ಸಿ.ಸಿ.ಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಿನಾಂಕ ೧೨/೦೯/೨೦೨೨ ರಂದು ಮಂಡಿ ಮೊಹಲ್ಲಾದ ಪುಲಿಕೇಶಿ ರಸ್ತೆಯಲ್ಲಿರುವ ಕರ್ನಾಟಕ ಆಟೋ ಕುಷನ್ವರ್ಕ್ಸ್ಗೆ ದಾಳಿ ಮಾಡಿ ಮಟ್ಕಾ ದಂದೆಯಲ್ಲಿ ತೊಡಗಿದ್ದ ಒಬ್ಬ ಆರೋಪಿಯನ್ನು ಬಂಧಿಸಿ ಮಟ್ಕಾ ದಂಧೆಯಲ್ಲಿ ಗಿರಾಕಿಗಳಿಂದ ಸಂಗ್ರಹಿಸಿದ ರೂ ೭೦.೦೦೦/- ನಗದು ಹಣ ಮತ್ತು ೪ ಮಟ್ಕಾ ಚೀಟಿಗಳನ್ನು ವಶಪಡಿಸಿಕೊಂಡಿರುತ್ತಾರೆ. ಹಾಗೂ ದಿನಾಂಕ ೧೫/೦೯/೨೦೨೨ ರಂದು ಉದಯಗಿರಿ ಪೊಲೀಸ್ ಠಾಣಾ ಸರಹದ್ದು ಕೆ.ಎನ್.ಪುರ ಟೆಂಟ್ ರಸ್ತೆಯಲ್ಲಿರುವ ಆರ್.ಜೆ ಟೀ ಸ್ಟಾಲ್ನಲ್ಲಿ ದಾಳಿ ಮಾಡಿ ಮಟ್ಕಾ ದಂದೆಯಲ್ಲಿ ತೊಡಗಿದ್ದ ಒಬ್ಬ ಆರೋಪಿಯನ್ನು ಬಂಧಿಸಿ ಮಟ್ಕಾ ದಂಧೆಯಲ್ಲಿ ಗಿರಾಕಿಗಳಿಂದ ಸಂಗ್ರಹಿಸಿದ ರೂ ೨೦.೦೦೦/- ನಗದು ಹಣ ಮತ್ತು ೪ ಮಟ್ಕಾ ಚೀಟಿಗಳನ್ನು ಅಮಾನತ್ತು ಪಡಿಸಿಕೊಂಡಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಡಿಸಿಪಿ, ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಶ್ರೀಮತಿ ಗೀತ ಎಂ.ಎಸ್, ಐ.ಪಿ.ಎಸ್ ಹಾಗೂ ಸಿ.ಸಿ.ಬಿ ಘಟಕದ ಎ.ಸಿ.ಪಿ ರವರಾದ ಶ್ರೀ ಸಿ.ಕೆ. ಅಶ್ವಥನಾರಾಯಣ ರವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಎ. ಮಲ್ಲೇಶ್, ಎ.ಎಸ್.ಐ ರಾಜು ಹಾಗೂ ಸಿಬ್ಬಂದಿಗಳಾದ ರವಿಕುಮಾರ್.ಎಸ್, ರಾಧೇಶ್.ಬಿ, ಸುಬಾನಲ್ಲಾ ಬಾಲ್ದಾರ್, ಕೆ,ಜಿ. ಶ್ರೀನಿವಾಸ ರವರುಗಳು ಮಾಡಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…