ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ಅಮಾನುಷ ದಾಳಿಯಲ್ಲಿ 26 ಅಮಾಯಕರ ಜೀವ ಹಾರಿದ ಘಟನೆಗೆ ದೇಶಾದ್ಯಾಂತ ಶೋಕ ಹಾಗೂ ಕೋಪ ಉಂಟಾಗಿದ್ದರೆ, ಇದೇ ಸಂದರ್ಭದಲ್ಲಿ ದೆಹಲಿಯ ಪಾಕಿಸ್ತಾನ ಹೈಕಮಿಷನ್ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆಯ ದೃಶ್ಯಗಳು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ.
ಸಮಾಜಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ, ಒಬ್ಬ ಯುವಕನು ಕೇಕ್ ಹೊತ್ತು ಹೈಕಮಿಷನ್ ಕಚೇರಿಗೆ ಪ್ರವೇಶಿಸುತ್ತಿರುವುದು ಕಂಡುಬರುತ್ತದೆ. ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಆತ ನುಣುಚಿಕೊಂಡು ಉತ್ತರಿಸಲು ನಿರಾಕರಿಸಿದ್ದಾನೆ. “ನೀವು ಯಾರು?”, “ಪಾಕಿಸ್ತಾನದಿಂದ ಬಂದಿದ್ದೀರಾ?”, “ಕೇಕ್ ಯಾಕೆ ತೆಗೆದುಕೊಂಡು ಹೋಗುತ್ತಿದ್ದೀರಿ?” ಎಂಬ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರವೇ ಸಿಗಲಿಲ್ಲ.
ಈ ಘಟನೆಗೆ ತೀವ್ರ ಪ್ರತಿಕ್ರಿಯೆ ನೀಡಿದ ಭಾರತದ ಸರ್ಕಾರ, ಪಾಕಿಸ್ತಾನ ಹೈಕಮಿಷನ್ ಸಿಬ್ಬಂದಿಯ ಸಂಖ್ಯೆಗೆ ಕಡಿತ ಹಾಕಿರುವ ಮಾಹಿತಿ ಲಭ್ಯವಾಗಿದೆ. ಈ ಹಿಂದೆ 50 ಮಂದಿ ಕೆಲಸ ಮಾಡುತ್ತಿದ್ದರೆ, ಇದೀಗ ಕೇವಲ 20 ಜನರಿಗೆ ಮಾತ್ರ ಗೇಟ್ ಪಾಸ್ ನೀಡಲಾಗಿದೆ. ಮೇ 1ರೊಳಗೆ ನಿರ್ದಿಷ್ಟ ರಾಜತಾಂತ್ರಿಕರು ಭಾರತ ತೊರೆಯುವಂತೆ ಸೂಚನೆ ನೀಡಲಾಗಿದೆ.
ಪಹಲ್ಗಾಮ್ ದಾಳಿ ನಂತರವೇ ಈ ರೀತಿಯ ಸಂಭ್ರಮಾಚರಣೆ ನಡೆದಿರುವ ಶಂಕೆ ಮೂಡಿದ್ದು, ದೇಶದ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಭಾರತ–ಪಾಕಿಸ್ತಾನ ಸಂಬಂಧಗಳು ಮತ್ತಷ್ಟು ಕುಂದುಕೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…