Latest

ಸರಗಳ್ಳತನ ಮಾಡಿದ ಆರೋಪಿತರ ಬಂಧನ

ರಾಷ್ಟ್ರೀಯ ದಾರಿಯಲ್ಲಿ ನಡೆದು ಹೋಗುತ್ತಿದ್ದಾಗ ಕುತ್ತಿಗೆಯಲ್ಲಿದ್ದ ಅಂದಾಜು 20 ಗ್ರಾಂ ಬಂಗಾರದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋಗಿದ್ದ ಆರೋಪಿಗಳನ್ನು ಭಟ್ಕಳ ಪಡಿತರ ಬಂಧಿಸಿದ್ದಾರೆ.

17-04-2025 ರಂದು ನಾಗಮ್ಮ ಗಂಡ ಸುಕ್ರ ಮೊಗೇರ ಮುರ್ಡೇಶ್ವರ, ಭಟ್ಕಳ ತಾಲೂಕ ರವರು ರಾಷ್ಟ್ರೀಯ ಹೆದ್ದಾರಿ-66ರ ಮೇಲೆ ನಡೆದುಕೊಂಡು ಮನೆಗೆ ಹೋಗುವಾಗ ಅಪರಿಚಿತ ಇಬ್ಬರು ವ್ಯಕ್ತಿಗಳು ಬೈಕನಲ್ಲಿ ಬಂದು ಕುತ್ತಿಗೆಯಲ್ಲಿ ಇದ್ದ ಅಂದಾಜು 20 ಗ್ರಾಂ ತೂಕದ ಬಂಗಾರದ ಮಾಂಗಲ್ಯದ ಸರವನ್ನು ಕಿತ್ತುಕೊಂಡು ಹೋದ ಬಗ್ಗೆ ಭಟ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಸದ್ರಿ ಪ್ರಕರಣದಲ್ಲಿ ಆರೋಪಿತರ ಪತ್ತೆಗೆ ಶ್ರೀ ನಾರಾಯಣ ಎಂ. ಐ.ಪಿ.ಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಉತ್ತರ ಕನ್ನಡ ಶ್ರೀ ಕೃಷ್ಣಮೂರ್ತಿ, ಜಿ. ಮಾನ್ಯ ಹೆಚ್ಚುವರಿ ಪೊಲೀಸ್ ಅಧಿಕ್ಷಕರು ಉತ್ತರ ಕನ್ನಡ, ಹಾಗೂ ಶ್ರೀ ಜಗದೀಶ ಎಂ. ಮಾನ್ಯ ಹೆಚ್ಚುವರಿ ಪೊಲೀಸ್ ಅಧಿಕ್ಷಕರು ಉತ್ತರ ಕನ್ನಡ ಮತ್ತು ಶ್ರೀ ಮಹೇಶ ಎಮ್, ಪೊಲೀಸ್ ಉಪಾಧಿಕ್ಷಕರು ಭಟ್ಕಳ ಉಪ ವಿಭಾಗ ರವರ ಮಾರ್ಗ ದರ್ಶನದಲ್ಲಿ ತನಿಖಾಧಿಕಾರಿಯಾದ ಶ್ರೀ ಸಂತೋಷ ಕಾಯ್ಕಿಣಿ ಪೊಲೀಸ್ ವೃತ್ತ ನಿರೀಕ್ಷಕರು, ಭಟ್ಕಳ ಗ್ರಾಮಾಂತರ ವೃತ್ತ ಶ್ರೀ ಹಣಮಂತ ಬಿರಾದಾರ ಪೊಲೀಸ್ ಉಪ ನಿರೀಕ್ಷಕರು ಮುರ್ಡೇಶ್ವರ ಪೊಲೀಸ್ ಠಾಣೆ, ಹಾಗೂ ಸಿಬ್ಬಂದಿ ರವರ ನೇತೃತ್ವದಲ್ಲಿ ತಂಡವನ್ನು ರಚನೆ ಮಾಡಿ ಮಹೇಶ ತಂದೆ ಪರಸಪ್ಪ ಕುರಿ ಸಾ|| ಸಂತಿಸಿಗ್ಲಿ, ಲಕ್ಷೇಶ್ವರ, ಗದಗ ಜಿಲ್ಲೆ ಹಾಗೂ ಮಣಿಕಂಠ ತಂದೆ ಹಣಮಂತ ಶಿರಹಟ್ಟಿ ಸಾ|| ಆನಂದ ನಗರ. ಕೃಷ್ಣಾ ಕಾಲೋನಿ ರವರನ್ನು ಬಂಧಿಸಿದ್ದಾರೆ.ಹುಬ್ಬಳ್ಳಿ ಇವರಿಬ್ಬರನ್ನು ಬಂಧಿತರಿಂದ ಕೃತ್ಯಕ್ಕೆ ಉಪಯೋಗಿಸಿದ 150000/- ರೂ ಬೆಲೆ ಬಾಳುವ ಬೈಕ,ಸರಗಳ್ಳತನ ಮಾಡಿದ್ದ 26 ಗ್ರಾಂ ತೂಕದ 220000 ರೂ ಬೆಲೆ ಬಾಳುವ ಬಂಗಾರದ ಮಾಂಗಲ್ಯ ಸರ ಹಾಗೂ ಎರಡು ಮೊಬೈಲ ಪೋನ್ ಗಳನ್ನು ಹೀಗೆ ಒಟ್ಟು ಅಂದಾಜು 3,80,000/- ರೂ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ .

ಈ ಕಾರ್ಯಾಚರಣೆಯಲ್ಲಿ, ಶ್ರೀ ನಾರಾಯಣ ಎಂ. ಐ.ಪಿ.ಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಉತ್ತರ ಕನ್ನಡ ಶ್ರೀ ಕೃಷ್ಣಮೂರ್ತಿ. ಜಿ. ಮಾನ್ಯ ಹೆಚ್ಚುವರಿ ಪೊಲೀಸ್ ಅಧಿಕ್ಷಕರು ಉತ್ತರ ಕನ್ನಡ, ಹಾಗೂ ಶ್ರೀ ಜಗದೀಶ ಎಂ. ಮಾನ್ಯ ಹೆಚ್ಚುವರಿ ಪೊಲೀಸ್ ಅಧಿಕ್ಷಕರು ಉತ್ತರ ಕನ್ನಡ ಮತ್ತು ಶ್ರೀ ಮಹೇಶ ಎಮ್, ಪೊಲೀಸ್ ಉಪಾಧಿಕ್ಷಕರು ಭಟ್ಕಳ ಉಪ ವಿಭಾಗ ರವರ ಮಾರ್ಗ ದರ್ಶನದಲ್ಲಿ ಶ್ರೀ ಸಂತೋಷ ಕಾಯ್ಕಿಣಿ, ಸಿ.ಪಿ.ಐ. ಭಟ್ಕಳ ಗ್ರಾಮಾಂತರ ವೃತ್ತ ಮತ್ತು ಶ್ರೀ ಹಣಮಂತ ಬಿರಾದಾರ ಪಿ.ಎಸ್.ಐ ಮುರ್ಡೇಶ್ವರ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ಠಾಣೆಯ ಸಿಬ್ಬಂದಿಗಳಾದ ಶ್ರೀ ಸಬ್ರಮಣ್ಯ ನಾಯ್ಕ,ಮಂಜುನಾಥ ಲಕ್ಕಾಪೂರ,ವಿಜಯ ನಾಯ್ಕ, ಮಂಜುನಾಥ ಮಡಿವಾಳ, ಯೊಗೇಶ ನಾಯ್ಕ ಮಂಕಿ ಪೊಲೀಸ್ ಠಾಣೆಯ ಕಿರಣಕುಮಾರ ರೆಡ್ಡಿ, ಅಣ್ಣಪ್ಪ ಕೋರಿ ಹಾಗೂ ಶಿರಸಿ ಉಪವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳಾದ, ಶ್ರೀ ಸಂತೋಷ ಕಮಟಗೇರಿ, ಹನಮಂತ ಬರ್ಗಿ, ಪ್ರಶಾಂತ ಪಾವಸ್ಥರ, ಶಿವಲಿಂಗ ತುಪ್ಪದ, ಮಾಲತೇಶ, ರಾಮಯ್ಯ, ಮಂಜು ಪೂಜಾರಿ, ಸದ್ದಾಂ ರವರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು,ಸದ್ರಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಮಾನ್ಯ ಪೊಲೀಸ್ ಅಧೀಕ್ಷಕರು ಪ್ರಸಂಶೆ ವ್ಯಕ್ತಪಡಿಸಿರುತ್ತಾರೆ.

nazeer ahamad

Recent Posts

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

9 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

9 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

9 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

9 hours ago

ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಚಾಕು ದಾಳಿ ಸಂಚಲನ: ನಿವೃತ್ತ ಬಿಎಂಟಿಸಿ ಸಿಬ್ಬಂದಿಗೆ ಗಾಯ, ಇಬ್ಬರು ಪೊಲೀಸರ ವಶಕ್ಕೆ

ಬೆಂಗಳೂರು ನಗರದ ಎಲೆಕ್ಟ್ರಾನಿಕ್ಸ್ ಸಿಟಿ 2ನೇ ಹಂತದಲ್ಲಿ ಖಾಸಗಿ ಜಾಗ ಪ್ರವೇಶ ವಿಚಾರವಾಗಿ ಆರಂಭವಾದ ವಾಗ್ವಾದ ಚಾಕು ದಾಳಿಗೆ ತಿರುಗಿ,…

9 hours ago

ಪ್ರಿಯಕರನ ಜೊತೆ ಬಂದಿದ್ದ ವಿವಾಹಿತೆ ಭೀಕರ ಕೊಲೆ! ಮನೆಯಲ್ಲೇ ಶವ ಬಿಟ್ಟು ಆರೋಪಿ ಪರಾರಿ

ಬೆಂಗಳೂರು: ನಗರದ ಹೊರವಲಯದ ಜಿಗಣಿಯ ಪಟಾಲಮ್ಮ ಬಡಾವಣೆಯಲ್ಲಿ ವಿವಾಹಿತ ಮಹಿಳೆಯೊಬ್ಬಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ.…

9 hours ago