Latest

ಸವಾಲಾದ ಒಳಚರಂಡಿ ವ್ಯವಸ್ಥೆಯ ನಿರ್ವಹಣೆ.

ಮ್ಯಾನ್ ಹೋಲ್ ನಿಂದ ಗಲೀಜು ಹೊರಗೆ ಹರಿದು ಬರುತ್ತಿದೆ. ರಸ್ತೆಯ ತುಂಬೆಲ್ಲ ಗಬ್ಬು ತ್ಯಾಜ್ಯ ಹರಡಿಕೊಂಡು ಒಂದು ವಾರ ಕಳೆದಿದೆ. ದುರಸ್ತಿ ಮಾಡುವಂತೆ ಮಹಾನಗರ ಪಾಲಿಕೆಗೆ ಮನವಿ ಕೊಟ್ಟರೂ ಕೂಡ ಸ್ಪಂದಿಸುತ್ತಿಲ್ಲ. ಹುಬ್ಬಳ್ಳಿಯ ಹೃದಯ ಭಾಗ ಜೆಸಿ ನಗರದ ಅಜಂತಾ ಹೋಟೆಲ್ ಪಕ್ಕದ ಆಟೋ ನಿಲ್ದಾಣದಲ್ಲಿದ್ದ ಆಟೋ ಚಾಲಕರೊಬ್ಬರ ಮಾತಿದು. ಇದು ಕೇವಲ ಅವರೊಬ್ಬರದೇ ಸಮಸ್ಯೆ ಅಲ್ಲ, ಅವಳಿ ನಗರದ ಬಹುತೇಕ ಭಾಗಗಳಲ್ಲಿ ಇಂತಹ ದೂರುಗಳು ಕೇಳಿ ಬರುತ್ತಿವೆ. ಅವಳಿ ನಗರದ ಹಲವಡೆ ಮ್ಯಾನ್ ಹೋಲ್ ಗಳು ಭರ್ತಿಯಾಗಿ, ತ್ಯಾಜ್ಯ ನೀರು ಹೊರಚಿಮ್ಮುವ ಸಮಸ್ಯೆ ಮಳೆಗಾಲದಲ್ಲಿ ಮಾತ್ರವಲ್ಲ, ಬೇಸಿಯಲ್ಲೂ ಸಹ ಕಾಣಬಹುದಾಗಿದೆ. ನಗರದ ಪ್ರತಿ ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವ ಜನಸಂಖ್ಯೆ ಪ್ರಮಾಣ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಲೇ ಇದೆ. ಆದರೆ ಹಲವಾರು ದಶಕಗಳ ಹಿಂದೆ ಆಳವಡಿಸಿದ ಒಳಚರಂಡಿ ಯು ಜಿ ಡಿ, ಅಳವಡಿಸಿದ ಕೊಳವೆಗಳು ಜನಸಂಖ್ಯೆಗೆ ಅನುಗುಣವಾಗಿ ಸಾಕಾಗುತ್ತಿಲ್ಲ. ಹೀಗಾಗಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ( ಕೆ ಯು ಡಬ್ಲ್ಯೂ ಎಸ್ ಡಿ ಬಿ) ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಒಳಚರಣಿ ವ್ಯವಸ್ಥೆ ದುರಸ್ತಿ ಮತ್ತು ನಿರ್ವಹಣೆ ಮಾಡುವುದು ದಿನ ಕಳೆದಂತೆ ಸವಾಲಾಗಿ ಪರಿಣಮಿಸುತ್ತಿದೆ. ಈ ನಿಟ್ಟಿನಲ್ಲಿ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ( ಕೆ ಯು ಡಬ್ಲ್ಯೂ ಎಸ್ ಡಿ ಬಿ) ಮೂಲಕ 40 ಕೋಟಿ ವೆಚ್ಚದಲ್ಲಿ ವಿವಿಧ ಕಡೆಗಳಲ್ಲಿ ಒಳಚರಂಡಿ ವ್ಯವಸ್ಥೆ ಹದಗೆಟ್ಟಿರುವ ಪ್ರದೇಶಗಳನ್ನು ಗುರುತಿಸಿ, ಚಿಕ್ಕದಾದ ಕೊಳವೆಗಳನ್ನು ಬದಲಾಯಿಸುವ ಕಾಮಗಾರಿ ಈಗಾಗಲೇ ಕೈಗೊಳ್ಳಲಾಗಿದೆ. ಹುಬ್ಬಳ್ಳಿ ನಗರದಲ್ಲಿ ಬಹುತೇಕ 99 ರಷ್ಟು ಪ್ರದೇಶವು ಒಳಚರಂಡಿ ವ್ಯವಸ್ಥೆಗೆ ಒಳಪಟ್ಟಿದೆ. ಹೊಸದಾಗಿ ತಲೆ ಎದ್ದಿರುವ ಕೆಲ ಬಡಾವಣೆಗಳಲ್ಲಿ ಮಾತ್ರ ಒಳಚರಂಡಿ ವ್ಯವಸ್ಥೆ ಇಲ್ಲ ಎನ್ನುವುದು ಹುಬ್ಬಳ್ಳಿ ಧಾರವಾಡ ಪಾಲಿಕೆಯ ಅಧಿಕಾರಿಗಳ ವಿವರಣೆ. ಧಾರವಾಡ ನಗರದಲ್ಲಿ ಒಳ ಚಲನ ವ್ಯವಸ್ಥೆ ಅಯೋಮಯವಾಗಿದೆ. ಜಿಲ್ಲಾ ಕೇಂದ್ರವಾದರೂ ಇದುವರೆಗೂ ಶೇಕಡ 40ರಷ್ಟು ಪ್ರದೇಶದಲ್ಲಿ ಮಾತ್ರ ಒಳಚರಂಡಿ ವ್ಯವಸ್ಥೆ ನಿರ್ಮಾಣವಾಗಿದೆ. ಶೇಕಡ 60 ರಷ್ಟು ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ ಮಾಡುವ ನಿರೀಕ್ಷೆ ಇದೆ. ವಿವಿಧ ಯೋಜನೆಗಳ ಅಡಿ ಯು ಜಿ ಡಿ ಕಾಮಗಾರಿ ಮಾಡುವುದಕ್ಕಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು ಸರ್ಕಾರದಿಂದ ಅನುದಾನ ಪಡೆಯುವುದಕ್ಕಾಗಿ ಪ್ರಸ್ತಾವ ಸಲ್ಲಿಸಿದೆ. ಅಮೃತ್ ಯೋಜನೆ 1 ಅನುದಾನದಲ್ಲಿ ಧಾರವಾಡದ ಕೆಲವು ಬಡಾವಣೆಗಳಲ್ಲಿ ಒಳಚರಂಡಿ ಕಾಮಗಾರಿ ಕೈಗೊಳ್ಳಲಾಗಿತ್ತು. ಆದರೆ ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಇರುವ ರೀತಿಯಲ್ಲಿ ಕಾಮಗಾರಿಯಾಗಿದೆ. ಒಳಚರಂಡಿ ವ್ಯವಸ್ಥೆ ಇರುವ ಪ್ರದೇಶಕ್ಕಿಂತಲೂ ವ್ಯವಸ್ಥೆ ಇಲ್ಲದ ಪ್ರದೇಶವೇ ಹೆಚ್ಚಿನ ಪ್ರಮಾಣದಲ್ಲಿದೆ.

ಹೊಸ ಕಾಮಗಾರಿ: ಧಾರವಾಡ ನಗರದ ವಾರ್ಡ್ ಸಂಖ್ಯೆ 1 ರಿಂದ 9 ರ ವ್ಯಾಪ್ತಿಯಲ್ಲಿ ಸಮಗ್ರವಾಗಿ ಒಳಚರಂಡಿ ವ್ಯವಸ್ಥೆ ಮಾಡುವುದಕ್ಕಾಗಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮೂಲಕ ಡಿಪಿಆರ್ ಸಿದ್ದಪಡಿಸಲಾಗಿದೆ. ಧಾರವಾಡದ ಶಾಸಕರಾದ ವಿನಯ್ ಕುಲಕರ್ಣಿ ರಾಜ್ಯ ಸರ್ಕಾರದಿಂದ 170 ಕೋಟಿ ಅನುದಾನ ಮಂಜೂರಾತಿ ಮಾಡಿಸಿದರು. ಹೊಸದಾಗಿ ಯು ಜಿ ಡಿ ಕಾಮಗಾರಿ ಆರಂಭಿಸುವುದಕ್ಕಾಗಿ ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ. ಎಂದು ಮಹಾನಗರ ಪಾಲಿಕೆಯ ಸೂಪರ್ ಹಿಟ್ ಎಂಜಿನಿಯರ್ ವಿಜಯಕುಮಾರ್ ಅವರು ತಿಳಿಸಿದರು. ಹುಬ್ಬಳ್ಳಿ ಹೊಸಕೋಟೆ ಮುಂಭಾಗ ಕಲ್ಲೂರ ಲೇಔಟ್ ಮಾರ್ಗದಲ್ಲಿರುವ ಮ್ಯಾನ್ ಹೋಲ್ ನಿಂದ ಹಲವು ತಿಂಗಳುಗಳಿಂದ ಹೊರಗೆ ಬಂದು ರಸ್ತೆಯ ಮೇಲೆ ಹರಿಯುತ್ತಿದೆ. ಧಾರವಾಡದಲ್ಲಿಯೂ ಹಂತ ಹಂತವಾಗಿ ಒಳಚರಂಡಿ ವ್ಯವಸ್ಥೆ ಬರಲಿದೆ. ಹುಬ್ಬಳ್ಳಿ ನಗರ ಸಂಪೂರ್ಣ ವ್ಯವಸ್ಥೆಯಲ್ಲಿದೆ. ಆದರೆ ಕೆಲವು ಕಡೆ ಕೊಳವೆ ಬದಲಾಯಿಸುವ ಕೆಲಸ ಮಾಡಲಾಗುತ್ತಿದೆ ವಿಜಯಕುಮಾರ್ ಆರ್ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸೂಪರಿಡೆಂಟ್ ಎಂಜಿನಿಯರ. ಜನರಿಂದ ವ್ಯಕ್ತವಾದ ಆಕ್ರೋಶ ಒಳ ಚರಂಡಿ ಭರ್ತಿಯಾಗಿ ಮ್ಯಾನ್ ಹೋನ್ ಮೂಲಕ ರಸ್ತೆಯಲ್ಲಿ ಗಲೀಜು ಹೊರ ಚಿಮ್ಮುವ ಸಮಸ್ಯೆ ಕೆಲವು ಕಡೆಗಳಲ್ಲಿ ಶಾಶ್ವತ ಎನ್ನುವಂತಾಗಿದೆ. ಹುಬ್ಬಳ್ಳಿಯ ಹೆಗ್ಗೇರಿ ಮಾರುತಿ ನಗರದ ಮೂಲಕ ಆರ್ ಎನ್ ಶೆಟ್ಟಿ ರಸ್ತೆ ಸಂಪರ್ಕಿಸುವ ಮಾರ್ಗದಲ್ಲಿ ಮ್ಯಾನ್ ಹೋಲ್ ಬಾಯ್ತೆರೆದು ಸಮಸ್ತ ನಿರ್ಮಾಣವಾಗುವುದು ಪುನರಾವರ್ತನೆ ಆಗುತ್ತಲೇ ಇದೆ. ಆಕ್ರೋಶಗೊಂಡ ಜನರು ರಸ್ತೆ ಸಂಚಾರವನ್ನು ತಡೆದು ಈಚೆಗೆ ಪ್ರತಿಭಟನೆ ನಡೆಸಿದರು.

ವರದಿ: ಶಿವರಾಜ್ ಪಿ.ಆರ್.

ಭ್ರಷ್ಟರ ಬೇಟೆ

Recent Posts

ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ಗಲಾಟೆ – ಕಾಂಗ್ರೆಸ್ ಮುಖಂಡ ಧನಂಜಯ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು ನಗರದ ವಿದ್ಯಾರಣ್ಯಪುರದ ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಧನಂಜಯ್ ಸೇರಿದಂತೆ ಕೆಲವರ ವಿರುದ್ಧ…

5 hours ago

ಮಡಿಕೇರಿ ನಗರದಲ್ಲಿ ಆರ್ಥಿಕ ಸಂಕಷ್ಟದಿಂದ ವ್ಯಕ್ತಿಯೊಬ್ಬರ ಆತ್ಮಹತ್ಯೆ

ಮಡಿಕೇರಿ: ಆರ್ಥಿಕ ಬಿಕ್ಕಟ್ಟಿನಿಂದ ನಲುಗಿದ ವ್ಯಕ್ತಿಯೊಬ್ಬರು ಗುಂಡು ಹೊಡೆದು ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಘಟನೆ ಮಡಿಕೇರಿ ಕೋಟೆ…

5 hours ago

“ಪತ್ನಿಯ ಕಿರುಕುಳಕ್ಕೆ ಬೇಸತ್ತು ಯುವಕ ಆತ್ಮಹತ್ಯೆ – ಡೆತ್ ನೋಟ್‌ನಲ್ಲಿ ಸತ್ಯ ಬಹಿರಂಗ

ಬೆಳಗಾವಿ: ಪತ್ನಿಯ ನಿರಂತರ ಕಿರುಕುಳದಿಂದ ಬೇಸತ್ತ 33 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಅನಗೋಳದ ದುರ್ಗಾ…

5 hours ago

ಬಾಲಮಂದಿರದಿಂದ ನಾಪತ್ತೆಯಾಗಿದ್ದ ಐದು ಬಾಲಕಿಯರು ಪತ್ತೆ: ವಾರ್ಡನ್ ಕಿರುಕುಳಕ್ಕೆ ತೀವ್ರ ಆರೋಪ”

ಚಿಕ್ಕಬಳ್ಳಾಪುರ, ಮೇ 30: ತಿಪ್ಪೇನಹಳ್ಳಿಯ ಸಮೀಪದಲ್ಲಿರುವ ಮಕ್ಕಳ ಆಸರೆ ಬಾಲಮಂದಿರದಿಂದ ನಾಪತ್ತೆಯಾಗಿದ್ದ ಐದು ಬಾಲಕಿಯರು ಇದೀಗ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ವಾರ್ಡನ್…

6 hours ago

ಐಪಿಎಲ್ ಟಿಕೆಟ್ ಕಳ್ಳ ವಹಿವಾಟು – ಇಬ್ಬರು ಪೊಲೀಸ್ ಕಾನ್ಸ್ಟೇಬಲ್‌ಗಳು ಅಮಾನತು

ಬೆಂಗಳೂರು ನಗರದಲ್ಲಿ ಐಪಿಎಲ್ ಪಂದ್ಯಕ್ಕೆ ಸಂಬಂಧಿಸಿದ ಟಿಕೆಟ್‌ಗಳ ಅಕ್ರಮ ಮಾರಾಟ ಪ್ರಕರಣಕ್ಕೆ ತೊಡಗಿರುವ ಆರೋಪದ ಮೇಲೆ ಇಬ್ಬರು ಪೊಲೀಸ್ ಕಾನ್ಸ್ಟೇಬಲ್‌ಗಳನ್ನು…

7 hours ago

ವಿಜಿಲೆನ್ಸ್ ದಾಳಿಯಿಂದ ಗಾಬರಿಗೊಂಡ ಎಂಜಿನಿಯರ್: 500 ರೂ. ಬಂಡಲ್​ಗಳನ್ನು ಕಿಟಕಿಯಿಂದ ಹೊರ ಎಸೆದ ಘಟನೆ

ಭುವನೇಶ್ವರ: ಒಡಿಶಾದಲ್ಲಿ ವಿಜಿಲೆನ್ಸ್ (ವಿಚಕ್ಷಣ) ಅಧಿಕಾರಿಗಳ ದಾಳಿಯಿಂದ ಭಯಭೀತರಾದ ಸರ್ಕಾರಿ ಎಂಜಿನಿಯರ್ ಒಬ್ಬರು ತಮ್ಮ ಮನೆಯಿಂದ ನಗದು ಬಂಡಲ್‌ಗಳನ್ನು ಕಿಟಕಿ…

9 hours ago