ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಅಮಾನುಷ ದಾಳಿಯಲ್ಲಿ 26 ಅಮಾಯಕರ ಜೀವ ಹಾರಿದ ಘಟನೆಗೆ ದೇಶಾದ್ಯಾಂತ ಶೋಕ ಹಾಗೂ ಕೋಪ ಉಂಟಾಗಿದ್ದರೆ, ಇದೇ ಸಂದರ್ಭದಲ್ಲಿ ದೆಹಲಿಯ ಪಾಕಿಸ್ತಾನ ಹೈಕಮಿಷನ್ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆಯ ದೃಶ್ಯಗಳು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ.

ಸಮಾಜಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ, ಒಬ್ಬ ಯುವಕನು ಕೇಕ್ ಹೊತ್ತು ಹೈಕಮಿಷನ್ ಕಚೇರಿಗೆ ಪ್ರವೇಶಿಸುತ್ತಿರುವುದು ಕಂಡುಬರುತ್ತದೆ. ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಆತ ನುಣುಚಿಕೊಂಡು ಉತ್ತರಿಸಲು ನಿರಾಕರಿಸಿದ್ದಾನೆ. “ನೀವು ಯಾರು?”, “ಪಾಕಿಸ್ತಾನದಿಂದ ಬಂದಿದ್ದೀರಾ?”, “ಕೇಕ್ ಯಾಕೆ ತೆಗೆದುಕೊಂಡು ಹೋಗುತ್ತಿದ್ದೀರಿ?” ಎಂಬ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರವೇ ಸಿಗಲಿಲ್ಲ.

ಈ ಘಟನೆಗೆ ತೀವ್ರ ಪ್ರತಿಕ್ರಿಯೆ ನೀಡಿದ ಭಾರತದ ಸರ್ಕಾರ, ಪಾಕಿಸ್ತಾನ ಹೈಕಮಿಷನ್ ಸಿಬ್ಬಂದಿಯ ಸಂಖ್ಯೆಗೆ ಕಡಿತ ಹಾಕಿರುವ ಮಾಹಿತಿ ಲಭ್ಯವಾಗಿದೆ. ಈ ಹಿಂದೆ 50 ಮಂದಿ ಕೆಲಸ ಮಾಡುತ್ತಿದ್ದರೆ, ಇದೀಗ ಕೇವಲ 20 ಜನರಿಗೆ ಮಾತ್ರ ಗೇಟ್ ಪಾಸ್ ನೀಡಲಾಗಿದೆ. ಮೇ 1ರೊಳಗೆ ನಿರ್ದಿಷ್ಟ ರಾಜತಾಂತ್ರಿಕರು ಭಾರತ ತೊರೆಯುವಂತೆ ಸೂಚನೆ ನೀಡಲಾಗಿದೆ.

ಪಹಲ್ಗಾಮ್ ದಾಳಿ ನಂತರವೇ ಈ ರೀತಿಯ ಸಂಭ್ರಮಾಚರಣೆ ನಡೆದಿರುವ ಶಂಕೆ ಮೂಡಿದ್ದು, ದೇಶದ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಭಾರತ–ಪಾಕಿಸ್ತಾನ ಸಂಬಂಧಗಳು ಮತ್ತಷ್ಟು ಕುಂದುಕೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ

Related News

error: Content is protected !!