Categories: CrimeLatest

ಸೆಲೆಬ್ರಿಟಿ ಜ್ಯೋತಿಷಿಯ ಭಯಾನಕ ಮುಖ ಬಯಲು: ಅತ್ಯಾಚಾರ ಆರೋಪದಲ್ಲಿ ಬಂಧನ, 58 ಮಹಿಳೆಯರ ರಹಸ್ಯ ವಿಡಿಯೋ ಪತ್ತೆ

ಮಹಾರಾಷ್ಟ್ರದಲ್ಲಿ ರಾಜಕೀಯ ಮುಖಂಡರ ಜ್ಯೋತಿಷ್ಯ ಹೇಳಿ ಖ್ಯಾತಿ ಪಡೆದಿದ್ದ ಸ್ವಯಂ ಘೋಷಿತ ಜ್ಯೋತಿಷಿ ‘ಕ್ಯಾಪ್ಟನ್’ ಅಶೋಕ್ ಖರತ್ ಇದೀಗ ಗಂಭೀರ ಆರೋಪಗಳ ನಡುವೆ ಬಂಧನಕ್ಕೊಳಗಾಗಿದ್ದಾನೆ. 35 ವರ್ಷದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ನಾಸಿಕ್ ಅಪರಾಧ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ದೂರಿನ ಪ್ರಕಾರ, 2022ರಿಂದ 2025ರ ಅವಧಿಯಲ್ಲಿ ಆರೋಪಿಯು ಮಹಿಳೆಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ ವೇಳೆ ಮತ್ತಷ್ಟು ಶಾಕ್ ಮೂಡಿಸುವ ಸಂಗತಿಗಳು ಬೆಳಕಿಗೆ ಬಂದಿವೆ.

ತನಿಖೆ ವೇಳೆ ಆರೋಪಿಯ ಬಳಿ 58 ಮಹಿಳೆಯರ ಅಸಭ್ಯ ವಿಡಿಯೋಗಳು ಪತ್ತೆಯಾಗಿವೆ. ಸಮಾಜದ ಪ್ರಭಾವಿ ಮಹಿಳೆಯರನ್ನೂ ಒಳಗೊಂಡಂತೆ ಹಲವರನ್ನು ಗುಪ್ತವಾಗಿ ಚಿತ್ರೀಕರಿಸಿದ್ದಾನೆ ಎಂಬುದು ತಿಳಿದುಬಂದಿದೆ. ಈ ಸಂಬಂಧ ಸರ್ಕಾರವಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂಧಶ್ರದ್ಧೆ ವಿರುದ್ಧ ಹೋರಾಟ ನಡೆಸುವ ಅಂಧಾ ಶ್ರದ್ಧಾ ನಿರ್ಮೋಲನ್ ಸಮಿತಿ (ANISA) ಈ ವ್ಯಕ್ತಿ ಬಗ್ಗೆ ಈಗಾಗಲೇ ಎಚ್ಚರಿಕೆ ನೀಡಿದ್ದರೂ, ಆತ ತನ್ನ ಚಟುವಟಿಕೆಗಳನ್ನು ಮುಂದುವರೆಸುತ್ತಿದ್ದನು. ಮರ್ಚೆಂಟ್ ನೇವಿಯಲ್ಲಿ ಅಧಿಕಾರಿ ಆಗಿದ್ದ ಖರತ್ ನಿವೃತ್ತಿಯ ನಂತರ ‘ಶಿವನಿಕಾ ಟ್ರಸ್ಟ್’ ಸ್ಥಾಪಿಸಿ, ಜ್ಯೋತಿಷ್ಯದ ಹೆಸರಿನಲ್ಲಿ ಮಹಿಳೆಯರನ್ನು ಮೋಸಗೊಳಿಸುತ್ತಿದ್ದನೆಂದು ಆರೋಪಿಸಲಾಗಿದೆ.

ರಾಜಕೀಯ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಖರತ್, ಖ್ಯಾತ ವ್ಯಕ್ತಿಗಳ ಭವಿಷ್ಯ ನುಡಿಯುವ ಮೂಲಕ ಪ್ರಸಿದ್ಧಿ ಪಡೆದಿದ್ದನು. ಆದರೆ ಇದೀಗ ಆತನ ನಿಜ ಸ್ವರೂಪ ಬಯಲಾಗಿದ್ದು, ಪ್ರಕರಣ ಮಹಾರಾಷ್ಟ್ರದಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

ಪೊಲೀಸರ ಎಫ್‌ಐಆರ್ ಪ್ರಕಾರ, ಖರತ್ ತನ್ನ ಬಳಿ ಸಲಹೆಗಾಗಿ ಬರುವ ಮಹಿಳೆಯರಿಗೆ ಅಮಲು ಪದಾರ್ಥ ನೀಡಿ ಸಮ್ಮೋಹನಗೊಳಿಸಿ, ನಂತರ ಮಾಟಮಂತ್ರದ ಭಯ ಹುಟ್ಟಿಸಿ ಅಥವಾ ಕುಟುಂಬಕ್ಕೆ ಹಾನಿ ಮಾಡುವುದಾಗಿ ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನು.

ಇನ್ನೂ ಭೀಕರವೆಂದರೆ, ತನ್ನ ಕಚೇರಿಯಲ್ಲಿ ಗುಪ್ತ ಕ್ಯಾಮೆರಾಗಳನ್ನು ಅಳವಡಿಸಿ, ಮಹಿಳೆಯರ ಅಸಭ್ಯ ದೃಶ್ಯಗಳನ್ನು ರಹಸ್ಯವಾಗಿ ಚಿತ್ರೀಕರಿಸುತ್ತಿದ್ದನು. ಪೊಲೀಸರು ವಶಪಡಿಸಿಕೊಂಡ ಪೆನ್ ಡ್ರೈವ್‌ನಲ್ಲಿ 58 ಮಹಿಳೆಯರ ಮೇಲಿನ ದೌರ್ಜನ್ಯ ದೃಶ್ಯಗಳು ಪತ್ತೆಯಾಗಿವೆ.

ಒಬ್ಬ ಮಹಿಳೆಯ ಧೈರ್ಯಶಾಲಿ ದೂರಿನಿಂದ ಈ ದೀರ್ಘಕಾಲದ ಕೃತ್ಯ ಇದೀಗ ಬೆಳಕಿಗೆ ಬಂದಿದ್ದು, ಪೊಲೀಸರು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

9 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

14 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

14 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

14 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

14 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago