ರಾಷ್ಟ್ರೀಯ ದಾರಿಯಲ್ಲಿ ನಡೆದು ಹೋಗುತ್ತಿದ್ದಾಗ ಕುತ್ತಿಗೆಯಲ್ಲಿದ್ದ ಅಂದಾಜು 20 ಗ್ರಾಂ ಬಂಗಾರದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋಗಿದ್ದ ಆರೋಪಿಗಳನ್ನು ಭಟ್ಕಳ ಪಡಿತರ ಬಂಧಿಸಿದ್ದಾರೆ.
17-04-2025 ರಂದು ನಾಗಮ್ಮ ಗಂಡ ಸುಕ್ರ ಮೊಗೇರ ಮುರ್ಡೇಶ್ವರ, ಭಟ್ಕಳ ತಾಲೂಕ ರವರು ರಾಷ್ಟ್ರೀಯ ಹೆದ್ದಾರಿ-66ರ ಮೇಲೆ ನಡೆದುಕೊಂಡು ಮನೆಗೆ ಹೋಗುವಾಗ ಅಪರಿಚಿತ ಇಬ್ಬರು ವ್ಯಕ್ತಿಗಳು ಬೈಕನಲ್ಲಿ ಬಂದು ಕುತ್ತಿಗೆಯಲ್ಲಿ ಇದ್ದ ಅಂದಾಜು 20 ಗ್ರಾಂ ತೂಕದ ಬಂಗಾರದ ಮಾಂಗಲ್ಯದ ಸರವನ್ನು ಕಿತ್ತುಕೊಂಡು ಹೋದ ಬಗ್ಗೆ ಭಟ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಸದ್ರಿ ಪ್ರಕರಣದಲ್ಲಿ ಆರೋಪಿತರ ಪತ್ತೆಗೆ ಶ್ರೀ ನಾರಾಯಣ ಎಂ. ಐ.ಪಿ.ಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಉತ್ತರ ಕನ್ನಡ ಶ್ರೀ ಕೃಷ್ಣಮೂರ್ತಿ, ಜಿ. ಮಾನ್ಯ ಹೆಚ್ಚುವರಿ ಪೊಲೀಸ್ ಅಧಿಕ್ಷಕರು ಉತ್ತರ ಕನ್ನಡ, ಹಾಗೂ ಶ್ರೀ ಜಗದೀಶ ಎಂ. ಮಾನ್ಯ ಹೆಚ್ಚುವರಿ ಪೊಲೀಸ್ ಅಧಿಕ್ಷಕರು ಉತ್ತರ ಕನ್ನಡ ಮತ್ತು ಶ್ರೀ ಮಹೇಶ ಎಮ್, ಪೊಲೀಸ್ ಉಪಾಧಿಕ್ಷಕರು ಭಟ್ಕಳ ಉಪ ವಿಭಾಗ ರವರ ಮಾರ್ಗ ದರ್ಶನದಲ್ಲಿ ತನಿಖಾಧಿಕಾರಿಯಾದ ಶ್ರೀ ಸಂತೋಷ ಕಾಯ್ಕಿಣಿ ಪೊಲೀಸ್ ವೃತ್ತ ನಿರೀಕ್ಷಕರು, ಭಟ್ಕಳ ಗ್ರಾಮಾಂತರ ವೃತ್ತ ಶ್ರೀ ಹಣಮಂತ ಬಿರಾದಾರ ಪೊಲೀಸ್ ಉಪ ನಿರೀಕ್ಷಕರು ಮುರ್ಡೇಶ್ವರ ಪೊಲೀಸ್ ಠಾಣೆ, ಹಾಗೂ ಸಿಬ್ಬಂದಿ ರವರ ನೇತೃತ್ವದಲ್ಲಿ ತಂಡವನ್ನು ರಚನೆ ಮಾಡಿ ಮಹೇಶ ತಂದೆ ಪರಸಪ್ಪ ಕುರಿ ಸಾ|| ಸಂತಿಸಿಗ್ಲಿ, ಲಕ್ಷೇಶ್ವರ, ಗದಗ ಜಿಲ್ಲೆ ಹಾಗೂ ಮಣಿಕಂಠ ತಂದೆ ಹಣಮಂತ ಶಿರಹಟ್ಟಿ ಸಾ|| ಆನಂದ ನಗರ. ಕೃಷ್ಣಾ ಕಾಲೋನಿ ರವರನ್ನು ಬಂಧಿಸಿದ್ದಾರೆ.ಹುಬ್ಬಳ್ಳಿ ಇವರಿಬ್ಬರನ್ನು ಬಂಧಿತರಿಂದ ಕೃತ್ಯಕ್ಕೆ ಉಪಯೋಗಿಸಿದ 150000/- ರೂ ಬೆಲೆ ಬಾಳುವ ಬೈಕ,ಸರಗಳ್ಳತನ ಮಾಡಿದ್ದ 26 ಗ್ರಾಂ ತೂಕದ 220000 ರೂ ಬೆಲೆ ಬಾಳುವ ಬಂಗಾರದ ಮಾಂಗಲ್ಯ ಸರ ಹಾಗೂ ಎರಡು ಮೊಬೈಲ ಪೋನ್ ಗಳನ್ನು ಹೀಗೆ ಒಟ್ಟು ಅಂದಾಜು 3,80,000/- ರೂ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ .
ಈ ಕಾರ್ಯಾಚರಣೆಯಲ್ಲಿ, ಶ್ರೀ ನಾರಾಯಣ ಎಂ. ಐ.ಪಿ.ಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಉತ್ತರ ಕನ್ನಡ ಶ್ರೀ ಕೃಷ್ಣಮೂರ್ತಿ. ಜಿ. ಮಾನ್ಯ ಹೆಚ್ಚುವರಿ ಪೊಲೀಸ್ ಅಧಿಕ್ಷಕರು ಉತ್ತರ ಕನ್ನಡ, ಹಾಗೂ ಶ್ರೀ ಜಗದೀಶ ಎಂ. ಮಾನ್ಯ ಹೆಚ್ಚುವರಿ ಪೊಲೀಸ್ ಅಧಿಕ್ಷಕರು ಉತ್ತರ ಕನ್ನಡ ಮತ್ತು ಶ್ರೀ ಮಹೇಶ ಎಮ್, ಪೊಲೀಸ್ ಉಪಾಧಿಕ್ಷಕರು ಭಟ್ಕಳ ಉಪ ವಿಭಾಗ ರವರ ಮಾರ್ಗ ದರ್ಶನದಲ್ಲಿ ಶ್ರೀ ಸಂತೋಷ ಕಾಯ್ಕಿಣಿ, ಸಿ.ಪಿ.ಐ. ಭಟ್ಕಳ ಗ್ರಾಮಾಂತರ ವೃತ್ತ ಮತ್ತು ಶ್ರೀ ಹಣಮಂತ ಬಿರಾದಾರ ಪಿ.ಎಸ್.ಐ ಮುರ್ಡೇಶ್ವರ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ಠಾಣೆಯ ಸಿಬ್ಬಂದಿಗಳಾದ ಶ್ರೀ ಸಬ್ರಮಣ್ಯ ನಾಯ್ಕ,ಮಂಜುನಾಥ ಲಕ್ಕಾಪೂರ,ವಿಜಯ ನಾಯ್ಕ, ಮಂಜುನಾಥ ಮಡಿವಾಳ, ಯೊಗೇಶ ನಾಯ್ಕ ಮಂಕಿ ಪೊಲೀಸ್ ಠಾಣೆಯ ಕಿರಣಕುಮಾರ ರೆಡ್ಡಿ, ಅಣ್ಣಪ್ಪ ಕೋರಿ ಹಾಗೂ ಶಿರಸಿ ಉಪವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳಾದ, ಶ್ರೀ ಸಂತೋಷ ಕಮಟಗೇರಿ, ಹನಮಂತ ಬರ್ಗಿ, ಪ್ರಶಾಂತ ಪಾವಸ್ಥರ, ಶಿವಲಿಂಗ ತುಪ್ಪದ, ಮಾಲತೇಶ, ರಾಮಯ್ಯ, ಮಂಜು ಪೂಜಾರಿ, ಸದ್ದಾಂ ರವರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು,ಸದ್ರಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಮಾನ್ಯ ಪೊಲೀಸ್ ಅಧೀಕ್ಷಕರು ಪ್ರಸಂಶೆ ವ್ಯಕ್ತಪಡಿಸಿರುತ್ತಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…