೂ ಹೆಚ್ಚು ರೌಡಿಗಳ ಪೇಜ್‌ ಅಕೌಂಟ್‌ಗಳನ್ನು ಬಂದ್ ಮಾಡಲಾಗಿದೆ. ಸಿಸಿಬಿಯ ಆರ್ಗನೈಝ್ ಕ್ರೈಂ ವಿಂಗ್‌ನ ಕಾರ್ಯಾಚರಣೆ ಇದು.

ಭ್ರಷ್ಟರ ಬೇಟೆ

Recent Posts

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

6 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

6 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು: ಖಾಸಗಿ ಆಸ್ಪತ್ರೆ ಸಿಬ್ಬಂದಿ ವಶಕ್ಕೆ

ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…

2 days ago